ಮೂಲಸೌಕರ್ಯಗಳೇ ಇಲ್ಲದ ಏರೋಸ್ಪೇಸ್‌ ಪಾರ್ಕ್‌!


Team Udayavani, Feb 13, 2017, 3:45 AM IST

aerospace.jpg

ಬೆಂಗಳೂರು: ನೂರಾರು ಎಕರೆ ಭೂಮಿ ಇದೆ. ಆದರೆ, ಉದ್ಯಮಿಗಳಿಗೆ ಆಸಕ್ತಿ ಇಲ್ಲ. ಪ್ರತ್ಯೇಕ ನೀತಿ ರೂಪಿಸಲಾಗಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಅದರ ಉಪಯೋಗ ಆಗುತ್ತಿಲ್ಲ. ವೈಮಾನಿಕ ಕ್ಷೇತ್ರಕ್ಕಾಗಿಯೇ ಪ್ರತ್ಯೇಕ ಪಾರ್ಕ್‌ ಇದೆಯಾದರೂ ಅಲ್ಲಿ ಮೂಲಸೌಲಭ್ಯಗಳಿಲ್ಲ! – ವೈಮಾನಿಕ ಕ್ಷೇತ್ರಕ್ಕೆ ಸಂಬಂಧಿಸಿದಂತೆ ದೇಶದಲ್ಲಿ ಅತಿ ಹೆಚ್ಚು ಕೈಗಾರಿಕೆಗಳನ್ನು ಹೊಂದಿರುವ ಬೆಂಗಳೂರಿನ ಸ್ಥಿತಿ ಇದು.

ಸರ್ಕಾರ ವೈಮಾನಿಕ ಕ್ಷೇತ್ರವನ್ನು ಉತ್ತೇಜಿಸಲು ಏರೋಸ್ಪೇಸ್‌ ಪಾರ್ಕ್‌, ಏರೋಸ್ಪೇಸ್‌ ನೀತಿ ಸೇರಿದಂತೆ ಹಲವು ಘೋಷಣೆಗಳನ್ನು ಮಾಡಿದೆ. ಆದರೆ, ಅವುಗಳು ಕಾರ್ಯರೂಪದಲ್ಲಿ ಬರುತ್ತಿರುವುದು ವಿಳಂಬವಾಗುತ್ತಿರುವುದರಿಂದ
ಪರೋಕ್ಷವಾಗಿ ರಾಜ್ಯದ ವೈಮಾನಿಕ ಕ್ಷೇತ್ರದ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತಿದೆ. ಸರ್ಕಾರ ಸುಮಾರು ಏಳು ವರ್ಷಗಳ ಹಿಂದೆಯೇ ಏರೋಸ್ಪೇಸ್‌ ಪಾರ್ಕ್‌ ಘೋಷಿಸಿದೆ. 732 ಎಕರೆಯಲ್ಲಿ ವಿಮಾನ ತಯಾರಿಕೆ ಕಂಪನಿಗಳಿಗೆ ಹಾಗೂ 252 ಎಕರೆಯಲ್ಲಿ ವಿಶೇಷ ಆರ್ಥಿಕ ವಲಯ ಸೇರಿದಂತೆ 988 ಎಕರೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ
ವಿಮಾನ ನಿಲ್ದಾಣ (ಕೆಐಎಎಲ್‌) ಬಳಿ ಏರೋಸ್ಪೇಸ್‌ ಪಾರ್ಕ್‌ ಕೂಡ ತಲೆಯೆತ್ತಿದೆ. ಆದರೆ, ಇದುವರೆಗೆ ಅಲ್ಲಿ ಏಳು ಕಂಪನಿಗಳು ಕೂಡ ಬಂದಿಲ್ಲ.

ಸೌಲಭ್ಯಗಳ ಕೊರತೆ; ಅಭಿವೃದ್ಧಿಗೆ ಪೆಟ್ಟು:
ಏರೋಸ್ಪೇಸ್‌ ಪಾರ್ಕ್‌ನಲ್ಲಿ ಇನ್ನೂ ಸಮರ್ಪಕ ನೀರಿನ ಸೌಲಭ್ಯವಿಲ್ಲ. ವಿದ್ಯುತ್‌ ಸಂಪರ್ಕ ಇದ್ದರೂ, ಶಾಶ್ವತ ವಿದ್ಯುತ್‌ ಪೂರೈಕೆಗೆ ಅಲ್ಲೊಂದು ಗ್ರಿಡ್‌ ಸ್ಥಾಪಿಸಿಲ್ಲ. ಸೂಕ್ತ ಸಾರಿಗೆ ಸಂಪರ್ಕವೂ ಇಲ್ಲ. ಅಂದಾಜು ಮೂರು ಸಾವಿರ ಕೈಗಾರಿಕೆಗಳು ಬರುವ ಈ ಜಾಗದಲ್ಲಿ 30ರಿಂದ 40 ಉದ್ಯಮಗಳು ಬರುತ್ತಿವೆ. ಅದರಲ್ಲೂ ಏರೋಸ್ಪೇಸ್‌ಗೆ ಮೀಸಲಿಟ್ಟ
988 ಎಕರೆಯಲ್ಲಿ ಬೆರಳೆಣಿಕೆಯಷ್ಟು ಕೈಗಾರಿಕೆಗಳು ಮಾತ್ರ ಬಂದಿವೆ. 

ಇದರಿಂದ ವೈಮಾನಿಕ ಕ್ಷೇತ್ರ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಆಗುತ್ತಿಲ್ಲ ಎಂದು ಸ್ವತಃ ಏರೋಸ್ಪೇಸ್‌ ಪಾರ್ಕ್‌ನಲ್ಲಿ
ಕೈಗಾರಿಕೆಯನ್ನು ಸ್ಥಾಪಿಸುತ್ತಿರುವ ಕರ್ನಾಟಕ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಂಘ (ಕಾಸಿಯಾ) ಮಾಜಿ ಅಧ್ಯಕ್ಷ ವಿ.ಕೆ.ದೀಕ್ಷಿತ್‌ ಹೇಳುತ್ತಾರೆ.

ಸರ್ಕಾರ ನಿರೀಕ್ಷಿಸಿದ್ದ ಸುಮಾರು 70 ಯೋಜನೆಗಳಿಂದ 4,572 ಕೋಟಿ ರೂ. ಹೂಡಿಕೆಗೆ ಮಂಜೂರಾತಿ ದೊರೆತಿದ್ದರೂ ಐದು ಯೋಜನೆಗಳು ಮಾತ್ರ ಸಾಕಾರಗೊಂಡಿವೆ. ನೀರೂ ಇಲ್ಲ, ವಿದ್ಯುತ್ತೂ ಇಲ್ಲ. ಕಾರ್ಖಾನೆಗಳಿಗೆ ಬೇಕಾದ ಸಂಸ್ಕರಿಸಿದ ನೀರು, ಶಾಶ್ವತ ವಿದ್ಯುತ್‌ ಸಂಪರ್ಕವನ್ನು ನೀಡಲು ಇದುವರೆಗೆ ಸಾಧ್ಯವಾಗಿಲ್ಲ. ಹಾಗಾಗಿ, ವಿವಿಧ ಕಂಪನಿಗಳು ವರ್ಷಗಳಿಂದ ತಮಗೆ ಮಂಜೂರಾದ ಜಾಗದಲ್ಲಿ ನಾಮಫ‌ಲಕಗಳನ್ನು ಹಾಕಿ, ಮೂಲಸೌಕರ್ಯಗಳಿಗಾಗಿ ಕಾಯುತ್ತಿವೆ ಎಂದು ಉದ್ಯಮಿಗಳು ಆರೋಪಿಸುತ್ತಾರೆ.

ಹಂತ-ಹಂತವಾಗಿ ಬರಲಿವೆ; ಆಯುಕ್ತರು: ಆದರೆ, ಈಗಾಗಲೇ 20ರಿಂದ 23 ಕಂಪೆನಿಗಳು ಏರೋಸ್ಪೇಸ್‌ ಪಾರ್ಕ್‌ನಲ್ಲಿ ಬಂದಿವೆ. ಈ ಪೈಕಿ ವೈಮಾನಿಕ ಕ್ಷೇತ್ರಕ್ಕೆ ಸಂಬಂಧಿಸಿದ ಮೂರು ಕಂಪೆನಿಗಳು ಇದೇ ಫೆ. 15ರಂದು ಉದ್ಘಾಟನೆಗೊಳ್ಳಲಿವೆ. ಮಾರ್ಚ್‌ನಲ್ಲಿ ಇನ್ನೂ ನಾಲ್ಕೈದು ಕಂಪೆನಿಗಳು ಕಾರ್ಯಾರಂಭ ಮಾಡಲಿವೆ. ಹೀಗೆ ಹಂತ-ಹಂತವಾಗಿ ಈ ಕೆಲಸ ಆಗುತ್ತಿದೆ. ಪ್ರಮುಖ ಮೂಲಸೌಕರ್ಯಗಳ ಕೊರತೆ ಯಾವುದೂ ಇಲ್ಲ ಎಂದು ಕೈಗಾರಿಕೆ
ಇಲಾಖೆ ಆಯುಕ್ತ ಗೌರವ್‌ ಗುಪ್ತ ಸ್ಪಷ್ಟಪಡಿಸುತ್ತಾರೆ.

“ನೀತಿ ಸಮರ್ಪಕ ಅನುಷ್ಠಾನ ಆಗ್ತಿಲ್ಲ’: ರಾಜ್ಯದಲ್ಲಿ ಏರೋಸ್ಪೇಸ್‌ ಪಾರ್ಕ್‌, ಏರೋಸ್ಪೇಸ್‌ ನೀತಿ ಇದೆ. ಆದರೆ, ಅದು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ. ಮೂಲಸೌಕರ್ಯಗಳ ಕೊರತೆ ಒಂದೆಡೆಯಾದರೆ, ನೀತಿಯ ಸಮರ್ಪಕ ಅನುಷ್ಠಾನದ ಕೊರತೆ ಮತ್ತೂಂದೆಡೆ ಇದೆ. ಏರೋಸ್ಪೇಸ್‌ ನೀತಿ-2014-19ರಲ್ಲಿ ಐದು ವರ್ಷಗಳಲ್ಲಿ ಎಲ್ಲ ಮೂಲಸೌಕರ್ಯ ಕಲ್ಪಿಸಲಾಗುವುದು. ಏಕಗವಾಕ್ಷಿ ಪದ್ಧತಿ ಅಡಿ ಕೈಗಾರಿಕೆಗಳಿಗೆ ಸಂಬಂಧಿಸಿದ ಮಂಜೂರಾತಿ ದೊರೆಯಲಿದೆ ಎಂದು ಹೇಳಲಾಗಿದೆ. ಆದರೆ, ವಾಸ್ತವವಾಗಿ ಮಂಜೂರಾತಿಗೆ ತಿಂಗಳುಗಟ್ಟಲೆ ಅಲೆಯಬೇಕಿದೆ
ಎಂದು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ)ದ ಅಧ್ಯಕ್ಷ ಎ. ಪದ್ಮನಾಭ ಬೇಸರ ವ್ಯಕ್ತಪಡಿಸುತ್ತಾರೆ. 

*ವಿಜಯಕುಮಾರ್ ಚಂದರಗಿ

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

mudhola

ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.