ಕಾರ್ಮಿಕರ ನಿರ್ವಹಣೆ: ಅಧಿಕಾರಿಗಳಿಗೆ ಬುಲಾವ್
Team Udayavani, May 23, 2020, 7:13 AM IST
ಬೆಂಗಳೂರು: ಲಾಕ್ಡೌನ್ ಸಡಿಲಿಕೆ ನಂತರ ವಲಸೆ ಕಾರ್ಮಿಕರನ್ನು ತವರು ರಾಜ್ಯಗಳಿಗೆ ಕಳಿಸಿಕೊಡುವ ಹಾಗೂ ಪ್ರಯಾಣ ವೆಚ್ಚ ಭರಿಸುವ ವಿಚಾರ ಸೇರಿ ಒಟ್ಟಾರೆ ವಲಸೆ ಕಾರ್ಮಿಕರ ನಿರ್ವಹಣೆ ಕುರಿತು ವಿವರಣೆ ನೀಡಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಹೈಕೋರ್ಟ್ ಬುಲಾವ್ ನೀಡಿದೆ.
ವಲಸೆ ಕಾರ್ಮಿಕರ ವಿಚಾರವಾಗಿ ಎಐಸಿಸಿಟಿಯು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 26ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿ ಸಂಪೂರ್ಣ ವಿವರಣೆ ನೀಡುವಂತೆ ಸರ್ಕಾರ ದ ಮುಖ್ಯ ಕಾರ್ಯದರ್ಶಿ ಹಾಗೂ ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ತಾಕೀತು ಮಾಡಿದೆ.
ಅರ್ಜಿ ವಿಚಾರಣೆ ವೇಳೆ, ತವರು ರಾಜ್ಯಗಳಿಗೆ ತೆರಳಬ ಯಸುವ ವಲಸೆ ಕಾರ್ಮಿಕರ ಪ್ರಯಾಣ ದರ ಪಾವತಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಸ್ಪಷ್ಟ ನಿಲುವು ತಿಳಿಸದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ನ್ಯಾಯಪೀಠ, ರಾಜ್ಯದಲ್ಲಿ ವಲಸೆ ಕಾರ್ಮಿಕರು ಅತ್ಯಂತ ಅಪಾಯಕಾರಿ ಸ್ಥಿತಿಯಲ್ಲಿದ್ದಾರೆ. ಅವರ ಪ್ರಯಾಣ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸದೇ ಇರುವುದು ದುರದೃಷ್ಟಕರ ಸಂಗತಿ. ವಲಸೆ ಕಾರ್ಮಿಕರು ಆಹಾರಕ್ಕಾಗಿ ಸರ್ಕಾರದತ್ತ ನೋಡುತ್ತಿದ್ದಾರೆ. ಈ ಬಗ್ಗೆ ಇದೇ 26ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಖುದ್ದು ವಿವರಣೆ ನೀಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ