ಬೇಲ್ ಗಾಗಿ ರೆಡ್ಡಿ ಪ್ಲಾನ್, ಇದು ರಾಜಕೀಯ ಷಡ್ಯಂತ್ರ: ರೆಡ್ಡಿ ಪರ ವಕೀಲ
Team Udayavani, Nov 8, 2018, 1:34 PM IST
ಬಳ್ಳಾರಿ/ಬೆಂಗಳೂರು: 20 ಕೋಟಿ ರೂಪಾಯಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ಬಳ್ಳಾರಿಯಲ್ಲಿರುವ ಜನಾರ್ದನ ರೆಡ್ಡಿ ನಿವಾಸಗಳ ಮೇಲೆ ದಾಳಿ ನಡೆಸಿದ್ದು, ಸತತ 8ಗಂಟೆಗಳ ಕಾಲದಿಂದ ಪರಿಶೀಲನೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ನಾಪತ್ತೆಯಾಗಿರುವ ರೆಡ್ಡಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ದಟ್ಟವಾಗಿದೆ ಎಂದು ವರದಿ ತಿಳಿಸಿದೆ.
ರೆಡ್ಡಿ ವಿರುದ್ಧ ರಾಜಕೀಯ ಷಡ್ಯಂತ್ರ: ರೆಡ್ಡಿ ಪರ ವಕೀಲ ಚಂದ್ರಶೇಖರ್
ಜನಾರ್ದನ ರೆಡ್ಡಿ ಎಲ್ಲಿಯೂ ಪರಾರಿಯಾಗಿಲ್ಲ, ಅವರನ್ನು ಬಂಧಿಸಲಾಗುವುದು ಎಂಬ ಭೀತಿಯನ್ನು ಸಿಸಿಬಿ ಅಧಿಕಾರಿಗಳು ಮಾಧ್ಯಮಗಳ ಮೂಲಕ ಸೃಷ್ಟಿಸಿದ್ದಾರೆ. ಹೀಗಾಗಿ ನಾವು ಕಾನೂನು ಚೌಕಟ್ಟಿನಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದು ರೆಡ್ಡಿ ಪರ ವಕೀಲ ಚಂದ್ರಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ.
ಜನಾರ್ದನ ರೆಡ್ಡಿ ವಂಚನೆ ಕೇಸ್ ನಲ್ಲಿ ಇಲ್ಲದಿದ್ದರೂ ಅವರನ್ನು ಬಂಧಿಸುವ ಷಡ್ಯಂತ್ರ ನಡೆಸಲಾಗಿದೆ. ಇದರ ಹಿಂದೆ ಕಾಣದ ಕೈಗಳ ಕೈವಾಡ ಇದೆ. ಹೀಗಾಗಿ ಕೂಡಲೇ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಬಂಧನ ಭೀತಿಯಲ್ಲಿರುವ ಜನಾರ್ದನ ರೆಡ್ಡಿ ತಮ್ಮ ಆಪ್ತರ ಮೂಲಕ ನಿರೀಕ್ಷಣಾ ಜಾಮೀನು ಪಡೆದುಕೊಳ್ಳುವ ಸಿದ್ಧತೆ ನಡೆಸಿಕೊಳ್ಳುತ್ತಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು