ಥೀಮ್‌ ಪಾರ್ಕ್‌ಗೆ ಡಿಕೆಶಿ ಅಡ್ಡಿಯಾಗಿದ್ದೇಕೆ?


Team Udayavani, Jan 1, 2020, 3:05 AM IST

CT-Ravi

ಮಂಡ್ಯ: ರಾಮನಗರ ಜಿಲ್ಲೆಯಲ್ಲಿ ಕ್ರಿಸ್ತನ ಪ್ರತಿಮೆ ಸ್ಥಾಪಿಸುವುದಕ್ಕೆ ಮುಂದಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌, ಹಿಂದೊಮ್ಮೆ ಇಸ್ಕಾನ್‌ ಸಂಸ್ಥೆ ಥೀಮ್‌ ಪಾರ್ಕ್‌ ಮಾಡುವ ಯೋಜನೆಗೆ ಅಡ್ಡಗಾಲಾಗಿ ಶ್ರೀಕೃಷ್ಣನನ್ನು ವಿರೋಧಿಸಿದ್ದೇಕೆ? ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.

ಮದ್ದೂರಿನಲ್ಲಿ ಮಾತನಾಡಿದ ಅವರು, ಇಸ್ಕಾನ್‌ ಸಂಸ್ಥೆ ಥೀಮ್‌ ಪಾರ್ಕ್‌ ಯೋಜನೆ ಕೈಗೆತ್ತಿಕೊಂಡಾಗ ಅಂದು ಸದನ ಸಮಿತಿ ರಚಿಸಿ, ಡಿ.ಕೆ.ಶಿವಕುಮಾರ್‌ ಇನ್ನಿಲ್ಲದ ತೊಂದರೆ ಕೊಟ್ಟು ಯೋಜನೆ ಕೈಬಿಡುವಂತೆ ಮಾಡಿದ್ದರು. ಏಸುಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ಮುಂದಾದವರು, ಅಂದು ಕೃಷ್ಣನಿಗೆ ಏಕೆ ವಿರೋಧಿಸಿದರು. ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚುವುದು ಸರಿಯೇ? ಎಂದು ದೂರಿದರು. ನಮಗೆ ಕೃಷ್ಣ, ಏಸುಕ್ರಿಸ್ತ ಇಬ್ಬರೂ ಒಂದೇ.

ಇಬ್ಬರಲ್ಲೂ ಭೇದವಿಲ್ಲ. ದೇವರೊಬ್ಬ ನಾಮ ಹಲವು ಎಂಬ ಮಾತಿನಲ್ಲಿ ನಂಬಿಕೆ ಇಟ್ಟವರು ನಾವು. ಕ್ರಿಸ್ತನ ಪ್ರತಿಮೆ ನಿರ್ಮಿಸುವುದಕ್ಕೆ ಅವರು ಸ್ವತಂತ್ರರು. ಆದರೆ, ಸರ್ಕಾರದ ಗೋಮಾಳ ಜಮೀನಿನಲ್ಲಿ ಪ್ರತಿಮೆ ನಿರ್ಮಾಣದ ಬಗ್ಗೆ ಸರ್ಕಾರ ತನಿಖೆಗೆ ಆದೇಶಿಸಿದೆ. ವರದಿಯಲ್ಲಿ ಏನು ಬರುತ್ತೋ, ಅದನ್ನು ಆಧರಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಅದರಲ್ಲಿ ತಪ್ಪೇನಿದೆ ಎಂದು ಹೇಳಿದರು.

ಇನ್ನು ಕಪಾಲ ಬೆಟ್ಟ ಮುನೇಶ್ವರದ್ದು. ಬಕಾಲಿ ಭೈರವನಿಗೆ ಸೇರಿದ್ದು ಎಂಬ ಮಾತು ಕೇಳಿಬರುತ್ತಿವೆ. ಈ ವಿಷಯದಲ್ಲಿ ರಾಜಕಾರಣ ಬೆರೆಸಲು ತನಗೆ ಇಷ್ಟವಿಲ್ಲ. ಅದನ್ನು ಸ್ಥಳೀಯರ ನಿರ್ಧಾರಕ್ಕೇ ಬಿಡುತ್ತೇನೆಂದರು. ಕರ್ನಾಟಕದಲ್ಲಿ ಭಾಷಾವಾರು ಪ್ರಾಂತ್ಯ ರಚನೆ ಮಾಡುವ ವೇಳೆ ಅಧಿಕಾರದಲ್ಲಿದ್ದದ್ದು ಕಾಂಗ್ರೆಸ್‌. ಗಡಿ ವಿವಾದದ ಸೃಷ್ಟಿಕರ್ತರೂ ಅವರೇ ಆಗಿದ್ದಾರೆ ಎಂದು ಕಿಡಿಕಾರಿದರು.

ಕಾರ್ಖಾನೆ ಆರಂಭಕ್ಕೆ ಬದ್ಧ
ಮಂಡ್ಯ: ಮೈಷುಗರ್‌ ಹಾಗೂ ಪಿಎಸ್‌ಎಸ್‌ಕೆ ಕಾರ್ಖಾನೆ ಆರಂಭಿಸಲು ರಾಜ್ಯ ಸರ್ಕಾರ ಬದ್ಧವಾ ಗಿದ್ದು, ಜನವರಿ ಅಂತ್ಯದೊಳಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದೆಂದು ಸಕ್ಕರೆ ಸಚಿವ ಸಿ.ಟಿ.ರವಿ ತಿಳಿಸಿದರು. ಮೈಸೂರು ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ರೈತ ಮುಖಂಡರು, ಅಧಿಕಾರಿಗಳು ಹಾಗೂ ನೌಕರರೊಂದಿಗೆ ಸಭೆ ನಡೆಸಿ ಮಾತನಾಡಿದರು.

ಎರಡೂ ಕಾರ್ಖಾನೆಗಳನ್ನು ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ನಡೆಸಬೇಕೋ, ಗುತ್ತಿಗೆ ಪದ್ಧತಿಯಲ್ಲಿ ಆರಂಭಿಸಬೇಕೋ ಅಥವಾ ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಂಡು ಪುನಶ್ಚೇತನಗೊಳಿಸಬೇಕೋ ಎಂಬ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಿ ಸಲಾಗುವು ದೆಂದರು. ಮುಂದಿನ ಜೂನ್‌ ವೇಳೆಗೆ ಎರಡೂ ಕಾರ್ಖಾನೆಗಳು ಕಬ್ಬು ಅರೆಯುವಂತೆ ಸಜ್ಜುಗೊಳಿಸಲಾಗುವುದು.

ಈ ವರ್ಷ 34 ಲಕ್ಷ ಟನ್‌ ಕಬ್ಬು ಉತ್ಪಾದನೆಯಾ ಗಿದ್ದು, ಮುಂದಿನ ವರ್ಷ ಇದು 60 ಲಕ್ಷ ಟನ್‌ ತಲುಪುವ ಸಾಧ್ಯತೆಯಿದೆ. ಈ ವೇಳೆ ಕಾರ್ಖಾನೆ ಆರಂಭಿಸದಿದ್ದರೆ ರೈತರ ಸ್ಥಿತಿ ಮತ್ತಷ್ಟು ಶೋಚನೀಯವಾಗಲಿದೆ. ಹೀಗಾಗಿ ಕಬ್ಬು ಅರೆಯು ವಿಕೆಗೆ ಮೊದಲ ಆದ್ಯತೆ ನೀಡುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.