ಯಡಿಯೂರಪ್ಪ ಬಳಿ ಕ್ಷಮೆ ಕೇಳಿಲ್ಲ
Team Udayavani, Feb 12, 2020, 3:06 AM IST
ಹರಪನಹಳ್ಳಿ: ಉಪ ಚುನಾವಣೆಯಲ್ಲಿ ಗೆಲುವು ಪಡೆದ ಪಂಚಮಸಾಲಿ ಸಮುದಾಯದ ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ನೀಡದಿರುವುದು ಪಂಚಮಸಾಲಿ ಸಮಾಜ ತುಳಿಯುವ ಹುನ್ನಾರವಲ್ಲದೇ ಮತ್ತೇನು ಎಂದು ಹರಿಹರದ ವೀರಶೈವ ಲಿಂಗಾಯಿತ ಪಂಚಮ ಸಾಲಿ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ಪ್ರಶ್ನಿಸಿದರು.
ಹರಪನಹಳ್ಳಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಹೇಶ ಕುಮಟಳ್ಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸರ್ಕಾರ ರಚಿಸುವ ಉದ್ದೇಶದಿಂದ ಬಂದಿದ್ದಾರೆ. ಅಂದರೆ ಬಿಜೆಪಿ ಸರ್ಕಾರ ರಚಿಸುವಲ್ಲಿ ಮಹೇಶ ಕುಮಟಳ್ಳಿ ಅವರ ಪಾತ್ರವಿದೆ ಅಲ್ಲವೇ? ಎಂದರು.
ನಮ್ಮ ಸಮುದಾಯಕ್ಕೆ ಮಂತ್ರಿ ಸ್ಥಾನ ನೀಡಬೇಕು ಎಂದು ನೀಡಿರುವ ಹೇಳಿಕೆಗೆ ನಾನು ಈಗಲೂ ಬದ್ಧ. ನಾನು ಮುಖ್ಯಮಂತ್ರಿಗಳಿಗೆ ಕ್ಷಮೆ ಕೋರಿದ್ದೇನೆ ಎನ್ನುವುದು ವದಂತಿ. ನಾವೇನು ಚುನಾವಣೆಗೆ ಸ್ಪರ್ಧಿಸಲ್ಲ, ಆದರೆ ನಮ್ಮ ಸಮಾಜದವರಿಗೆ ಅಧಿಕಾರ ಕಲ್ಪಿಸಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಮೇಲೆತ್ತುವ ಉದ್ದೇಶ ನಮ್ಮದಾಗಿದೆ ಎಂದು ತಿಳಿಸಿದರು.
ಮುರುಗೇಶ ನಿರಾಣಿ ಬಗ್ಗೆ ಮಾತನಾಡಿದ ವಿಷಯವನ್ನು ಕೆಲವರು ಹುನ್ನಾರ ನಡೆಸಿ ದೊಡ್ಡದು ಮಾಡಿದರು. ನಂತರ, ಸತ್ಯ ಅರಿವಾಗಿದೆ. ಇದೀಗ ಸಚಿವ ಸಂಪುಟ ರಚನೆಯಾದ ನಂತರ ಪಂಚಮಸಾಲಿ ಸಮುದಾಯ ಜಾಗೃತವಾಗಿದ್ದು, ಉದ್ದೇಶ ಪೂರ್ವಕವಾಗಿ ನಮ್ಮ ಸಮುದಾಯವನ್ನು ತುಳಿಯುತ್ತಿದ್ದಾರೆ ಎಂಬದು ಮನವರಿಕೆಯಾಗಿದೆ ಎಂದರು.
ನಮ್ಮ ಸಮಾಜದ ಪರವಾಗಿ ನಾವು ಧ್ವನಿ ಎತ್ತದೇ ಮತ್ಯಾರು ಕೇಳಬೇಕು? ನನ್ನ ಉಸಿರು ಇರುವವರೆಗೂ ನಾನು ಸಮಾಜದ ಪರವಾಗಿಯೇ ಇರುತ್ತೇನೆ. ಹರ ಜಾತ್ರೆಯಲ್ಲಿ ಸ್ವಾಮೀಜಿ ನೀವು ಮಾತನಾಡಿದ್ದು ಸರಿ ಇದೆ ಎಂದು ಭಕ್ತರು ಪ್ರತಿಪಾದಿಸುತ್ತಿದ್ದಾರೆ ಎಂದರು.
ರಾಜ್ಯಾದ್ಯಂತ ಗ್ರಾಮ ದರ್ಶನ: ಪಂಚಮಸಾಲಿ ಸಮಾಜದ ಬಗ್ಗೆ ಜಾಗೃತಿ ಮೂಡಿಸಲು ಮಾರ್ಚ್ ಮೊದಲನೇ ವಾರದಿಂದ ಇಡೀ ರಾಜ್ಯಾದ್ಯಂತ ಗ್ರಾಮ ದರ್ಶನ ನಡೆಸಲಿದ್ದೇವೆ. ಹಳ್ಳಿಗಳಿಗೆ ತೆರಳಿ ಜನರ ಸಮಸ್ಯೆ ಆಲಿಸುತ್ತೇನೆ. ಗ್ರಾಮಾಂತರ ಭಾಗಕ್ಕೆ ತೆರಳುವುದರಿಂದ ಸಮಸ್ಯೆಗಳ ಅರಿವು ಉಂಟಾಗುವುದರ ಜೊತೆಗೆ ಸಮಾಜದ ಸಂಘಟನೆಗೆ ಒತ್ತು ನೀಡಲು ಸಹಾಯಕವಾಗಲಿದೆ ಎಂದು ವಚನಾನಂದ ಶ್ರೀ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ