ಮುಂದೆಯೂ ನಾನೇ ಸಿಎಂ: ಬಿಎಸ್ವೈ
Team Udayavani, Jan 1, 2021, 6:25 AM IST
ಬೆಂಗಳೂರು: ಮುಂದಿನ ಎರಡೂವರೆ ವರ್ಷ ನಾನೇ ಮುಖ್ಯಮಂತ್ರಿ, ನಾಯಕತ್ವ ಬಗ್ಗೆ ಗೊಂದಲಗಳಿಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಸಂಪುಟ ಸದಸ್ಯರಲ್ಲಿ, ಶಾಸಕರಲ್ಲಿ ಈ ಬಗ್ಗೆ ಗೊಂದಲಗಳಿಲ್ಲ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕೂಡ ಇದನ್ನೇ ಸ್ಪಷ್ಟಪಡಿಸಿದ್ದಾರೆ ಎಂದು ವಿಧಾನಸೌಧದಲ್ಲಿ ನಡೆಸಿದ ಪತ್ರಿಕಾಗೋಷ್ಠಿ ಅವರು ಹೇಳಿದ್ದಾರೆ.
ಒಂದೂವರೆ ವರ್ಷದಿಂದ ಅಭಿವೃದ್ಧಿ ಬಗ್ಗೆಯಷ್ಟೇ ನನ್ನ ಯೋಚನೆ. ಸದ್ಯ ಒಂದೆರಡು ಶಾಸಕರಲ್ಲಿ ಅಸಮಾಧಾನ ಇರಬಹುದಷ್ಟೇ, ಇದಕ್ಕಾಗಿಯೇ ವಿಭಾಗೀಯ ಮಟ್ಟದಲ್ಲಿ ಸಭೆ ಕರೆದು ಚರ್ಚಿಸಲು ತೀರ್ಮಾನಿಸಿದ್ದೇನೆ ಎಂದೂ ಸಿಎಂ ಹೇಳಿದರು.
ಜನರಲ್ಲೂ ನಾಯಕತ್ವ ಬಗ್ಗೆ ಗೊಂದಲ ಇಲ್ಲ. ಇದ್ದರೆ ಕೆಲವು ಮಾಧ್ಯಮಗಳಲ್ಲಷ್ಟೆ ಎಂದು ಚಟಾಕಿ ಹಾರಿಸಿದರು.
ಇಂದು ಅರುಣ್ ಸಿಂಗ್ ಆಗಮನ
ಶಿವಮೊಗ್ಗದಲ್ಲಿ ಶನಿವಾರ ಮತ್ತು ರವಿವಾರ ನಡೆಯಲಿರುವ ಕೋರ್ ಕಮಿಟಿ ಸಭೆ ಮತ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಶುಕ್ರವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ. ಶನಿವಾರ ಮಧ್ಯಾಹ್ನ ಪಕ್ಷದ ಜಿಲ್ಲಾಧ್ಯಕ್ಷರು, ವಿಭಾಗ ಮಟ್ಟದ ಉಸ್ತುವಾರಿಗಳು, ವಿಭಾಗೀಯ ಸಂಘಟನ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ ಶಿವಮೊಗ್ಗದಲ್ಲಿ ಗ್ರಾಮ ಸೇವಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಅನಂತರ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ರವಿವಾರ ಪಕ್ಷದ ರಾಜ್ಯ ವಿಶೇಷ ಕಾರ್ಯಕಾರಿಣಿ ನಡೆಯಲಿದ್ದು, ಅದರಲ್ಲಿ ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ