ವಿಟಿಯು ವಿಭಜನೆ ಅಗತ್ಯ ಏನಿದೆ?
Team Udayavani, Feb 14, 2019, 1:24 AM IST
ವಿಧಾನಪರಿಷತ್: ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಹಣಕಾಸು, ನಗರಾಭಿವೃದ್ಧಿ , ಉನ್ನತ ಶಿಕ್ಷಣ ಸೇರಿ ಎಲ್ಲ ಪ್ರಮುಖ ಖಾತೆಗಳು ದಕ್ಷಿಣ ಕರ್ನಾಟಕಕ್ಕೆ.ಸಕ್ಕರೆ, ಈರುಳ್ಳಿ, ಬೆಳ್ಳುಳ್ಳಿ ಎಲ್ಲಾ ಉತ್ತರ ಕರ್ನಾಟಕಕ್ಕೆ. ಯಾಕೆ ಹೀಗೆ? ಇದಕ್ಕೆ ಜನರಾದರೂ ಏನಂತಾರೆ? ಸ್ವಲ್ಪ ಯೋಚನೆ ಮಾಡಿ…- ಸ್ವತಃ ಕಾಂಗ್ರೆಸ್ ಸದಸ್ಯ ಎಸ್.ಆರ್. ಪಾಟೀಲ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರೀತಿ ಇದು.
ಬುಧವಾರ ಶೂನ್ಯವೇಳೆಯಲ್ಲಿ ಬಿಜೆಪಿ ಸದಸ್ಯ ಮಹಾಂತೇಶ ಕವಟಗಿಮಠ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ವಿಭಜನೆ ಬಗ್ಗೆ ಪ್ರಸ್ತಾಪಿಸಿದರು. ಆಗ ಇದಕ್ಕೆ ಪೂರಕವಾಗಿ ಮಾತನಾಡಿದ ಎಸ್.ಆರ್.ಪಾಟೀಲ್, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಅದನ್ನು ವಿಭಜಿಸುವ ಅವಶ್ಯಕತೆ ಏನಿದೆ? ಇದು ಅತ್ಯಂತ ಸೂಕ್ಷ್ಮವಾದ ವಿಷಯವಾಗಿದೆ. ಈಗಾಗಲೇ ಪ್ರಮುಖ ಖಾತೆಗಳೆಲ್ಲವೂ ದಕ್ಷಿಣ ಕರ್ನಾಟಕದವರ ಪಾಲಾಗಿವೆ. ಉತ್ತರ ಕರ್ನಾಟಕಕ್ಕೆ ಬರೀ ಸಕ್ಕರೆ,ಈರುಳ್ಳಿ, ಬೆಳ್ಳುಳ್ಳಿಯಂತಹ ಖಾತೆಗಳು ಉಳಿದಿವೆ. ಈಗ ವಿವಿಯನ್ನೂ ಆ ಕಡೆ ತೆಗೆದುಕೊಂಡು ಹೋಗುತ್ತಿದ್ದೀರಿ. ಜನ ಏನಂತಾರೆ ಸ್ವಲ್ಪ ಯೋಚಿಸಿ ಎಂದು ಬೇಸರ ವ್ಯಕ್ತಪಡಿಸಿದರು.
ಇದಕ್ಕೆ ಬಿಜೆಪಿ ಸದಸ್ಯ ಅರುಣ ಶಹಾಪೂರ ಮತ್ತಿತರ ಸದಸ್ಯರು ಕೂಡ ದನಿಗೂಡಿಸಿದರು. ಇದು ಅತ್ಯಂತ ಗಂಭೀರ ಪರಿಣಾಮ ಬೀರಲಿದ್ದು, ಬೆಳಗಾವಿ ಮತ್ತು ಉತ್ತರ ಕರ್ನಾಟಕದಲ್ಲಿ ಕಳೆದ ಮೂರು ದಿನಗಳಿಂದ ವಿದ್ಯಾರ್ಥಿಗಳು, ಉಪನ್ಯಾಸಕರು, ಸಾರ್ವಜನಿಕರು ಈ ವಿಭಜನೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಕವಟಗಿಮಠ ಸಭೆಯ ಗಮನಸೆಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…