ಧಾರವಾಡ ಕಟ್ಟಡ ದುರಂತ ; ಅವಶೇಷಗಳಡಿಯಿಂದ ಮಹಿಳೆಯ ರಕ್ಷಣೆ
Team Udayavani, Mar 22, 2019, 2:01 PM IST
ಧಾರವಾಡ: ಕುಮಾರೇಶ್ವರ ನಗರದಲ್ಲಿ ಬಹುಮಹಡಿ ಕಟ್ಟಡ ದುರಂತ ನಡೆದ ಸ್ಥಳದಲ್ಲಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯ ನಡೆಸಲಾಗುತ್ತಿದ್ದು , ಶುಕ್ರವಾರ ಮಹಿಳೆಯೊಬ್ಬರನ್ನು ರಕ್ಷಿಸಲಾಗಿದೆ. ಇದುವರೆಗೆ ಒಟ್ಟು 62 ಮಂದಿಯನ್ನು ರಕ್ಷಿಸಲಾಗಿದೆ. ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 14 ಕ್ಕೇರಿದೆ.
ಹೊನ್ನಮ್ಮ ಎನ್ನುವ ಮಹಿಳೆಯನ್ನು ಅವಶೇಷಗಳಡಿಯಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.
ಇನ್ನೂ ಎರಡು ದಿನ ಕಾರ್ಯಾಚರಣೆ ಮುಂದುವರಿ ಯುವ ನಿರೀಕ್ಷೆ ಇದ್ದು, ಈಗ ಕಟ್ಟಡದ ಅವಶೇಷಗಳನ್ನು ದೈತ್ಯ ಯಂತ್ರಗಳಿಂದ ಒಡೆದು ತೆರವುಗೊಳಿಸಲಾಗುತ್ತಿದೆ.
ಕಟ್ಟಡದ ಅವಶೇಷಗಳಡಿ ಇನ್ನೂ ಕೆಲ ಜನರು ಇರುವ ಸಾಧ್ಯತೆ ಇದ್ದು ಜಾಗರೂಕತೆಯಿಂದ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ.
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಗುರುವಾರ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ಪರಿಶೀಲಿಸಿದ್ದರು.
ಮೂರು ಅಂತಸ್ತಿಗೆ ಪರವಾನಗಿ ಪಡೆದು ಆರು ಅಂತಸ್ತುಗಳನ್ನು ನಿರ್ಮಿಸುತ್ತಿದ್ದ ಕಟ್ಟಡವೊಂದು
ಮಂಗಳವಾರ ಮಧ್ಯಾಹ್ನ ದಿಢೀರ್ನೆ ಕುಸಿದು ಬಿದ್ದು ದುರಂತ ಸಂಭವಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ