ಚಾಮುಂಡಿ ದೇಗುಲದಲ್ಲಿ ಪೂಜೆ ಸ್ಥಗಿತ, ಅರ್ಚಕರು,ಸಿಬಂದಿಗಳ ಪ್ರತಿಭಟನೆ
Team Udayavani, Dec 14, 2018, 1:36 PM IST
ಮೈಸೂರು: ಚಾಮುಂಡಿಬೆಟ್ಟದ ನಾಡದೇವತೆ ಚಾಮುಂಡೇಶ್ವರಿ ದೇವಸ್ಥಾನ ಮತ್ತು ಸಮೂಹ ದೇಗುಲಗಳಲ್ಲಿ ಅರ್ಚಕರು ಮತ್ತು ಸಿಬಂದಿಗಳು ಶುಕ್ರವಾರದಿಂದ ಮುಷ್ಕರ ಆರಂಭಿಸಿದ್ದಾರೆ. ಇದರಿಂದಾಗಿ ದೇವಾಲಯದಲ್ಲಿ ಪೂಜೆಗಳು ಸ್ಥಗಿತಗೊಂಡಿದ್ದು,ಭಕ್ತರಿಗೆ ದೇವತೆಯ ದರ್ಶನ ಮಾತ್ರ ಲಭ್ಯವಾಗಿದ್ದು ಯಾವುದೇ ಸೇವೆಗಳು ಸಿಗುತ್ತಿಲ್ಲ.
ಭಕ್ತರ ಅನುಕೂಲಕ್ಕಾಗಿ ದೇವಸ್ಥಾನ ತೆರೆಯಲಾದ್ದು, ಕೇವಲ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಚಾಮುಂಡೇಶ್ವರಿ ಹಾಗೂ ಸಮೂಹ ದೇವಾಲಯಗಳ ನೌಕರರ ಸಂಘದ ಸದಸ್ಯರು ಹಾಗೂ ಜಿಲ್ಲಾಧಿಕಾರಿಗಳ ನಡುವಿನ ಸಂಧಾನ ಸಭೆ ವಿಫಲವಾಗಿದೆ.
ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಕಾರ್ಯನಿರ್ವಹಿಸು ತ್ತಿರುವ ಅರ್ಚಕರಿಗೆ 6ನೇ ವೇತನ ಆಯೋಗದ ನಿಯದಂತೆ ಶೇ.30 ವೇತನ ಹೆಚ್ಚಿಸ ಬೇಕು. ಹೆಚ್ಚುವರಿ ತುಟ್ಟಿಭತ್ಯೆ,ಮತ್ತಿರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಚಾಮುಂಡೇಶ್ವರಿ, ಸಮೂಹ ದೇಗುಲಗಳ ನೌಕರರ ಸಂಘದ ಪ್ರತಿಭಟನೆ ಕೈಗೊಳ್ಳಲಾಗಿದೆ.
ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪ
ಬಿಜೆಪಿ ಶಾಸಕ ಎಸ್.ಎ.ರಾಮ್ದಾಸ್ ಅವರು ಪ್ರತಿಭಟನೆ ವಿಚಾರವನ್ನು ವಿಧಾನಸಭೆಯಲ್ಲಿ ಪ್ರಸ್ತಾವಿಸಿ ಸಮಸ್ಯೆ ಬಗೆ ಹರಿಸಬೇಕು ಎಂದು ಮನವಿ ಮಾಡಿದರು. 175 ಜನರು ಸೇವೆ ನಿಲ್ಲಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. 4 ವರ್ಷಗಳಿಂದ ಅವರು 6 ನೇ ವೇತನ ಆಯೋಗದ ನಿಯಮದಂತೆ ವೇತನ ಹೆಚ್ಚಿಸಲು ಮನವಿ ಮಾಡಿದ್ದಾರೆ ಎಂದರು.
ಮಜರಾಯಿ ಸಚಿವ ರಾಜಶೇಖರ್ ಪಾಟೀಲ್ ಪ್ರತಿಕ್ರಿಯಿಸಿ ಸಮಸ್ಯೆ ಬಗೆ ಹರಿಸುವ ಭವರಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ