Yatnal ಅವರು ಹಶ್ಮಿಯ ಉಗ್ರ ನಂಟಿನ ಆರೋಪವನ್ನು ಸಾಬೀತುಪಡಿಸಲಿ: ಸಿಎಂ ಸವಾಲು
ಕೇಂದ್ರ ಏಜೆನ್ಸಿಗಳ ಮೂಲಕವೂ ತನಿಖೆಗೆ ಒಳಪಡಿಸಿ...
Team Udayavani, Dec 7, 2023, 4:52 PM IST
ಬೆಳಗಾವಿ : ಮುಸ್ಲಿಂ ಧಾರ್ಮಿಕ ಮುಖಂಡ ಸೈಯದ್ ತನ್ವೀರ್ ಹಶ್ಮಿ ಅವರು ಭಯೋತ್ಪಾದಕ ಗುಂಪು ಐಸಿಸ್ನ ಸಹಾನುಭೂತಿ ಹೊಂದಿದ್ದಾರೆ ಎಂಬ ಆರೋಪವನ್ನು ಸಾಬೀತುಪಡಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಗುರುವಾರ ಸವಾಲು ಹಾಕಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆ ಹಂಚಿಕೊಂಡ ಕುರಿತು ಯತ್ನಾಳ್ ಅವರು ಸೈಯದ್ ತನ್ವೀರ್ ಹಶ್ಮಿ ಅವರಿಗೆ ಐಸಿಸ್ನ ನಂಟು ಇದೆ ಎಂದು ಆರೋಪಿಸಿ ಮುಖ್ಯಮಂತ್ರಿಗಳ ನಡೆ ಖಂಡನೀಯ ಎಂದು ಗಂಭೀರ ಆರೋಪ ಮಾಡಿದ್ದರು.
ಆರೋಪದ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ”ಯತ್ನಾಳ್ ಅವರದ್ದೇ ಪಕ್ಷ ಕೇಂದ್ರದಲ್ಲಿ ಆಡಳಿತ ನಡೆಸುತ್ತಿದ್ದು, ಕೇಂದ್ರೀಯ ಸಂಸ್ಥೆಗಳಿಂದ ತನಿಖೆ ನಡೆಸಲಿ” ಎಂದು ಒತ್ತಾಯಿಸಿದ್ದಾರೆ.
ಹಶ್ಮಿ ಅವರಿಗೆ ಹಲವು ವರ್ಷಗಳಿಂದ ಪರಿಚಯವಿದ್ದು, ಇಷ್ಟು ಸಮಯ ಬಿಜೆಪಿ ಏಕೆ ಮೌನವಾಗಿತ್ತು ಎನ್ನುವುದು ಆಶ್ಚರ್ಯ. ಯತ್ನಾಳ್ ದ್ವೇಷದ, ಅಲ್ಪಸಂಖ್ಯಾತರ ವಿರೋಧಿ ರಾಜಕಾರಣ ಮಾಡುತ್ತಿದ್ದಾರೆ. ಚುನಾವಣೆ ಗೆಲ್ಲಲು ಈ ರೀತಿ ಮಾಡಬಾರದು. ಇದಲ್ಲದೆ, ಅವರು ದೊಡ್ಡ ಸುಳ್ಳುಗಾರ. ಹಶ್ಮಿ ಅವರೂ ಆರೋಪವನ್ನು ಸಾಬೀತುಪಡಿಸುವಂತೆ ಕೇಳಿಕೊಂಡಿದ್ದಾರೆ. ಕೇಂದ್ರದಲ್ಲಿ ಕಳೆದ 10 ವರ್ಷಗಳಿಂದ ಬಿಜೆಪಿ ಸರಕಾರವಿದೆ. ಇಷ್ಟು ವರ್ಷಗಳಿಂದ ಅವರು ಏನು ಮಾಡುತ್ತಿದ್ದಾರೆ?” ಎಂದು ಪ್ರಶ್ನಿಸಿದರು.
ಯತ್ನಾಳ್ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗಲು, ವಿಪಕ್ಷ ನಾಯಕರಾಗಲು ಪ್ರಯತ್ನಿಸಿ ವಿಫಲರಾದರು. ಈಗ ಆಧಾರರಹಿತ ಆರೋಪ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ