ಪೂಜೆ ವಿವಾದ; ಎರಡು ಬಣಗಳ ನಡುವೆ ಮಾರಾಮಾರಿ
Team Udayavani, Jun 6, 2019, 3:00 AM IST
ನಾಗಮಂಗಲ: ತಾಲೂಕಿನ ಮುಳುಕಟ್ಟೆ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ಮುಳುಕಟ್ಟಮ್ಮ ದೇವಾಲಯದ ಪೂಜೆ ವಿಚಾರವಾಗಿ ಎರಡು ಬಣಗಳ ನಡುವೆ ಬುಧವಾರ ಮಾರಾಮಾರಿ ನಡೆದಿದ್ದು ಘಟನೆ ಸಂಬಂಧ ಮುಳುಕಟ್ಟೆ ಗ್ರಾಮದ 13 ಮಂದಿಯನ್ನು ಬಂಧಿಸಲಾಗಿದೆ.
ದೇವಾಲಯದ ಪೂಜೆ ಸಂಬಂಧ ಟ್ರಸ್ಟ್ ಎರಡು ಬಣಗಳನ್ನು ನೇಮಿಸಿತ್ತು. ಕಾರಣಾಂತರಗಳಿಂದ ಒಂದು ಬಣದವರು ಅನೇಕ ವರ್ಷಗಳಿಂದ ಪೂಜೆಯಿಂದ ಹೊರಗುಳಿದಿದ್ದರು. ಅದೇ ಬಣದವರು ಬುಧವಾರ ಬೆಳಗ್ಗೆ ಏಕಾಏಕಿ ದೇವಾಲಯಕ್ಕೆ ಬಂದು ಪೂಜೆ ವಿಚಾರ ಮಾತನಾಡಿದ್ದಾರೆ.
ಆಗ ವಾದ ವಿವಾದ ನಡೆದು ಎರಡು ಬಣಗಳ ನಡುವೆ ಮಾತಿ ಚಕಮಕಿ ತಾರಕಕ್ಕೇರಿ, ಕೈ ಕೈ ಮಿಲಾಯಿಸಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಪೂಜೆಯಿಂದ ಹೊರಗುಳಿದಿದ್ದವರು ದೇವಾಲಯವನ್ನು ಒಳಗಿನಿಂದ ಬೀಗ ಹಾಕಿಕೊಂಡು ಮಾರಕಾಸ್ತ್ರಗಳಿಂದ ನಮ್ಮ ಹಲ್ಲೆ ಮಾಡಲು ಯತ್ನಿಸಿದರೆಂದು ದೇಗುಲದ ಅರ್ಚಕರು ಪೊಲೀಸ್ ಠಾಣೆಗೆ ದೂರವಾಣಿ ಮೂಲಕ ಕರೆ ಮಾಡಿ ತಿಳಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾರೆಯಿಂದ ದೇವಾಲಯದ ಮುಖ್ಯದ್ವಾರ ಮುರಿದು ಒಳ ಹೋಗಿದ್ದಾರೆ. ಪೋಲೀಸರೊಂದಿಗೂ ಮಾತಿನ ಚಕಮಕಿ, ತಳ್ಳಾಟ ನೂಕಾಟ ನಡೆದು, ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ಶಾಂತಗೊಳಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ