ಕೊಲೆಯಾದ ಫಾಝಿಲ್ – ಮಸೂದ್ ಮನೆಗಳಿಗೂ ಭೇಟಿ ಕೊಡುತ್ತೇನೆ: ಸಿಎಂ ಬೊಮ್ಮಾಯಿ
Team Udayavani, Aug 1, 2022, 9:41 AM IST
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಪ್ರತ್ಯೇಕ ಪ್ರಕರಣಗಳಲ್ಲಿ ಹತ್ಯೆಯಾದ ಬೆಳ್ಳಾರೆಯ ಮಸೂದ್ ಮತ್ತು ಸುರತ್ಕಲ್ ನ ಫಾಝಿಲ್ ಮನೆಗೆ ಮುಂದಿನ ದಿನಗಳಲ್ಲಿ ಭೇಟಿ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ಕೊಲೆಯಾದ ಪ್ರವೀಣ್ ನೆಟ್ಟರ್ ಮನೆಗೆ ಭೇಟಿ ನೀಡಿ ಮಸೂದ್ ಹಾಗೂ ಫಾಝೀಲ್ ಮನೆಗೆ ಸಿಎಂ ಭೇಟಿ ಕೊಡದ ಬಗ್ಗೆ ಕಾಂಗ್ರೆಸ್ ಟೀಕೆ ಮಾಡಿತ್ತು.
ಇದನ್ನೂ ಓದಿ:ಬೊಮ್ಮಾಯಿ ತಾರತಮ್ಯ ಧೋರಣೆ ಪ್ರದರ್ಶಿಸಿ ಮುಖ್ಯಮಂತ್ರಿ ಹುದ್ದೆಗೆ ಕಳಂಕ: ಬಿ.ಎಂ. ಫಾರೂಕ್
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪ್ರವೀಣ್ ನೆಟ್ಡಾರು ಹತ್ಯೆ ಪ್ರಕರಣದ ತನಿಖೆ ಪ್ರಗತಿಯ ಹಂತದಲ್ಲಿದೆ. ಆದಷ್ಟು ಬೇಗನೇ ಕೊಲೆಗಡುಕರ ಪತ್ತೆಯಾಗಲಿದೆ. ಇನ್ನೊಂದೆರಡು ಮೂರು ದಿನಗಳಲ್ಲಿ ಪ್ರಕರಣವನ್ನು ಎನ್ಐಎ ಗೆ ವರ್ಗಾವಣೆ ಮಾಡುತ್ತೇವೆ. ತಾಂತ್ರಿಕ ಮತ್ತು ಪೇಪರ್ ವರ್ಕ್ ನಡೆಯುತ್ತಿದೆ. ಆದಷ್ಟು ಬೇಗ ಪ್ರಕರಣ ವರ್ಗಾವಣೆ ಮಾಡುತ್ತೇವೆ. ಈಗಾಗಲೇ ಎನ್ಐಎಗೆ ಕೇಸ್ ಬಗ್ಗೆ ಅನೌಪಚಾರಿಕವಾಗಿ ತಿಳಿಸಿದ್ದೇವೆ. ಕೆಲವು ಎನ್ಐಎ ಅಧಿಕಾರಿಗಳು ಕೇರಳ ಮತ್ತು ಮಂಗಳೂರಿನಲ್ಲಿ ಈಗಾಗಲೇ ಮಾಹಿತಿ ಪಡೆಯುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!