ಮೃತ ವ್ಯಕ್ತಿಯ ಮರ್ಮಾಂಗ ಹಿಡಿದು ರೋದಿಸಿದ ಮಹಿಳೆ!
Team Udayavani, May 18, 2017, 10:43 AM IST
ಕಲಬುರಗಿ: ನಗರದ ರೈಲು ನಿಲ್ದಾಣದ ಮುಂದೆ ಬುಧವಾರ ಮೃತ ವ್ಯಕ್ತಿಯೊಬ್ಬನ ಮರ್ಮಾಂಗವನ್ನು ಕೈಯಲ್ಲಿ ಹಿಡಿದು ಮಹಿಳೆಯೊಬ್ಬಳು ರೋದಿಸುತ್ತಿರುವ ದೃಶ್ಯ ಸಾರ್ವಜನಿಕರನ್ನು ಕೆಲ ಕಾಲ ಮುಜುಗರಕ್ಕೀಡು ಮಾಡಿತು. ಸತ್ತಿರುವ ವ್ಯಕ್ತಿ ಯಾರು, ಸಾವಿಗೇನು ಕಾರಣ, ಆತ ಮಹಿಳೆಗೇನು ಸಂಬಂಧ ಎಂಬ ಮಾಹಿತಿ ಲಭ್ಯವಾಗಿಲ್ಲ. ವಿಚಿತ್ರವಾಗಿ ವರ್ತಿಸಿದ
ಮಹಿಳೆಯ ಗುರುತೂ ಪತ್ತೆಯಾಗಿಲ್ಲ. ಕೆಲವರು ಮಹಿಳೆಯನ್ನು ದೂರ ಓಡಿಸಿದರೂ, ಆಕೆ ಹೋಗದೆ ಶವ ಪಕ್ಕದಲ್ಲೇ ಕುಳಿತು ಅಳುತ್ತಿದ್ದಳು. ಆಕೆ ಮಾನಸಿಕ ಅಸ್ವಸ್ಥೆಯಾಗಿದ್ದು, ರೈಲು ನಿಲ್ದಾಣದಲ್ಲಿ ಭಿಕ್ಷೆ ಬೇಡಿಕೊಂಡು ಜೀವಿಸುತ್ತಿದ್ದಳು. ಮೃತ ವ್ಯಕ್ತಿ ಮತ್ತು ಈ ಮಹಿಳೆ ರೈಲು ನಿಲ್ದಾಣದ ಸಂದಿಗಳಲ್ಲೇ ಸಹಜೀವನ ಮಾಡುತ್ತಿದ್ದರು. ಮಂಗಳವಾರ ರಾತ್ರಿ ವ್ಯಕ್ತಿ
ಮೃತಪಟ್ಟಿದ್ದಾನೆ. ಇದರಿಂದ ಆಘಾತಕ್ಕೊಳಗಾಗಿ ಆಕೆ ಹೀಗೆ ವರ್ತಿಸಿರಬಹುದು ಎನ್ನಲಾಗುತ್ತಿದೆ. ಮಹಿಳೆಯ ವರ್ತನೆ ಕುರಿತು ಸಾರ್ವಜನಿಕರು ಮಕ್ಕಳ ಸಹಾಯವಾಣಿಗೆ ತಿಳಿಸಿದರು. ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ
ಸಿ.ವಿ.ರಾಮನ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ವಿಠuಲ ಚಿಕಣಿ, ಡಾನ್ ಬಾಸ್ಕೋದ ಜ್ಯೋತಿ ಆಕೆಯ ಮಕ್ಕಳನ್ನು ರಕ್ಷಣೆ ಮಾಡಿ, ಬಾಲ ಮಂದಿರದ ಸುಪರ್ದಿಗೆ ಒಪ್ಪಿಸಿದ್ದಾರೆ.
ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಆ ಮಹಿಳೆಯೂ ಮಕ್ಕಳನ್ನು ಬಿಟ್ಟು ಶವ ಪರೀಕ್ಷೆ ಸ್ಥಳಕ್ಕೆ ಹೋಗಿದ್ದಾಳೆ ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ವಿಠuಲ ಚಿಕಣಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್