ಕರ್ನಾಟಕದಲ್ಲಿ ನಿಲ್ಲಿ ರಾಹುಲ್, ಒಂದು ಕೈ ನೋಡ್ತೀವಿ; ಟ್ವೀಟ್ ಟ್ರೆಂಡ್
Team Udayavani, Mar 19, 2019, 7:15 AM IST
ಬೆಂಗಳೂರು: ಲೋಕಸಭಾ ಚುನಾವಣಾ ಅಖಾಡ ಸಜ್ಜಾಗತೊಡಗಿದ್ದು, ಏತನ್ಮಧ್ಯೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಕಣಕ್ಕಿಳಿಯಲಿ ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ಒತ್ತಾಯಿಸುತ್ತೇನೆ ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗೆ ತಿರುಗೇಟು ನೀಡಿರುವ ಯುವ ಬ್ರಿಗೇಡ್ ಮುಖಂಡ ಚಕ್ರವರ್ತಿ ಸೂಲಿಬೆಲೆ “ಬನ್ನಿ ರಾಹುಲ್ ಕರ್ನಾಟಕದಲ್ಲಿ ನಿಲ್ಲಿ..ಒಂದು ಕೈ ನೋಡ್ತೀವಿ ಎಂಬ ಅಭಿಯಾನ ಆರಂಭಿಸಿದ್ದು, ಇದು ಟ್ವೀಟರ್ ನಲ್ಲಿ ಟ್ರೆಂಡ್ ಆಗಿದೆ!
#ಒಂದು ಕೈ ನೋಡ್ತೀವಿ,#WeWillHandleHim ಹ್ಯಾಶ್ ಟ್ಯಾಗ್ ಟ್ರೆಂಡ್ ಆಗತೊಡಗಿದೆ. ಬನ್ನಿ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಸ್ಪರ್ಧಿಸಿ. ಆ ಮೂಲಕವಾದರೂ ಇಂದಿರಾ ಗಾಂಧಿ, ಸೋನಿಯಾಗಾಂಧಿ ಅವರನ್ನು ಗೆಲ್ಲಿಸಿದ ತಪ್ಪನ್ನು ಸರಿಪಡಿಸಲು ಅವಕಾಶ ನೀಡಿ. ನೀವು ಕ್ಷೇತ್ರವನ್ನು ಆಯ್ದುಕೊಳ್ಳಿ, ಸೋಲಿಸುವುದು ನಮ್ಮ ಕೆಲಸ ಎಂದು ಸೂಲಿಬೆಲೆ ಟ್ವೀಟ್ ಮೂಲಕ ಆಹ್ವಾನ ನೀಡಿದ್ದರು.
@INCKarnataka requesting @RahulGandhi to contest from Karnataka. Even we want him to. We would wash the black spot of sending Indira and Sonia to Loksabha. This is our challenge. Let him select his constituency and we will defeat him!#WeWillHandleHim#ಒಂದ್_ಕೈ_ನೋಡ್ತೀವಿ pic.twitter.com/w2ULV2ROzW
— Chakravarty Sulibele (@astitvam) March 19, 2019
ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಚೌಕಿದಾರ್ ಎಂಬ ಟೀಕೆಯನ್ನು ಟ್ವೀಟರ್ ಖಾತೆಯಲ್ಲಿ ಹೆಸರನ್ನು ಬದಲಿಸಿಕೊಳ್ಳುವ ಮೂಲಕ ಅಭಿಯಾನ ಶುರು ಮಾಡಿದ್ದರು. ಅದಕ್ಕೆ ಕೇಂದ್ರದ ಸಚಿವರು ಕೂಡಾ ನಾನೂ ಚೌಕಿದಾರ್ ಎಂಬುದಾಗಿ ಸಾಥ್ ನೀಡಿದ್ದರು. ಇದೀಗ #ಒಂದು ಕೈ ನೋಡ್ತೀವಿ ಎಂಬ ಅಭಿಯಾನವನ್ನು ಕೂಡಾ ಹಲವರು ಅನುಸರಿಸಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ