Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

ಘೋರ ಅನ್ಯಾಯ... ಬಿಜೆಪಿ ಇದರ ವಿರುದ್ಧ ದೊಡ್ಡಮಟ್ಟದ ಹೋರಾಟ ಮಾಡುತ್ತದೆ...

Team Udayavani, Apr 20, 2024, 9:40 PM IST

prahlad-joshi

ಧಾರವಾಡ : ನೇಹಾ ಹಿರೇಮಠ್ ಹತ್ಯೆ ಪ್ರಕರಣವು ಲವ್ ಜಿಹಾದ್ ಅಲ್ಲ ಎಂಬುದಾಗಿ ಇವರೇ ಏಕೆ ತೀರ್ಮಾನ ಮಾಡುತ್ತಾರೆ? ನೇಹಾಳ ತಂದೆ ನಿರಂಜನ್ ಅವರ ಮಾತನ್ನು ಕೇಳುವುರದ ಜತೆಗೆ ಅವರ ಅನುಮಾನಗಳನ್ನು ಪರಿಗಣಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಯಾವುದೇ ಕಾರಣಕ್ಕೂ ಈ ವಿಷಯವನ್ನು ರಾಜಕೀಯಕ್ಕೆ ಬಳಸಿಕೊಂಡಿಲ್ಲ.ಸರಿಯಾಗಿ ಇದರ ಬಗ್ಗೆ ತನಿಖೆಯಾಗಬೇಕು ಅನ್ನುತ್ತಿದ್ದೇವೆ ಅಷ್ಟೇ. ಇದು ಸರಿಯಾಗಿ ತನಿಖೆ ಆಗಬೇಕು. ಇಲ್ಲದೇ ಹೋದರೆ ಬಿಜೆಪಿ ಇದರ ವಿರುದ್ಧ ದೊಡ್ಡಮಟ್ಟದ ಹೋರಾಟ ಮಾಡುತ್ತದೆ ಎಂದು ಎಚ್ಚರಿಸಿದರು.

ಮುಸಲ್ಮಾನರು ಅಪರಾಧ ಮಾಡಿದರೆ ಅದು ಅಪರಾಧ ಅಲ್ಲವೇ? ನೇಹಾಳ ತಂದೆಯೇ ಪಾಲಿಕೆಯ ಕಾಂಗ್ರೆಸ್ ಸದಸ್ಯರಾಗಿದ್ದಾರೆ. ಈ ಸರಕಾರ ಸಹಜ ಪ್ರತಿಕ್ರಿಯೆ ನೀಡುವುದನ್ನು ಬಂದ್ ಮಾಡಬೇಕು. ಈ ಬಗ್ಗೆ ಗಂಭೀರವಾಗಿ ತನಿಖೆ ನಡೆಸಬೇಕು. ನೇಹಾಳ ತಂದೆ ಇದರ ಹಿಂದೆ ಬಹಳ ಜನ ಇದ್ದು, ಆಕೆಯನ್ನು ಮತಾಂತರ ಮಾಡುವ ಪ್ರಯತ್ನ ನಡೆದಿತ್ತು ಎಂಬುದಾಗಿ ಹೇಳಿದ್ದಾರೆ. ಹೀಗಾಗಿ ಇದರ ಬಗ್ಗೆ ತನಿಖೆ ಮಾಡಬೇಕು ಎಂದರು.

ಇದು ಕಾಂಗ್ರೆಸ್ ಪಕ್ಷದ ತುಷ್ಟೀಕರಣ ನೀತಿಯ ಒಂದು ಪರಿಣಾಮವಷ್ಟೇ. ಈ ಹಿಂದೆ ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಸ್ಪೋಟಗೊಂಡಾಗ ಸಿಲಿಂಡರ್ ಬ್ಲಾಸ್ಟ ಎಂದಿದ್ದರು. ಉಡುಪಿಯ ಕಾಲೇಜು ಶೌಚಾಲಯದಲ್ಲಿ ಕೆಮರಾ ಇಟ್ಟ ವಿಚಾರಕ್ಕೆ ಇದು ಮಕ್ಕಳ ಆಟ. ಶಿವಮೊಗ್ಗದಲ್ಲಿ ಈದ್ ಮಿಲಾದ್‌ನಲ್ಲಿ ದೊಡ್ಡ ಖಡ್ಗ ಇಟ್ಟಿದ್ದಕ್ಕೆ ಸ್ಥಳೀಯ ಕಾರಣ ಎಂಬುದಾಗಿ ಸಹಜ ಉತ್ತರವನ್ನು ಸಿಎಂ ಕೊಟ್ಟಿದ್ದರು. ಪಾಕಿಸ್ಥಾನ್ ಜಿಂದಾಬಾದ್ ಕೂಗಿದಾಗ ಹಾಗೇ ಯಾರೂ ಕೂಗೇ ಇಲ್ಲ ಎಂದು ಪ್ರತಿಪಾದಿಸಿದ್ದರು. ಭಯೋತ್ಪಾದಕ ಚಟುವಟಿಕೆ ಮಾಡಿದವರನ್ನು ನಮ್ಮ ಬ್ರದರ್ಸ್ ಎಂದವರು ಹನುಮಾನ್ ಚಾಲೀಸ್ ಪ್ರಕರಣ ಹಾಗೂ ಜೈ ಶ್ರೀರಾಮ ಎಂದವರನ್ನು ಬೆದರಿಸಿದ್ದರು. ಆದರೂ ಯಾವುದೇ ಕ್ರಮ ಸರಕಾರದಿಂದ ಆಗಲಿಲ್ಲ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸರಿ ಇಲ್ಲ. ಮತ ಬ್ಯಾಂಕ್ ರಾಜಕಾರಣ ನಡೆಯುತ್ತಿದೆ. ನೇಹಾ ವಿಷಯದಲ್ಲೂ ಇದೇ ರೀತಿಯ ಹೇಳಿಕೆ ಕೊಟ್ಟಿದ್ದಾರೆ ಎಂದರು.

ನೇಹಾ ಹತ್ಯೆ ಸಂಬಂಧ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಉಡಾಫೆ ಉತ್ತರ ನೀಡಿದ್ದಾರೆ. ಇಂತಹ ಪ್ರಕರಣ ನಿಮ್ಮ ಮನೆ ಹಾಗೂ ಇನ್ನಿತರ ಸಚಿವರ ಮನೆಯಲ್ಲಿ ನಡೆದಿದ್ದರೆ ಸುಮ್ಮನಿರುತ್ತಿದ್ದಿರಾ?ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಹಾಗೂ ಗೃಹ ಸಚಿವರು ಬಹಳ ಸಹಜವಾಗಿ ಮಾತನಾಡಿದ್ದಾರೆ. ಯಾವುದೇ ಜವಾಬ್ದಾರಿ ತೆಗೆದುಕೊಳ್ಳದೇ ಮಾತನಾಡಿದ್ದಾರೆ. ಆ ಮೂಲಕ ಇವರು ನೇಹಾ ಕುಟುಂಬ ಮತ್ತು ಸಮಾಜಕ್ಕೆ ಘೋರ ಅನ್ಯಾಯ ಮಾಡಿದ್ದಾರೆ.

ಟಾಪ್ ನ್ಯೂಸ್

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.