ಮದುವೆ ಮಾಡುವುದು ತಡವಾದ್ದರಿಂದ ಮೊಬೈಲ್ ಟವರ್ ಕಂಬ ಏರಿ ಕುಳಿತ ಯುವಕ
Team Udayavani, Jun 14, 2021, 6:02 PM IST
ಬಳ್ಳಾರಿ: ಹುಡುಗಿ ಫಿಕ್ಸ್ ಮಾಡಿದ ಮೇಲೆ ಮದುವೆ ಮಾಡೋದ್ಯಾಕೆ ತಡವೆಂದು ಯುವಕನೊಬ್ಬ ಮೊಬೈಲ್ ಟವರ್ ಏರಿ ಕುಳಿತಿತುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕು ಮರಿಯಮ್ಮನಹಳ್ಳಿಯಲ್ಲಿ ಸೋಮವಾರ ನಡೆದಿದೆ.
ಚಿರಂಜೀವಿ (23) ಟವರ್ ಏರಿ ಕುಳಿತ ಯುವಕ.
ಈಗಾಗಲೇ ಮದುವೆಗೆಂದು ಹುಡುಗಿ ಫಿಕ್ಸ್ ಮಾಡಿ ಪೋಷಕರು ಮಾತುಕತೆ ಮಾಡಿ ಮುಗಿಸಿದ್ದಾರೆ. ಪೋಷಕರಿಗೆ ಇಬ್ಬರು ಗಂಡು ಮಕ್ಕಳು ಇರೋ ಕಾರಣಕ್ಕೆ ಚಿರಂಜೀವಿಗಿಂತ ದೊಡ್ಡ ಹುಡುಗನ ಮದುವೆ ಆಗಲಿ ಎಂದು ಪೋಷಕರು ಚಿರಂಜೀವಿ ಮದುವೆ ಮಾಡುವುದನ್ನು ತಡ ಮಾಡಿದ್ದಾರೆ.
ಆದರೆ, ಪೋಷಕರ ಮಾತನ್ನು ಕೇಳದ ಚಿರಂಜೀವಿ, ನನಗೆ ಹುಡುಗಿ ಫಿಕ್ಸ್ ಮಾಡಿದ್ದೀರಿ. ಆದರೆ, ಮದುವೆ ಮಾಡುವುದನ್ನು ಏಕೆ ತಡ ಮಾಡುತ್ತಿದ್ದೀರಿ. ನನಗೆ ಮದುವೆ ಬೇಕು ಅಂತ ಈ ಹಿಂದೆಯೂ ಹಠ ಮಾಡಿದ್ದನಂತೆ. ಇದೀಗ ಪುನಃ ಮದುವೆ ಮಾಡುವಂತೆ ಹಠಕ್ಕೆ ಬಿದ್ದಿರುವ ಚಿರಂಜೀವಿ ಟವರ್ ಏರಿ ದುಃಸ್ಸಾಹಸಕ್ಕೆ ಕೈಹಾಕಿದ್ದಾನೆ.
ಸ್ಥಳಕ್ಕೆ ಆಗಮಿಸಿದ ಮರಿಯಮ್ಮನಹಳ್ಳಿ ಪೊಲೀಸರು ಕೊನೆಗೂ ಹರಸಾಹಸ ಮಾಡಿ, ಮನವೊಲಿಸಿ ಯುವಕನಮ್ನು ಟವರ್ ನಿಂದ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾನು ಇಳಿದ ಮೇಲೆ ನನಗ್ಯಾರು ಹೊಡಿಬಾರದು ಅಂತ ಷರತ್ತು ಹಾಕಿ ಯುವಕ ಚಿರಂಜೀವಿ ಟವರ್ ನಿಂದ ಕೆಳಗೆ ಇಳಿದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್