ನನ್ನ ರಾಜೀನಾಮೆ ಕೇಳಲು ಸಿದ್ದರಾಮಯ್ಯ ಗೆ ಯಾವ ನೈತಿಕತೆ ಇದೆ?: ಸಿಎಂ ಬೊಮ್ಮಾಯಿ
Team Udayavani, Jul 5, 2022, 4:18 PM IST
ಬೆಂಗಳೂರು: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ಸಂಬಂಧ ರಾಜೀನಾಮೆ ನೀಡಬೇಕೆಂದು ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಈ ಮಾನದಂಡದಲ್ಲಿ ಹೇಳುವುದಾದರೆ ಸಿದ್ದರಾಮಯ್ಯ ಹತ್ತು ಸಲ ರಾಜೀನಾಮೆ ಕೊಡಬೇಕಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.
ಸುದ್ದಗಾರರೊಂದಿಗೆ ಮಾತನಾಡಿದ ಅವರು, ಅವರು ಹಿಂದೆ ಅಧಿಕಾರದಲ್ಲಿದ್ದಾಗ ಇದೇ ಪೊಲೀಸ್ ನೇಮಕಾತಿ ವಿಚಾರದಲ್ಲಿ ಗುಲ್ಬರ್ಗಾದಲ್ಲಿ ಪ್ರಶ್ನೆಪತ್ರಿಕೆ ಲೀಕ್ ಆಗಿತ್ತು. ಪ್ರಶ್ನೆಪತ್ರಿಕೆ ಸಿದ್ದ ಮಾಡಿದ್ದ ಡಿಐಜಿ ಮನೆಯಿಂದಲೇ ಲೀಕ್ ಆಗಿತ್ತು. ಅದು ತನಿಖೆಯಾಗಿ ಆ ಡಿಐಜಿಯನ್ನು ಆರೋಪಿ ಎಂದು ಹೆಸರಿಸಲಾಗಿತ್ತು. ಮುಂದೆ ಈ ಪ್ರಕರಣ ಏನಾಯಿತು? ಅವರು ಯಾವ ಕ್ರಮ ಕೈಗೊಂಡಿದ್ದರು? ಆ ಡಿಐಜಿಯನ್ನು ಅಮಾನತು ಮಾಡಿದ್ದರಾ? ಬಂಧಿಸಿದ್ದರೇ? ನನ್ನ ರಾಜೀನಾಮೆ ಕೇಳಲು ಸಿದ್ದರಾಮಯ್ಯಗೆ ಯಾವ ನೈತಿಕತೆಯಿದೆ ಎಂದರು.
ಇದನ್ನೂ ಓದಿ:ಭಾರತದ ಸಂವಿಧಾನ ತುಂಬಾ ಸುಂದರ…ಆದರೆ…ಕೇರಳ ಸಚಿವ ಸಾಜಿ ಹೇಳಿದ್ದೇನು?
ಸಚಿವ ಆರ್.ಅಶೋಕ್ ಮಾತನಾಡಿ, ಪಿಎಸ್ ಐ ಅಕ್ರಮ ನೇಮಕ ಕುರಿತು ನಿನ್ನೆಯೇ ಸಿಎಂ ಸ್ಪಷ್ಟವಾಗಿ ನಿಲುವು ತೆಗೆದುಕೊಂಡಿದ್ದಾರೆ. ಹಿಂದೆ ಕೂಡ ಅನೇಕ ಸರ್ಕಾರದ ಮೇಲೆ ಆಪಾದನೆ ಬಂದಿತ್ತು. ಆದರೆ ಅದನ್ನು ಮುಚ್ಚಿ ಹಾಕುತ್ತಿದ್ದರು. ನಮ್ಮ ಸಿಎಂ ಎಲ್ಲರಿಗೂ ಸ್ವಾತಂತ್ರ್ಯ ನೀಡಿದ ಕಾರಣ ಬಂಧನವಾಗಿದೆ. ಬೇರೆ ಸರ್ಕಾರದ ರೀತಿ ಇದ್ದಿದ್ದರೆ ಇದು ಹೊರಗೆ ಬರುತ್ತಿರಲಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ