ನಮ್ಮ ಲೆಕ್ಕ ಕೇಳಲು ಅಮಿತ್ ಶಾ ಯಾರು?;ಸಿಎಂ ಕಿಡಿ
Team Udayavani, Jan 11, 2018, 12:19 PM IST
ಮೈಸೂರು: ಕೇಂದ್ರ ಸರಕಾರ ನೀಡಿದ ಅನುದಾನವನ್ನು ರಾಜ್ಯ ಸರ್ಕಾರ ಭ್ರಷ್ಟಾಚಾರಕ್ಕೆ ಬಳಸಿಕೊಂಡಿದೆ ಎಂದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಿರುಗೇಟು ನೀಡಿದ್ದು ‘ನಮ್ಮ ಲೆಕ್ಕ ಕೇಳಲು ಶಾ ಯಾರು’ ಎಂದು ಪ್ರಶ್ನಿಸಿದ್ದಾರೆ.
ಎಚ್ಡಿ ಕೋಟೆಯ ಸರಗೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಕೇಂದ್ರ ಸರಕಾರ ಕಾನೂನಾತ್ಮಕವಾಗಿ ನಮಗೆ ನೀಡಬೇಕಾಗಿದ್ದ ನಮ್ಮ ತೆರಿಗೆ ಪಾಲನ್ನು ಕೊಟ್ಟಿದ್ದಾರೆ. ನಾವು ಖರ್ಚು ಮಾಡಿದ ಲೆಕ್ಕವನ್ನು ರಾಜ್ಯದಜನರಿಗೆ ನೀಡಬೇಕೆ ಹೊರತು ಶಾಗೆ ಅಲ್ಲ. ಅದನ್ನು ಕೇಳಲು ಅವರು ಯಾರು’ ಎಂದರು.
‘ಈ ಬಾರಿ ನಮಗೆ ಕೇಂದ್ರದಿಂದ ಬರಬೇಕಾಗಿದ್ದ ಅನುದಾನದಲ್ಲಿ ಕಡಿತವಾಗಿದೆ ಎಂದ ಸಿಎಂ ಅಮಿತ್ ಶಾ ಕಾಮನ್ ಸೆನ್ಸ್ ಇಟ್ಟುಕೊಂಡು ಮಾತಾಡಲಿ.ಎನೇನೋ ಮಾತನಾಡಿ ಜನರ ದಿಕ್ಕು ತಪ್ಪಿಸುವುದು ಬೇಡ.ಬಹಿರಂಗವಾಗಿ ಒಂದೇ ವೇದಿಕೆಯಲ್ಲಿ ಬನ್ನಿ ಚರ್ಚೆ ಮಾಡೋಣ’ ಎಂದು ಸವಾಲು ಹಾಕಿದರು.
‘ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಮೇಲೆ 14ನೇ ಹಣಕಾಸು ಆಯೋಗದ ಮೂಲಕ ಕರ್ನಾಟಕಕ್ಕೆ 2,19,506 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಅಲ್ಲದೆ, ಇತರೆ ಯೋಜನೆಗಳ ಮೂಲಕ ಹೆಚ್ಚುವರಿಯಾಗಿ ನೀಡಿರುವ 79 ಸಾವಿರ ಕೋಟಿ ರೂ. ಸೇರಿ ಒಟ್ಟಾರೆ 3 ಲಕ್ಷ ಕೋಟಿ ರೂ. ಬಂದಿದೆ. ಆದರೆ, ಈ ಹಣದಲ್ಲಿ ಬಹುಪಾಲನ್ನು ಭ್ರಷ್ಟಾಚಾರಕ್ಕೆ ಬಳಸಿಕೊಂಡ ರಾಜ್ಯ ಸರ್ಕಾರ ಜನರಿಗೆ ಯೋಜನೆಗಳನ್ನು ತಲುಪಿಸಲಿಲ್ಲ’ ಎಂದು ಚಿತ್ರದುರ್ಗದಲ್ಲಿ ಶಾ ಗಂಭೀರ ಆರೋಪ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ