![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಯುವತಿ ಮಾರಾಟ ಆರೋಪ: ಕಂಬಕ್ಕೆ ಕಟ್ಟಿ ಮಹಿಳೆಗೆ ಥಳಿಸಿದರು
Team Udayavani, Dec 29, 2019, 3:00 AM IST
![Udayavani Kannada Newspaper](https://www.udayavani.com/wp-content/themes/desktop-udayavni/images/place-holder-620.jpg)
ಬನಹಟ್ಟಿ: ಮದುವೆ ಮಾಡಿಸುವ ಆಮಿಷ ತೋರಿಸಿ ಅಪ್ರಾಪ್ತ ಯುವತಿಯನ್ನು ಮಾರಾಟ ಮಾಡಲು ಮೂರು ತಿಂಗಳಿಂದ ಮನೆಗೆ ತಂದಿಟ್ಟುಕೊಂಡಿದ್ದಾರೆಂದು ಆರೋಪಿಸಿ ಸಾರ್ವಜನಿಕರು ಮಹಿಳೆಯೊಬ್ಬಳನ್ನು ಕಂಬಕ್ಕೆ ಕಟ್ಟಿ, ಥಳಿಸಿದ ಘಟನೆ ರಬಕವಿಯಲ್ಲಿ ಶನಿವಾರ ನಡೆದಿದೆ.
ಮೂಲತಃ ಹನಗಂಡಿ ನಿವಾಸಿ ಬಸಯ್ಯ ಮಲ್ಲಯ್ಯ ಮಠಪತಿ ಎಂಬುವರು ಮದುವೆ ದಲ್ಲಾಳಿಯಾಗಿ ಕೆಲಸ ಮಾಡುತ್ತಿದ್ದು, ದಾವಣಗೆರೆಯ ಹಾಸ್ಟೆಲ್ನಲ್ಲಿ ಇದ್ದುಕೊಂಡು, ಪಿಯುಸಿ ಕಲಿಯುತ್ತಿದ್ದ ಅಲ್ಲಿಯ ಬಡಬಾಲಕಿಗೆ ಮದುವೆ ಮಾಡಿಸುವುದಾಗಿ ಮನವೊಲಿಸಿ ಕರೆದುಕೊಂಡು ಬಂದಿದ್ದ. ಮಾರಾಟ ಮಾಡಲು ತಂತ್ರ ರೂಪಿಸಿದ್ದನೆಂದು ಆಕೆ ಆರೋಪಿಸಿದ್ದಾಳೆ.
ಬಾಲಕಿಯನ್ನು ಮೂರು ತಿಂಗಳ ಹಿಂದೆ ರಬಕವಿಗೆ ಕರೆದುಕೊಂಡು ಬಂದಾಗ ನೆರೆ ಹೊರೆಯವರಿಗೆ ಅಕ್ಕನ ಮಗಳೆಂದು ನಂಬಿಸಿದ್ದು, ಒಂದು ಸಲ ಗುಜರಾತ್, ಇನ್ನೊಂದು ಸಲ ರಾಜಸ್ಥಾನಕ್ಕೆ ಮಾರಾಟ ಮಾಡಲು ಕರೆದುಕೊಂಡು ಹೋಗಿ ವಾಪಸ್ಸಾಗಿದ್ದ. ಒಂದು ಕಡೆ ಮಾರಾಟ ಮಾಡುವ ಒಪ್ಪಂದವಾಗಿದ್ದು, ಐದು ಲಕ್ಷ ರೂ.ಮುಂಗಡ ಹಣವನ್ನು ಬಸಯ್ಯ ಪಡೆದಿದ್ದಾಗಿ ಬಾಲಕಿ ಆರೋಪಿಸಿದ್ದಾಳೆ.
ಜನವರಿ 1ರ ನಂತರ ಅಲ್ಲಿ ಕಳುಹಿಸುವ ಉದ್ದೇಶವಿದ್ದು, ಡಿ.27ರ ರಾತ್ರಿ ಬಸಯ್ಯ ಮತ್ತು ಆತನ ಪತ್ನಿ ಬಾಲಕಿಗೆ ದೈಹಿಕ ಕಿರುಕುಳ ನೀಡಲಾರಂಭಿಸಿದರು. ಇದನ್ನು ಸಹಿಸದೇ ಮನೆಯ ಹೊರಗಡೆ ಬಂದಿದ್ದರಿಂದ ವಿಷಯ ಬಹಿರಂಗಗೊಂಡಿದೆ. ಸುತ್ತಲಿನವರು ರಾತ್ರಿಯಿಡೀ ಅವಳಿಗೆ ರಕ್ಷಣೆ ನೀಡಿ ಬೆಳಗ್ಗೆ ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
![Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ](https://www.udayavani.com/wp-content/uploads/2024/07/Shalini-Rajneesh-150x94.jpg)
Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.