ಪ್ರಾಧ್ಯಾಪಕರ ಕಾರ್ಯಭಾರದ ಬಗ್ಗೆ ತಪ್ಪು ಮಾಹಿತಿ


Team Udayavani, Sep 1, 2017, 10:47 AM IST

01-STATE-9.jpg

ಬೆಂಗಳೂರು: ಪ್ರಾಧ್ಯಾಪಕರ ಕಾರ್ಯಭಾರ ವಿಚಾರದಲ್ಲಿ 107 ಸರ್ಕಾರಿ ಕಾಲೇಜುಗಳ ಪ್ರಾಂಶುಪಾಲರು ಕಾಲೇಜು ಶಿಕ್ಷಣ ಇಲಾಖೆಗೇ ತಪ್ಪು ಮಾಹಿತಿ ನೀಡಿರುವ ವಿಚಾರ ಬಹಿರಂಗಗೊಂಡಿದೆ. ಆಯಾ ಕಾಲೇಜುಗಳಲ್ಲಿ ಪ್ರಾಧ್ಯಾಪಕರು ವಿದ್ಯಾರ್ಥಿಗಳ ಅನುಪಾತಕ್ಕಿಂತ ಹೆಚ್ಚಾಗಿದ್ದರೂ ಅದನ್ನು ಮುಚ್ಚಿಟ್ಟು ಕಡಿಮೆ ಪ್ರಾಧ್ಯಾಪಕರು ಇರುವುದಾಗಿ ಅಸ್ಪಷ್ಟ ಅಂಕಿ-ಅಂಶ ನೀಡಿ ಆ ಮೂಲಕ ಕೆಲವು ಪ್ರಾಧ್ಯಾಪಕರನ್ನು ಕೆಲಸವಿಲ್ಲದೆ ಕಾಲೇಜುಗಳಲ್ಲಿ ಉಳಿಸಿಕೊಂಡಿರುವುದು ಪರಿಶೀಲನೆ ವೇಳೆ ದೃಢಪಟ್ಟಿದೆ.

ಇದರಿಂದಾಗಿ ಕೆಲವು ಕಾಲೇಜುಗಳಲ್ಲಿ ಹೆಸರಿಗೆ ಮಾತ್ರ ಪ್ರಾಧ್ಯಾಪಕರು. ಆದರೆ, ಅವರು ತರಗತಿಗಳನ್ನೇ ತೆಗೆದುಕೊಳ್ಳುತ್ತಿರಲಿಲ್ಲ. ಆದರೆ, ವೇತನ ಮಾತ್ರ ಇಲಾಖೆಯಿಂದ ಹೋಗುತ್ತಿತ್ತು ಎಂಬ ಆಘಾತಕಾರಿ ಅಂಶವೂ ಬಯಲಾಗಿದೆ. ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಇಂತಹ ಪ್ರಕರಣ ನಡೆದಿರುವುದು ಅಚ್ಚರಿ ತಂದಿದ್ದು, ಪ್ರಾಧ್ಯಾಪಕರ ಕಾರ್ಯಭಾರದ ತಪ್ಪು ಮಾಹಿತಿ ನೀಡಿದ 107 ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರಿಗೆ ಕಾಲೇಜು ಶಿಕ್ಷಣ ಇಲಾಖೆ ನೋಟಿಸ್‌ ಜಾರಿ ಮಾಡಿದೆ. ಅಷ್ಟೇ ಅಲ್ಲ, ಸಂಬಂಧಪಟ್ಟ ಪ್ರಾಂಶುಪಾಲರು ತಾವು ಮಾಡಿದ ತಪ್ಪಿಗೆ ವಿವರಣೆ ನೀಡುವಂತೆ ಸೂಚಿಸಲಾಗಿದ್ದು, ತಪ್ಪಿದಲ್ಲಿ ಕರ್ನಾಟಕ ನಾಗರಿಕ ಸೇವಾ ನಿಯಮದ ಪ್ರಕಾರ ಶಿಸ್ತು ಕ್ರಮ ಜರುಗಿಸುವ ಎಚ್ಚರಿಕೆ ನೀಡಲಾಗಿದೆ.

ಹಿನ್ನೆಲೆ: ಪ್ರತಿ ವರ್ಷ ಉಪನ್ಯಾಸಕರ ವರ್ಗಾವಣೆಯ ನಂತರ ಹೆಚ್ಚುವರಿಯಾಗಿ ಉಳಿದಿರುವ ಅಥವಾ ವಿದ್ಯಾರ್ಥಿಗಳ ದಾಖಲೆಗೆ ಅನುಗುಣವಾಗಿ ಪ್ರಾಧ್ಯಾಪಕರು ಸೇವೆ ಸಲ್ಲಿಸುತ್ತಿದ್ದು, ಹೆಚ್ಚುವರಿಯಾಗಿರುವ ಪ್ರಾಧ್ಯಾಪಕರ (ಕಾರ್ಯಭಾರದ) ಮಾಹಿತಿಯನ್ನು ಇಎಂಐಎಸ್‌ ತಂತ್ರಾಂಶದ ಮೂಲಕ ಇಲಾಖೆಗೆ ಸಲ್ಲಿಸಬೇಕು. ಆ ಮಾಹಿತಿ ಪ್ರಕಾರ ಕಾರ್ಯಭಾರದ ಕೊರತೆ ಇರುವ ಕಾಲೇಜುಗಳಿಗೆ ಹೆಚ್ಚುವರಿ ಇರುವ ಉಪನ್ಯಾಸಕರನ್ನು ನಿಯೋಜಿಸಲಾಗುವುದು.  ಆದರೆ, 2016-17ನೇ ಸಾಲಿನಲ್ಲಿ ರಾಜ್ಯದ 107 ಸರ್ಕಾರಿ ಪಪೂ ಕಾಲೇಜಿನ ಪ್ರಾಂಶುಪಾಲರು ತಮ್ಮ ಕಾಲೇಜಿನ ಉಪನ್ಯಾಸಕರ ಕಾರ್ಯಭಾರಕ್ಕೆ ಸಂಬಂಧಿಸಿದಂತೆ ತಪ್ಪು ಮಾಹಿತಿ ಸಲ್ಲಿಸಿ, ಇಲಾಖೆಯಲ್ಲಿ ಹಲವು ಗೊಂದಲ ಸೃಷ್ಟಿದ್ದಾರೆ. 

ಕಾಲೇಜಿನ ಆಡಳಿತಾತ್ಮಕ ಅಂಶಗಳನ್ನು ಸಂಪೂರ್ಣವಾಗಿ ಪ್ರಾಂಶುಪಾಲರೇ ನಿಭಾಯಿಸಬೇಕು. ಎಲ್ಲಾ ಜವಾಬ್ದಾರಿಯನ್ನು ಅವರ ಮೇಲೆ ವಹಿಸಲಾಗುತ್ತದೆ. ಉಪನ್ಯಾಸಕರ ವರ್ಗಾವಣೆ ಸಂದರ್ಭದಲ್ಲಿ ಇಎಂಎಐಎಸ್‌ ನಲ್ಲಿ ಕಾರ್ಯಭಾರ ಅಥವಾ ಬೋಧಕರ ಮಾಹಿತಿಯನ್ನು ಸ್ವಷ್ಟವಾಗಿ ನಮೂದಿಸಬೇಕು. ಆದರೆ, 107 ಕಾಲೇಜಿನ ಪ್ರಾಂಶುಪಾಲರು ಮಾಡಿರುವ ಯಡವಟ್ಟಿನಿಂದಾಗಿ ಇಲಾಖೆಯಲ್ಲಿ ಸಾಕಷ್ಟು ಗೊಂದಲ ಹಾಗೂ ಆಡಳಿತಾತ್ಮಕ ಸಮಸ್ಯೆ ಎದುರಾಗಿದೆ. ಕೆಲವು ಪ್ರಾಂಶುಪಾಲರು ಹುದ್ದೆಗಳನ್ನು ಸ್ಥಳಾಂತರಗೊಳಿಸಿದ್ದು, ಕಾರ್ಯಭಾರ ಇದೆ ಎಂಬ ತಪ್ಪು ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಕೊರತೆ ಇರುವ ಕಡೆ ಉಪನ್ಯಾಸಕರನ್ನು ನಿಯೋಜಿಸಲು ಸಾಧ್ಯವಾಗದೆ, ಇತ್ತ ಹೆಚ್ಚುವರಿ ಕಡೆಯೂ ಅವರಿಂದ ಕೆಲಸ
ತೆಗೆಸಲು ಆಗದೆ ಪುಕ್ಕಟೆ ವೇತನ ನೀಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಉದ್ಯೋಗಿಗಳಾಗಿ ಈ ರೀತಿ ತಪ್ಪು ಮಾಡಿರುವುದು ಕರ್ನಾಟಕ ನಾಗರಿಕ ಸೇವಾ(ನಡತೆ) ನಿಯಮ 1966ರ ಸ್ಪಷ್ಟ ಉಲ್ಲಂಘನೆಯಾಗಿದೆ. ನಿಮಯ 1657ರ ಪ್ರಕಾರ ಶಿಸ್ತು ಕ್ರಮ ತೆಗೆದುಕೊಳ್ಳಲು ಇಲಾಖೆ ತೀರ್ಮಾನಿಸಿದೆ. ತಪ್ಪಿತಸ್ಥ ಪ್ರಾಂಶುಪಾಲರ ವಿರುದ್ಧ ಶೀಘ್ರವೇ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

ತಪ್ಪು ಮಾಹಿತಿ ನೀಡಿದ ಪ್ರಮುಖ ಕಾಲೇಜುಗಳು ತಪ್ಪು ಮಾಹಿತಿ ನೀಡಿದ ಕಾಲೇಜುಗಳಲ್ಲಿ ಬೆಂಗಳೂರಿನ ಗೃಹ ವಿಜ್ಞಾನ ಕಾಲೇಜು, ಆರ್‌.ಸಿ. ವಾಣಿಜ್ಯ ಕಾಲೇಜು, ಸಿಂಧನೂರು, ಕೆ.ಆರ್‌.ಪೇಟೆ, ಮಲ್ಲೇಶ್ವರ, ಯಲಹಂಕ, ರಾಮನಗರ, ಮೈಸೂರು, ಹಾಸನ, ಕಾರವಾರ, ಪುತ್ತೂರು, ಕುಂದಾಪುರ, ಆರ್‌.ಟಿ.ನಗರ, ಶಿರಾ, ಧಾರವಾಡ, ಶಿವಮೊಗ್ಗ… ಹೀಗೆ ವಿವಿಧ ಜಿಲ್ಲೆಯ ಒಟ್ಟು 107 ಸರ್ಕಾರಿ ಪದವಿ ಕಾಲೇಜುಗಳು ಸೇರಿವೆ.

ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.