ಪೇಜಾವರ ಶ್ರೀಗಳಿಗೆ ವಾಟ್ಸ್ಆ್ಯಪ್ ಬೆದರಿಕೆ
Team Udayavani, Jul 7, 2019, 3:00 AM IST
ಉಡುಪಿ: ಲಿಂಗಾಯತ, ವೀರಶೈವ ಧರ್ಮ ಹಿಂದೂ ಧರ್ಮದ ಅಂಗ ಎಂದು ಹೇಳಿರುವ ಪೇಜಾವರ ಶ್ರೀಗಳಿಗೆ ವಾಟ್ಸ್ಆ್ಯಪ್ನಲ್ಲಿ ಗಂಗಾವತಿ ಬಸವ ಸಮಿತಿ ಎಂಬ ಹೆಸರಿನಲ್ಲಿ ಬೆದರಿಕೆ ಬಂದಿದೆ. ಈ ವಿಚಾರದಲ್ಲಿ ನೀವು ತಲೆಹಾಕಬಾರದು ಎಂದು ವಾಟ್ಸ್ಆ್ಯಪ್ನಲ್ಲಿ ಪೇಜಾವರ ಶ್ರೀಗಳಿಗೆ ಬೆದರಿಕೆ ಸಂದೇಶ ರವಾನಿಸಿದ್ದಾರೆ.
ಪೇಜಾವರ ಶ್ರೀಗಳು ಹೇಳಿಕೆ ನೀಡಿರುವುದನ್ನು ವಿರೋಧಿಸಿರುವ ಈ ಸಂದೇಶದಲ್ಲಿ ಬಸವ ಸಮಿತಿಯವರು ತಮ್ಮ ಅಸ್ತಿತ್ವಕ್ಕಾಗಿ ಹೋರಾಡುತ್ತಿದ್ದಾರೆ. ನೀವು ಈ ಬಗ್ಗೆ ಮಾತನಾಡಕೂಡದು ಎಂದು ಎಚ್ಚರಿಕೆ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಸಂದೇಶಗಳು ಸಾಮಾನ್ಯ, ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಆದ್ದರಿಂದ ಪೊಲೀಸರಿಗೆ ದೂರು ನೀಡಿಲ್ಲ ಎಂದು ಪೇಜಾವರ ಮಠದ ಮೂಲಗಳು ತಿಳಿಸಿವೆ.