“ತೆನೆ’ ಸಹಾಯ ಪಡೆದು “ಕಮಲ’ ಪಕ್ಷ ಸೇರಿದ “ಹಳ್ಳಿಹಕ್ಕಿ’ ಮಾಡಿದ್ದೇನು?


Team Udayavani, Jul 24, 2019, 3:05 AM IST

tene

ಬೆಂಗಳೂರು: ಕಾಂಗ್ರೆಸ್‌ನಲ್ಲಿ ದಶಕಗಳ ಕಾಲ ರಾಜಕಾರಣ ಮಾಡಿ ಸಿದ್ದರಾಮಯ್ಯ ಅವರೊಂದಿಗೆ ಮುನಿಸಿಕೊಂಡು ಮಾತೃಪಕ್ಷ ಬಿಟ್ಟು ಜೆಡಿಎಸ್‌ ಸೇರಿದ “ಹಳ್ಳಿಹಕ್ಕಿ’ ಖ್ಯಾತಿಯ ಎಚ್‌.ವಿಶ್ವನಾಥ್‌ ಸಹ ಸಮ್ಮಿಶ್ರ ಸರ್ಕಾರ ಪತನದ ರೂವಾರಿಗಳಲ್ಲಿ ಒಬ್ಬರು.

ಜೆಡಿಎಸ್‌ಗೆ ಸೇರ್ಪಡೆಯಾದ ನಂತರ ಹುಣಸೂರು ಕ್ಷೇತ್ರದಿಂದ ಟಿಕೆಟ್‌ ಕೊಟ್ಟು ಶಾಸಕರನ್ನಾಗಿ ಮಾಡಿ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿಯೂ ಅವರನ್ನು ಮಾಡಲಾಯಿತು. ಆದರೆ, ಪಕ್ಷ ಹಾಗೂ ನಾಯಕರು ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು ಬೇಸರಗೊಂಡು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ತ್ಯಜಿಸಿದರು. ಅಚ್ಚರಿಯ ಬೆಳವಣಿಗೆಯಲ್ಲಿ ಅತೃಪ್ತ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರನ್ನು ಸೇರಿಕೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಬಿಜೆಪಿ ವಿರೋಧಿ ರಾಜಕಾರಣ ಮಾಡಿಕೊಂಡ ಬಂದ ಅವರು, ಈಗ ಬಿಜೆಪಿ ಸರ್ಕಾರ ರಚನೆಯಾಗಲು ನೆರವು ನೀಡಿದಂತಾಗಿದೆ. ಬಿಜೆಪಿಯು ಎಚ್‌.ವಿಶ್ವನಾಥ್‌ ಅವರಂತಹ ರಾಜಕಾರಣಿಗೆ ಗಾಳ ಹಾಕಿದ್ದು ವಿಶೇಷವೇ. ಏಕೆಂದರೆ ಅವರು ಬಿಜೆಪಿ ವಿರುದ್ಧ ಟೀಕಾಸ್ತ್ರ ಬಿಟ್ಟಿದ್ದವರೇ. ಸಿದ್ದರಾಮಯ್ಯ ಅವರ ವಿರುದ್ಧ ಜೆಡಿಎಸ್‌ನಲ್ಲಿ ಹೋರಾಟ ಮಾಡಬೇಕು ಎಂದು ಬಂದು ಜೆಡಿಎಸ್‌ ರಾಜ್ಯಾಧ್ಯಕ್ಷರಾದರೂ ಸಮನ್ವಯ ಸಮಿತಿಗೆ ಸೇರ್ಪಡೆಯಾಗದ ನೋವು ಅವರನ್ನು ಸಾಕಷ್ಟು ಕಾಡಿತ್ತು.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಆ ವಿಚಾರದಲ್ಲಿ ಅಸಹಾಯಕರಾಗಿದ್ದು, ಅವರಿಗೆ ಬೇಸರವನ್ನೇ ತರಿಸಿತ್ತು. ಜತೆಗೆ, ಪಕ್ಷದ ರಾಜ್ಯಾಧ್ಯಕ್ಷನಾದರೂ ತಮಗೆ ಅಧಿಕಾರ ಇಲ್ಲ, ಸಂಪನ್ಮೂಲ ಒದಗಿಸುತ್ತಿಲ್ಲ, ಪಕ್ಷಕ್ಕೂ, ಸರ್ಕಾರಕ್ಕೂ ಸಮನ್ವಯತೆ ಇಲ್ಲ ಎಂದು ಆಗ್ಗಾಗ್ಗೆ ಅತೃಪ್ತಿ ಹೊರಹಾಕುತ್ತಿದ್ದರು. ಈ ಎಲ್ಲವೂ ಅತೃಪ್ತರ ಜತೆಗೂಡಲು ಕಾರಣವಾಯಿತು. ಇದರಿಂದ ರಾಜಕೀಯ ಜೀವನದಲ್ಲಿ ಕೊನೆಘಟ್ಟದಲ್ಲಿ ಮತ್ತೂಂದು ಪಕ್ಷಾಂತರದ ಅಂಚಿನಲ್ಲಿ ಅವರು ಬಂದು ನಿಲ್ಲುವಂತಾಗಿದೆ.

ವಿಶ್ವನಾಥ್‌ “ಸಮಯಸಾಧಕ’ ತನ: ಕಾಂಗ್ರೆಸ್‌ನಲ್ಲಿ ಮೂಲೆಗುಂಪಾಗಿದ್ದಾಗ ಸ್ವತಃ ದೇವೇಗೌಡರು ವಿಶ್ವನಾಥ್‌ಗೆ ತಮ್ಮ ಪಕ್ಷದಿಂದ ಶಾಸಕನಾಗಲು ಅವಕಾಶ ಕಲ್ಪಿಸಿದರು. ದೇವೇಗೌಡ ರನ್ನು ಸದಾ ಹೀಗಳೆಯುತ್ತಲೇ ರಾಜಕಾರಣ ಮಾಡಿಕೊಂಡಿದ್ದ ವಿಶ್ವನಾಥ್‌, ತಾವು ಒಂಟಿಯಾಗಿದ್ದಾಗ ಸಹಕರಿಸಿದ ಮತ್ತು ಜೆಡಿಎಸ್‌ ರಾಜ್ಯಾಧ್ಯಕ್ಷ ಹುದ್ದೆಯನ್ನೂ ಕಲ್ಪಿಸಿದ ದೇವೇಗೌಡರನ್ನೂ ಮರೆತು, “ಆಪರೇಷನ್‌’ಗೆ ಒಳಗಾಗಿ ಒಂದು ಮಟ್ಟಿಗೆ “ಸಮಯಸಾಧಕ’ತನ ರೂಢಿಸಿಕೊಂಡರು ಎಂಬ ಆರೋಪ ಅವರ ಮೇಲಿದೆ.

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.