Congress;ಅದೃಷ್ಟವಿದ್ದರೆ ಸಿಎಂ ಆಗುವ ಆಸೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್
ಸಚಿವ ರಾಜಣ್ಣ ಅವರಿಗೆ ನಾನು ಆಭಾರಿಯಾಗಿದ್ದೇನೆ...
Team Udayavani, Nov 3, 2023, 5:35 PM IST
ಬೆಂಗಳೂರು: ‘ಐದು ವರ್ಷಗಳ ಅವಧಿಗೆ ಕರ್ನಾಟಕ ಮುಖ್ಯಮಂತ್ರಿಯಾಗಿ ಪೂರ್ಣಾವಧಿಯಲ್ಲಿ ಮುಂದುವರಿಯುತ್ತೇನೆ’ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ ಮರುದಿನವೇ ನಾಯಕತ್ವದ ಮಧ್ಯಂತರ ಬದಲಾವಣೆಯ ಮಾತುಗಳನ್ನು ತಳ್ಳಿಹಾಕಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಶುಕ್ರವಾರ ಉನ್ನತ ಹುದ್ದೆಯನ್ನು ಅಲಂಕರಿಸುವ ಬಯಕೆಯನ್ನು ರಹಸ್ಯವಾಗಿಡದೇ ”ಅದೃಷ್ಟವಿದ್ದರೆ ಸಿಎಂ ಆಗುವ ಆಸೆ ಇದೆ” ಎಂದು ಹೇಳಿದ್ದಾರೆ.
ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ‘ಮುಂದೊಂದು ದಿನ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ನೋಡುವ ಇಚ್ಛೆ ಇದೆ’ ಎನ್ನುವ ಹೇಳಿಕೆ ಕುರಿತು ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದರು.
”ರಾಜಣ್ಣ ಅವರಿಗೆ ನಾನು ಆಭಾರಿಯಾಗಿದ್ದೇನೆ. ನನಗೂ ಆ ಭಾಗ್ಯ ಸಿಗಲಿ ಎಂದು ಆಶಿಸುತ್ತೇನೆ. ಆದರೆ ಯಾವಾಗ ಆಗಬಹುದೋ ಗೊತ್ತಿಲ್ಲ” ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ, ಮಾಜಿ ಡಿಸಿಎಂ 72ರ ಹರೆಯದ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ತುಮಕೂರು ಜಿಲ್ಲೆಯ ಒಬ್ಬರು ಮುಖ್ಯಮಂತ್ರಿಯಾದರೆ ಜಿಲ್ಲೆಯ ಜನರಿಗೆ ಸಂತೋಷವಾಗುತ್ತದೆ ಎಂದು ಹೇಳಿದ ರಾಜಣ್ಣ,ಪರಮೇಶ್ವರ ಅವರಾದರೆ ನಮಗೆಲ್ಲ ಮುಖ್ಯಮಂತ್ರಿಯಾದ ಭಾವನೆ ಬರುತ್ತದೆ ಎಂದು ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
MUST WATCH
ಹೊಸ ಸೇರ್ಪಡೆ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ