ಸಿದ್ದರಾಮಯ್ಯ ನೀಡಿದ 2 ಲಕ್ಷ ರೂ. ಪರಿಹಾರ ಧನವನ್ನೇ ಎಸೆದ ಮಹಿಳೆ!
ಬಾದಾಮಿಯ ಕೆರೂರ ಪಟ್ಟಣದಲ್ಲಿ ನಡೆದಿದ್ದ ಗುಂಪು ಘರ್ಷಣೆ
Team Udayavani, Jul 15, 2022, 1:43 PM IST
ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ 2 ಲಕ್ಷ ರೂ ಪರಿಹಾರ ಧನವನ್ನು ಮಹಿಳೆಯೊಬ್ಬರು ಎಸೆದ ಘಟನೆ ಶುಕ್ರವಾರ ನಡೆದಿದೆ.
ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದ ಕೆರೂರ ಗುಂಪು ಘರ್ಷಣೆ ಗಾಯಾಳುಗಳ ಭೇಟಿಗೆ ಬಾಗಲಕೋಟೆಗೆ ಆಗಮಿಸಿದ ವೇಳೆ ಘಟನೆ ನಡೆದಿದ್ದು, ಗಾಯಾಳುಗಳ ಸಂಬಂಧಿಗಳು ಆಕ್ರೋಶ ಹೊರ ಹಾಕಿದ್ದಾರೆ. ಗಾಯಾಳುಗಳಿಗೆ ನೀಡಿದ ಹಣವನ್ನೇ ಮರಳಿ ಸಿದ್ದರಾಮಯ್ಯಗೆ ನೀಡಲು ಮುಂದಾಗಿದ್ದಾರೆ. ನಮಗೆ ನ್ಯಾಯ ಬೇಕು, ಹಣ ಬೇಡ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಈ ವೇಳೆ ವಾಹನದಲ್ಲಿ ಸಿದ್ದರಾಮಯ್ಯ ಅವರು ಮರಳುತ್ತಲೇ ಹಣ ಹಿಡಿದು ವಾಹನದ ಹಿಂದೆ ಹೋದ ಮಹಿಳೆ ಹಣದ ಕಟ್ಟನ್ನು ಪೊಲೀಸ್ ಬೆಂಗಾವಲು ವಾಹನಕ್ಕೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಆಶೀರ್ವಾದ ಆಸ್ಪತ್ರೆಗೆ ಸಿದ್ದರಾಮಯ್ಯ ಭೇಟಿ ನೀಡಿ ಘರ್ಷಣೆಯಲ್ಲಿ ಗಾಯಗೊಂಡ ಹನೀಫ್, ರಾಜೇಸಾಬ್, ರಫೀಕ್, ದಾವಲ್ ಮಲೀಕ್ ಅವರನ್ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಘರ್ಷಣೆಯಲ್ಲಿ ಗಾಯಗೊಂಡಿದ್ದ ಇನ್ನೊಂದು ಗುಂಪು ಸಿದ್ದರಾಮಯ್ಯ ಭೇಟಿಗೆ ನಕಾರ ವ್ಯಕ್ತಪಡಿಸಿದೆ ಎಂದು ತಿಳಿದು ಬಂದಿದೆ.
”ನಾನು ಮಾನವೀಯತೆಯಿಂದ ಹಣ ನೀಡಿದ್ದೇನೆ. ಆ ಮಹಿಳೆಯನ್ನು ಯಾರೋ ಎತ್ತಿ ಕಟ್ಟಿದ್ದಾರೆ. ಹಾಗಾದರೆ ಮೃತಪಟ್ಟವರು ಎದ್ದು ಬರುತ್ತಾರೋ?” ಎಂದು ಸಿದ್ದರಾಮಯ್ಯ ಘಟನೆಯ ಬಳಿಕ ಪ್ರತಿಕ್ರಿಯೆ ನೀಡಿದ್ದಾರೆ.
ಸಿದ್ದರಾಮಯ್ಯ ಆಗಮಿಸಿದ ಹಿನ್ನೆಲೆಯಲ್ಲಿ ಡಿಸಿ ಸುನೀಲ್ ಕುಮಾರ್, ಎಸ್ಪಿ ಜಯಪ್ರಕಾಶ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ