ವಿದ್ಯುತ್ ಸ್ಥಾವರ ನಿರ್ಮಾಣ ವಿರೋಧಿಸಿ ವಿಷ ಸೇವನೆಗೆ ಮುಂದಾದ ರೈತ ಮಹಿಳೆ
Team Udayavani, Feb 23, 2020, 3:04 AM IST
ವಿಜಯಪುರ: ತಮ್ಮ ಜಮೀನಿನಲ್ಲಿ ಸರ್ಕಾರ ಅಕ್ರಮವಾಗಿ ವಿದ್ಯುತ್ ಸ್ಥಾವರ ನಿರ್ಮಾಣ ಮಾಡುವುದನ್ನು ವಿರೋ ಧಿಸಿ ನಾಲತವಾಡ ಬಳಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ರೈತ ಮಹಿಳೆಯರು, ಆತ್ಮಹತ್ಯೆ ಮಾಡಿ ಕೊಳ್ಳುವ ಬೆದರಿಕೆ ಹಾಕಿ ಶನಿವಾರ ವಿಷದ ಬಾಟಲಿ ಪ್ರದರ್ಶಿಸಿದ ಘಟನೆ ಜರುಗಿದೆ.
ಮುದ್ದೇಬಿಹಾಳ ತಾಲೂಕಿನ ಪೀರಾಪುರ-ಬೂದಿಹಾಳ ಏತ ನೀರಾವರಿ ಯೋಜನೆಗಾಗಿ ಸರ್ಕಾರ ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಮುಂದಾಗಿರುವ ಜಮೀನು ತಮಗೇ ಸೇರಿದ್ದು. ಆದರೆ, ಸರ್ಕಾರ ಅಕ್ರಮವಾಗಿ ತಮ್ಮ ಜಮೀನಿನಲ್ಲಿ ಸ್ಥಾವರ ನಿರ್ಮಿಸುತ್ತಿದೆ ಎಂದು ರೈತರು ಪ್ರತಿಭಟನೆಗೆ ಮುಂದಾಗಿದ್ದರು. ಸರ್ಕಾರ ತಕ್ಷಣ ಕಾಮಗಾರಿ ಸ್ಥಗಿತಗೊಳಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದರು.
ನಾಲತವಾಡ ಬಳಿಯ ಧರಣಿ ಸ್ಥಳಕ್ಕೆ ಶನಿವಾರ ರೈತರು ವಿಷದ ಬಾಟಲಿ ಸಮೇತ ಬಂದಿದ್ದರು. ಇದರಲ್ಲಿ ರೈತ ಮಹಿಳೆಯೊಬ್ಬರು ವಿಷ ಸೇವನೆಗೆ ಯತ್ನಿಸಿದಾಗ ಸ್ಥಳದಲ್ಲಿದ್ದ ಪೊಲೀಸರು ವಿಷದ ಬಾಟಲಿ ಕಸಿದು, ರೈತರನ್ನು ಧರಣಿ ಸ್ಥಳದಿಂದ ಹೊರ ಹಾಕಿದರು.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ವಿಜಯಪುರ ಉಪ ವಿಭಾಗಾ ಧಿಕಾರಿ ಸೋಮಲಿಂಗ ಗೆಣ್ಣೂರ, ಕೆಬಿಜೆಎನ್ನೆಲ್ ಅಧಿಕಾರಿಗಳ ಸಮ್ಮುಖದಲ್ಲಿ ರೈತರೊಂದಿಗೆ ಚರ್ಚಿಸಿದರು. ಅಂತಿಮವಾಗಿ ರೈತರು ತಮ್ಮ ಜಮೀನು ಎನ್ನುವ ಕುರಿತು 15 ದಿನಗಳಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆ ಅಥವಾ ಆದೇಶ ತರಬೇಕು. ತಪ್ಪಿದಲ್ಲಿ ಕಾಮಗಾರಿ ಮುಂದುವರಿಸುವುದಾಗಿ ಅ ಧಿಕಾರಿಗಳು ತಿಳಿಸಿದರು. ಇದ್ದಕ್ಕೊಪ್ಪಿದ ರೈತರು ಧರಣಿ ಕೈಬಿಟ್ಟು, ಸ್ಥಳದಿಂದ ಕದಲಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ