ಪರಿಷತ್ ಚುನಾವಣೆ ಭಾರೀ ಅಂತರದಿಂದ ಗೆಲ್ಲುತ್ತೇವೆ: ಯಡಿಯೂರಪ್ಪ ವಿಶ್ವಾಸ
ಸಿದ್ದರಾಮಯ್ಯ ಜತೆ ಯಾವುದೇ ರಾಜಕೀಯ ವಿಚಾರ ಚರ್ಚೆ ಆಗಿಲ್ಲ
Team Udayavani, Jun 6, 2022, 9:06 PM IST
ಬೆಳಗಾವಿ : ವಾಯುವ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳಲ್ಲಿ ನಾವು ಭಾರೀ ಅಂತರದಿಂದ ಗೆಲ್ಲುತ್ತೇವೆ ಎಂದು
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ವಾಯುವ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಎರಡು ದಿನ ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಹನುಮಂತ ನಿರಾಣಿ ಹಾಗೂ ಅರುಣ ಶಹಾಪುರ ಪರ ಪ್ರಚಾರ ಮಾಡಲಿದ್ದೇನೆ ಎಂದರು.
ನಿರಾಣಿ ಹಾಗೂ ಶಹಾಪುರ ಗೆಲುವು ನಿಶ್ಚಿತ. ಇದಲ್ಲದೆ ರಾಜ್ಯಸಭೆಯ ಮೂರು ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ. ಪ್ರಧಾನಿ ಮೋದಿ ಆಶೀರ್ವಾದದಿಂದ ವಾತಾವರಣ ನಮ್ಮ ಪರ ಇದೆ ಎಂದು ಹೇಳಿದರು.
ಹನುಮಂತ ನಿರಾಣಿ ಅವರ ಗೆಲುವಿನ ಅಂತರ 50 ಸಾವಿರ ಆಗಲಿದೆ. ಶಹಾಪುರ 15 ಸಾವಿರ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಭೇಟಿ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಯಾವುದೇ ರಾಜಕೀಯ ವಿಚಾರ ಚರ್ಚೆ ಆಗಿಲ್ಲ. ಅವರು ಹುಬ್ಬಳ್ಳಿ ಹೋಗುತ್ತೇನೆ ಎಂದರು.ನಾನು ಬೆಳಗಾವಿಗೆ ಹೋಗಿ ಪ್ರಚಾರ ಮಾಡುತ್ತೇವೆ ಎಂದು ಹೇಳಿದೆ.
ವಿರೋಧ ಪಕ್ಷದಲ್ಲಿ ಇದ್ದ ಮಾತ್ರಕ್ಕೆ ವಿರೋಧ ಮಾಡಬೇಕು ಅಂತೇನಿಲ್ಲ. ಆತ್ಮೀಯತೆ, ವಿಶ್ವಾಸಕ್ಕೆ ರಾಜಕೀಯಕ್ಕೆ ಯಾವುದೇ ಸಂಬಂಧವಿಲ್ಲ ಎಂದರು. ಆರ್ ಎಸ್ ಎಸ್ ವಿರುದ್ಧ ಕಾಂಗ್ರೆಸ್ ಅಭಿಯಾನದ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ