ದ್ವಾರಕಾನಾಥ್ ಗುರೂಜಿ ಯಾರು?
Team Udayavani, Aug 4, 2017, 8:20 AM IST
ಬೆಂಗಳೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಜತೆಗೆ ಆದಾಯ ತೆರಿಗೆ ದಾಳಿಗೆ ಒಳಗಾಗಿರುವ ದ್ವಾರಕಾನಾಥ್ ಯಾರು ಎಂಬುದು ಬಹುಚರ್ಚಿತ ವಿಷಯವಾಗಿದೆ.
ಸಚಿವರ ಮನೆ ಮೇಲೆ ಐಟಿ ದಾಳಿ ನಡೆಸಿದ ಬಳಿಕ ಅವರ ಸಂಬಂಧಿಕರು, ಆಪ್ತರು, ಕಚೇರಿಗಳ ಮೇಲೆ ದಾಳಿ ನಡೆಸುವುದು ಸಾಮಾನ್ಯ. ಆದರೆ ಸಚಿವ ಡಿ.ಕೆ. ಶಿವಕುಮಾರ್ ಮನೆ ಮೇಲೆ ದಾಳಿ ನಡೆಸಿದ ಬಳಿಕ ಕೇಳಿ ಬಂದ ಮತ್ತೂಂದು ಹೆಸರು ಜೋತಿಷಿ ದ್ವಾರಕಾನಾಥ್. ದ್ವಾರಕಾನಾಥ್ಗೂ ಡಿ.ಕೆ. ಶಿವಕುಮಾರ್ಗೂ ಏನು ಸಂಬಂಧ? ಅವರು ಅಷ್ಟೊಂದು ಪ್ರಭಾವಿಯಾ? ಎಂಬಿತ್ಯಾದಿ ಪ್ರಶ್ನೆಗಳು ಮೂಡಿವೆ.
ರಾಜ್ಯದ ರಾಜಕೀಯ ನಾಯಕರು, ಉದ್ಯಮಿ ಗಳು, ಬಾಲಿವುಡ್ ಸಿನೆಮಾ ನಟ-ನಟಿಯರ ಪಾಲಿಗೆ ಗುರೂಜಿ ಆಗಿರುವ ದ್ವಾರಕಾನಾಥ್, ಆರ್.ಟಿ. ನಗರದ “ಪವರ್ಫುಲ್’ ಎಂದೇ ಖ್ಯಾತಿ ಪಡೆದವರು.
ಜೋತಿಷಿ ದ್ವಾರಕಾನಾಥ್ಗೂ ಡಿ.ಕೆ. ಶಿವಕುಮಾರ್ಗೂ ದಶಕಗಳ ನಂಟು. ಎಸ್ಜೆಆರ್ಸಿ ಕಾಲೇಜಿನಲ್ಲಿ ಶಿವಕುಮಾರ್ ವಿದ್ಯಾರ್ಥಿ ನಾಯಕ ರಾಗಿ¨ªಾಗಲೇ ದ್ವಾರಕಾನಾಥ್ ಪರಿಚಯವಾಗಿತ್ತು. ಮೊದಲ ಶಾಸಕರಾದ ಶಿವಕುಮಾರ್ ಅವರನ್ನು ದಿಲ್ಲಿ ಪ್ರಭಾವ ಬಳಸಿ ಬಂಗಾರಪ್ಪಸಂಪುಟದಲ್ಲಿ ಬಂದೀಖಾನೆ ಸಚಿವರನ್ನಾಗಿ ನೇಮಿಸುವಲ್ಲೂ ಮಹತ್ವದ ಪಾತ್ರ ವಹಿಸಿದ್ದರು ಎಂದು ಹೇಳಲಾಗಿದೆ. ಶಿವಕುಮಾರ್ ಜತೆ ವ್ಯಾವಹಾರಿಕ ನಂಟು ಇತ್ತು ಎನ್ನಲಾಗಿದೆ.
ತಂದೆಯೂ ಜೋತಿಷಿ
ದ್ವಾರಕಾನಾಥ್ ಅವರ ತಂದೆ ಹೆಸರಾಂತ ಜೋತಿಷಿ ಬೆಳ್ಳೂರು ಶಂಕರನಾರಾಯಣ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಕುಟುಂಬ ವಾಸವಿತ್ತು. ದ್ವಾರಕಾನಾಥ್ ಬೆಂಗಳೂರಿನ ಆರ್.ಟಿ. ನಗರದಲ್ಲಿ ವಾಸವಾಗಿ¨ªಾರೆ. ವೃತ್ತಿಯಲ್ಲಿ ವೈದ್ಯರಾಗಿರುವ ಅವರಿಗೆ ಓರ್ವ ಪುತ್ರಿ, ಓರ್ವ ಪುತ್ರನಿದ್ದು, ಇವರಿಬ್ಬರೂ ವೈದ್ಯರನ್ನೇ ಮದುವೆಯಾಗಿ¨ªಾರೆ.
ತುರ್ತು ಪರಿಸ್ಥಿತಿ ಬಳಿಕ ಚಿಕ್ಕಮಗಳೂರು ಲೋಕಸಭೆ ಚುನಾವಣೆಯಲ್ಲಿ ಇಂದಿರಾ ಗಾಂಧಿ ಗೆಲುವಿನ ಭವಿಷ್ಯವನ್ನು ನಿಖರವಾಗಿ ನುಡಿದಿದ್ದ ಕಾರಣ ದ್ವಾರಕಾನಾಥ್ ಕಾಂಗ್ರೆಸ್ ಕೈ ನಾಯಕರಿಗೆ ಹತ್ತಿರವಾಗಿದ್ದರು. 2014ರ ಲೋಕಸಭೆ ಚುನಾವಣೆಗೆ ಮುನ್ನ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗುತ್ತಾರೆ ಎಂದು ಆಂಗ್ಲ ದೈನಿಕವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮೊದಲೇ ನುಡಿದಿದ್ದರು.
ಸಿಬಿಐ ಬಲೆಗೆ
ಈ ಹಿಂದೆ ರಾಜೀವ್ ಗಾಂಧಿ ಆರೋಗ್ಯ ವಿವಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಆಗ ದ್ವಾರಕಾನಾಥ್ ತನ್ನ ಮಗಳಿಗೆ ಪಿಜಿ ಸೀಟ… ಕೊಡಿಸಿದ್ದು ದೊಡ್ಡ ವಿವಾದವಾಗಿ ಸಿಬಿಐ ತನಿಖೆಯೂ ನಡೆದಿತ್ತು. ರಾಜಕಾರಣಿಗಳು ಹಾಗೂ ದ್ವಾರಕಾನಾಥ್ ನಡುವಿನ ನಂಟು ಇತ್ತೀಚೆಗಿನದಲ್ಲ. ಇವರ ಮನೆಯÇÉೇ ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ನಿಧನ ಹೊಂದಿದ್ದು. ಈ ಸಾವು ಸಹಜ ಸಾವಲ್ಲ, ಸಂಶಯಾಸ್ಪದ ಸಾವು. ಇದರ ಬಗ್ಗೆ ತನಿಖೆಯಾಗಬೇಕು ಎಂದು ಅರಸು ಕುಟುಂಬಸ್ಥರು ಆಗ್ರಹಿಸಿದ್ದರು. ಈ ಮೂಲಕ ಮೊದಲ ಬಾರಿಗೆ ದ್ವಾರಕಾನಾಥ್ ವಿವಾದದಲ್ಲಿ ಸಿಲುಕಿದ್ದರು.
ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಮಾಜಿ ಕೇಂದ್ರ ಗೃಹ ಸಚಿವ ಸುಶೀಲ…ಕುಮಾರ್ ಶಿಂಧೆ, ಸೋನಿಯಾ ರಾಜಕೀಯ ಕಾರ್ಯದರ್ಶಿ ಪ್ರಸ್ತುತ ಗುಜರಾತ್ನಲ್ಲಿ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಿರುವ ಅಹ್ಮದ್ ಪಟೇಲ…, ಮಾಜಿ ವಿದೇಶಾಂಗ ಸಚಿವ ನಟವರ್ ಸಿಂಗ್, ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ವಿಲಾಸ್ರಾವ್ ದೇಶ್ಮುಖ್, ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿಗಳಾಗಿದ್ದ ಧರಂ ಸಿಂಗ್, ಎಸ್.ಎಂ. ಕೃಷ್ಣ ಅವರಿಗೂ ಆಪ್ತರು ದ್ವಾರಕಾನಾಥ್ ಎಂದು ಹೇಳಲಾಗಿದೆ. ಕಾಂಗ್ರೆಸ್, ಬಿಜೆಪಿ ಎರಡು ಪಕ್ಷಗಳಲ್ಲೂ ದ್ವಾರಕಾನಾಥ್ಗೆ ಸ್ನೇಹಿತರಿದ್ದು, ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು ಅವರ ನಿವಾಸಕ್ಕೆ ಹೋಗಿ ಭವಿಷ್ಯ ಕೇಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
MUST WATCH
ಹೊಸ ಸೇರ್ಪಡೆ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ