ಯಡಿಯೂರಪ್ಪನವರು ತಮ್ಮ ನೋವಿನ ಕಣ್ಣೀರಿನ ಹಿಂದಿನ ಕಾರಣ ಯಾರೆಂದು ಹೇಳಲಿ: ಡಿ.ಕೆ. ಶಿವಕುಮಾರ್
Team Udayavani, Jul 26, 2021, 4:07 PM IST
ಬೆಂಗಳೂರು: ಇಂದು ರಾಜೀನಾಮೆ ವಿಚಾರ ಪ್ರಸ್ತಾಪಿಸಿ ಬಿ.ಎಸ್ ಯಡಿಯೂರಪ್ಪನವರು ಕಣ್ಣೀರಿಟ್ಟಿದ್ದು, ಇದು ಕೇವಲ ಒಬ್ಬ ವ್ಯಕ್ತಿಯ ಕಣ್ಣೀರಲ್ಲ. ರಾಜ್ಯವನ್ನು ಪ್ರತಿನಿಧಿಸುವ ಮುಖ್ಯಮಂತ್ರಿಯ ಕಣ್ಣೀರು. ಇದರ ಹಿಂದಿನ ನೋವೇನು? ಆ ನೋವು ಕೊಟ್ಟವರಾರು? ಎಂಬುದನ್ನು ರಾಜ್ಯದ ಜನರಿಗೆ ತಿಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪನವರ ರಾಜೀನಾಮೆ ಬಗ್ಗೆ ಸದಾಶಿವನಗರ ನಿವಾಸದಲ್ಲಿ ಸೋಮವಾರ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಅವರ ರಾಜೀನಾಮೆ ಹಿಂದೆ ಸಂತೋಷ ಕಾಣುತ್ತಿಲ್ಲ. ಬದಲಿಗೆ ಅವರ ನಿರ್ಧಾರದಲ್ಲಿ ನೋವು ಕಾಣುತ್ತಿದೆ. ಆ ನೋವು ಏನು? ಆ ನೋವು ಕೊಟ್ಟವರು ಯಾರು ಎಂಬುದನ್ನು ಬಿಎಸ್ ವೈ ರಾಜ್ಯದ ಜನರಿಗೆ ಸ್ಪಷ್ಟಪಡಿಸಬೇಕು ಎಂದರು.
ಇದನ್ನೂ ಓದಿ:ಯಾರಾಗಬಹುದು ಸಿಎಂ: ದೆಹಲಿ ಮಟ್ಟದಲ್ಲಿ ಪ್ರಹ್ಲಾದ ಜೋಶಿ ಬಗ್ಗೆ ಒಲವು?
ರಾಜೀನಾಮೆ ಕುರಿತ ನಮ್ಮ ವಿಮರ್ಶೆಯನ್ನು ಮುಂದೆ ತಿಳಿಸುತ್ತೇವೆ. ಆದರೆ ಅದಕ್ಕೂ ಮೊದಲು ಮುಖ್ಯಮಂತ್ರಿಗಳು ತಮ್ಮ ನೋವಿನ ಬಗ್ಗೆ ಜನರಿಗೆ ತಿಳಿಸಬೇಕು. ಎರಡು ವರ್ಷಗಳಲ್ಲಿ ಜನರು ಕೋವಿಡ್ ಸಮಸ್ಯೆಗೆ ತುತ್ತಾಗಿದ್ದರಿಂದ ನೋವಾಯ್ತಾ? ಪಕ್ಷದ ಶಾಸಕರನ್ನು ಹೈಕಮಾಂಡ್ ನಿಯಂತ್ರಣ ಮಾಡಲಿಲ್ಲ ಎಂದು ನೋವಾಯ್ತಾ? ಎಂಬುದು ಜನರಿಗೆ ಗೊತ್ತಾಗಬೇಕು ಎಂದು ಡಿಕೆ ಶಿವಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ