ಹಳ್ಳಿ ಹಸನಾಗಲಿ: ಗ್ರಾಮ ಕಟ್ಟುವ ಕೆಲಸದಲ್ಲಿ ಯುವ ಜನರು ಕೈಜೋಡಿಸಬೇಕು


Team Udayavani, Dec 3, 2020, 6:35 AM IST

ಹಳ್ಳಿ ಹಸನಾಗಲಿ: ಗ್ರಾಮ ಕಟ್ಟುವ ಕೆಲಸದಲ್ಲಿ ಯುವ ಜನರು ಕೈಜೋಡಿಸಬೇಕು

ಸಾಂದರ್ಭಿಕ ಚಿತ್ರ

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯದ ಗ್ರಾಮ ಸರಕಾರಗಳ ಚುಕ್ಕಾಣಿ ಹಿಡಿಯುವವರಿಗಾಗಿ ಚುನಾವಣೆ ನಡೆಯಲಿದೆ. ಕೊರೊನಾದಂಥ ಸಂಕಷ್ಟದ ಸಮಯದಲ್ಲಿ ಗ್ರಾಮಗಳ ಭವಿಷ್ಯ ನಿರ್ಧರಿಸುವ ಈ ಚುನಾವಣೆ ನಡೆಯುತ್ತಿರುವುದು ವಿಶೇಷ. ಈ ಚುನಾವಣೆಯಲ್ಲಿ ಹೆಚ್ಚು ವಿದ್ಯಾವಂತರು, ಯುವ ಜನರು ಭಾಗಿಯಾಗಲಿ ಎಂಬುದು “ಉದಯವಾಣಿ’ ಆಶಯ.

ಗ್ರಾಮ ಪಂಚಾಯತ್‌ ಚುನಾವಣೆ ಎಂದರೆ ಯುವ ಜನತೆಯಲ್ಲಿ ಆಸಕ್ತಿ ಅಷ್ಟಕ್ಕಷ್ಟೇ. ಇದಕ್ಕೆ ಅರಿವಿನ ಕೊರತೆ ಒಂದು ಕಾರಣವಾದರೆ, ಗ್ರಾ.ಪಂ.ಗಳ ವ್ಯಾಪ್ತಿ ಚಿಕ್ಕದು ಎಂಬ ಔದಾಸೀನ್ಯ ಮತ್ತೂಂದು ಕಾರಣ. ಆದರೆ ತನ್ನ ಗ್ರಾಮದ ಅಭಿವೃದ್ಧಿ ವಿಚಾರದಲ್ಲಿ ತೀರ್ಮಾನ ತೆಗೆದುಕೊಳ್ಳಲು ಒಬ್ಬ ಶಾಸಕ, ಸಂಸದನಿಗಿಂತಲೂ ಹೆಚ್ಚಿನ ಅಧಿಕಾರ – ಅವಕಾಶ ಒಬ್ಬ ಗ್ರಾಮ ಪಂಚಾಯತ್‌ ಸದಸ್ಯ ಇಲ್ಲವೇ ಅಧ್ಯಕ್ಷನಿಗೆ ಇರುತ್ತದೆ ಎಂಬ ಸಂಗತಿ ಹೆಚ್ಚಿನವರಿಗೆ ತಿಳಿದಿಲ್ಲ.

ಈ ಬಾರಿಯ ಗ್ರಾ.ಪಂ. ಚುನಾವಣೆ ವಿಶೇಷ ಸಂದರ್ಭದಲ್ಲಿ ನಡೆಯುತ್ತಿದೆ. ಅದರಲ್ಲೂ ಈ ಬಾರಿ ಕೊರೊನಾ ಕಾರಣದಿಂದ ಸಾವಿರಾರು ಯುವ ಜನರು ನಗರಗಳನ್ನು ಬಿಟ್ಟು ಹಳ್ಳಿ ಸೇರಿದ್ದಾರೆ. ಇವರೂ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾದರೆ ಗ್ರಾಮಗಳು ನಿಜವಾದ ಪ್ರಗತಿ ಕಾಣಲು ಸಾಧ್ಯ.

ಪಕ್ಷ ರಹಿತ ವ್ಯವಸ್ಥೆ
ಪಕ್ಷ ರಹಿತ ಚುನಾವಣ ವ್ಯವಸ್ಥೆ ಇರುವ ಗ್ರಾ.ಪಂ. ಚುನಾವಣೆಗಳು ನಿಜ ಅರ್ಥದಲ್ಲಿ ಪಕ್ಷಾತೀತವಾಗಿ, ನಿಷ್ಪಕ್ಷವಾಗಿ ಮತ್ತು ಪಾರ ದರ್ಶಕವಾಗಿ ನಡೆಯಬೇಕು.

ಇದಕ್ಕಾಗಿ ವಿದ್ಯಾವಂತ ಯುವಕ-ಯುವತಿಯರು, ಮುಖ್ಯವಾಗಿ ಶೇ. 50ರಷ್ಟು ಮೀಸಲಾತಿ ಅವಕಾಶ ಹೊಂದಿರುವ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಸ್ಪರ್ಧೆಗೆ ಮುಂದಾಗಬೇಕು. ಮತದಾನದಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಇದು ನೇರವಾಗಿ ಪಕ್ಷ ರಹಿತ ಚುನಾವಣ ವ್ಯವಸ್ಥೆ ಆಗಿದ್ದರೂ, ಗ್ರಾ.ಪಂ. ಚುನಾವಣೆಗಳಲ್ಲಿ ಪರೋಕ್ಷವಾಗಿ ಪಕ್ಷ ರಾಜಕಾರಣದ ಪ್ರಭಾವ ಮತ್ತು ಪ್ರಾಬಲ್ಯ ಇರುವುದನ್ನು ನಾವೆಲ್ಲರೂ ಒಪ್ಪಿಕೊಳ್ಳಲೇ ಬೇಕು. ಒಂದು ರೀತಿಯಲ್ಲಿ ಗ್ರಾ.ಪಂ.ಗಳು ಅಧಿಕಾರ ರಾಜಕಾರಣದ ಆರಂಭಿಕ ಮೆಟ್ಟಿಲುಗಳೆಂದರೆ ತಪ್ಪಿಲ್ಲ. ಜತೆಗೆ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ “ಗ್ರಾಮ ಸ್ವರಾಜ್ಯ’ದ ಆಶಯಗಳನ್ನು ಸಾಕಾರ ಗೊಳಿಸುವಲ್ಲಿ ಗ್ರಾ.ಪಂ.ಗಳು ಪ್ರಧಾನ ಭೂಮಿಕೆ ವಹಿಸುತ್ತವೆ.

ಗ್ರಾ.ಪಂ.ಗಳಿಗೆ ಹೊಣೆ ಹೆಚ್ಚು
ಪಂಚಾಯತ್‌ಗಳು ಸ್ಥಳೀಯ ಸರಕಾರಗಳಾಗಿ ಕಾರ್ಯ ನಿರ್ವ ಹಿಸಬೇಕು ಎಂಬುದು ಪಂಚಾಯತ್‌ರಾಜ್‌ ವ್ಯವಸ್ಥೆಯ ಮೂಲ ಆಶಯ. ಸರಕಾರದ ವಿವಿಧ ಇಲಾಖೆಗಳ 29ಕ್ಕೂ ಹೆಚ್ಚು ವಿಷಯಗಳು ಗ್ರಾ.ಪಂ. ಮೂಲಕ ನೇರವಾಗಿ ಕಾರ್ಯಗತಗೊಳ್ಳಬೇಕು ಎಂದು ಪಂಚಾಯತ್‌ರಾಜ್‌ ಕಾಯ್ದೆ ಹೇಳುತ್ತದೆ. ಕೇಂದ್ರ ಸರಕಾರದಿಂದ ಅನುದಾನವು ನೇರವಾಗಿ ಪಂಚಾಯಿತ್‌ಗಳಿಗೆ ಬರುತ್ತದೆ. ಫ‌ಲಾನು ಭವಿಗಳ ಆಯ್ಕೆ, ಕ್ರಿಯಾ ಯೋಜನೆಗಳಿಗೆ ಅನುಮೋದನೆ ಮತ್ತು ಅನು ಷ್ಠಾನದ ವಿಚಾರದಲ್ಲಿ ಗ್ರಾಮ ಸಭೆಯ ತೀರ್ಮಾನವೇ ಅಂತಿಮ.

ಗ್ರಾಮೀಣ ಭಾಗದ ಜನರು ಮೂಲಸೌಕರ್ಯ ಪಡೆದು, ಆ ಮೂಲಕ ಗ್ರಾಮ ಅಭಿವೃದ್ಧಿ ಹೊಂದಲು ಗ್ರಾ.ಪಂ. ಚುನಾವಣೆ ಬಹಳ ಮಹತ್ವದ್ದು. ಪ್ರತಿ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯದ ಎಲ್ಲ ಗ್ರಾಮಗಳ ನಾಗರಿಕರು ಕೈ ಜೋಡಿಸಬೇಕು. ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳಬೇಕು. ಒಳ್ಳೆಯ ಪ್ರತಿನಿಧಿಗಳು ಆಯ್ಕೆಯಾಗಬೇಕು. ಆ ಮೂಲಕ ಗ್ರಾಮ ಸ್ವರಾಜ್ಯದ ಕನಸು ನನಸಾಗಬೇಕು.
– ಕೆ.ಎಸ್‌. ಈಶ್ವರಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ

ಹಳ್ಳಿಗಳಲ್ಲಿ ಪಕ್ಷ ಬೆರೆಸದೆ ಯೋಗ್ಯ ಅಭ್ಯರ್ಥಿಗಳು ಆಯ್ಕೆಯಾಗಬೇಕು. ಮೂರೂ ಪಕ್ಷಗಳು ಇದರ ಬಗ್ಗೆ ಗಮನಹರಿಸಬೇಕು. ನಾವೆಲ್ಲರೂ ಗಾಂಧೀಜಿಯವರ ಕನಸು ನನಸು ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕು..
– ಎಚ್‌.ಕೆ. ಕುಮಾರಸ್ವಾಮಿ, ಜೆಡಿಎಸ್‌ ರಾಜ್ಯಾಧ್ಯಕ್ಷ

ಯಾರು ಸ್ಪರ್ಧಿಸಬಹುದು?
ಭಾರತೀಯ ನಾಗರಿಕರಾಗಿರುವ ಮತ್ತು ಮತದಾರರ ಪಟ್ಟಿಯಲ್ಲಿ ಹೆಸರು ಇರುವ, 21 ವರ್ಷ ಪೂರೈಸಿರುವ ಪ್ರತಿಯೊಬ್ಬರೂ ಸ್ಪರ್ಧಿಸಲು ಅರ್ಹರು.

ವೆಚ್ಚಕ್ಕೆ ಮಿತಿ ಇಲ್ಲ
ಪಕ್ಷ ರಹಿತ ಚುನಾವಣೆ ಆಗಿರುವುದರಿಂದ ಗ್ರಾ.ಪಂ. ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ವೆಚ್ಚದ ಮಿತಿ ಇರುವುದಿಲ್ಲ. ಆದರೆ ನಾಮಪತ್ರ ಸಲ್ಲಿಸುವಾಗ ಸಾಮಾನ್ಯ ವರ್ಗದ ಅಭ್ಯರ್ಥಿಗಳು 200 ರೂ. ಮತ್ತು ಮೀಸಲಾತಿ ವರ್ಗದ ಅಭ್ಯರ್ಥಿಗಳು 100 ರೂ. ಠೇವಣಿ ಇರಿಸಬೇಕು.

ಪಕ್ಷದ ಚಿಹ್ನೆ , ಭಾವಚಿತ್ರಕ್ಕೆ ಅವಕಾಶವಿಲ್ಲ
ಗ್ರಾ.ಪಂ. ಚುನಾವಣೆಗಳು ಪಕ್ಷರಹಿತ ವಾಗಿ ನಡೆಯುವುದರಿಂದ ರಾಜಕೀಯ ಪಕ್ಷಗಳ ಚಿಹ್ನೆಗಳನ್ನು ಮತ್ತು ರಾಜಕೀಯ ಮುಖಂಡರ ಭಾವಚಿತ್ರಗಳನ್ನು ಬಳಸಿ ಪ್ರಚಾರ ಮಾಡದಂತೆ ಅಭ್ಯರ್ಥಿಗಳಿಗೆ ತಿಳಿಸಬೇಕು. ಒಂದು ವೇಳೆ ಅಂತಹ ಪ್ರಚಾರ ನಡೆಸಿದಲ್ಲಿ ಅಭ್ಯರ್ಥಿಯು ಮುದ್ರಿಸಿರುವ ಕರಪತ್ರ, ಬ್ಯಾನರ್‌ ಅಥವಾ ಇನ್ಯಾವುದೇ ಪ್ರಚಾರ ಸಾಮಗ್ರಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಆಯೋಗ ನಿರ್ದೇಶನ ನೀಡಿದೆ.

ನೀತಿ ಸಂಹಿತೆ ಮಾರ್ಗಸೂಚಿ ಬಿಡುಗಡೆ
ಗ್ರಾ.ಪಂ. ಸಾರ್ವತ್ರಿಕ ಚುನಾವಣೆ-2020ರ ಸಂಬಂಧ ಚುನಾವಣ ಆಯೋಗವು ನೀತಿ ಸಂಹಿತೆ ಮಾರ್ಗಸೂಚಿ ಹೊರಡಿಸಿದೆ. ಚಾಲ್ತಿಯಲ್ಲಿರುವ ಮತ್ತು ಈಗಾಗಲೇ ಅನುಮೋದನೆಗೊಂಡಿರುವ ಯೋಜನೆ, ಕಾಮಗಾರಿಗಳಿಗೆ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ. ಆದರೆ ಡಿ. 31ರ ವರೆಗೆ ಹೊಸ ಯೋಜನೆ, ಕಾಮಗಾರಿಗೆ ಅವಕಾಶವಿರುವುದಿಲ್ಲ.

01- ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಥವಾ ಈ ಯೋಜನೆಯಡಿ ಇತರ ಕಾಮಗಾರಿಗಳನ್ನು ಅನುಷ್ಠಾನಗೊಳಿಸಬಹುದು. ಆದರೆ ಇಂತಹ ಯೋಜನೆಗಳ ಅನುಷ್ಠಾನವನ್ನು ಸಾರ್ವಜನಿಕ ಸಮಾರಂಭ ಅಥವಾ ರಾಜಕೀಯ ನಾಯಕರ ಉಪಸ್ಥಿತಿಯಲ್ಲಿ ನಡೆಸುವಂತಿಲ್ಲ.
02- ನೆರೆ ಪೀಡಿತ ಮತ್ತು ಪ್ರಕೃತಿ ವಿಕೋಪ ಪೀಡಿತ ಜನ ಸಮುದಾಯಕ್ಕೆ ನೀಡಲಾಗುವ ಪರಿಹಾರ ಅಥವಾ ಸೌಲಭ್ಯಗಳಿಗೆ ನೀತಿ ಸಂಹಿತೆ ಅಡ್ಡಿ ಆಗುವುದಿಲ್ಲ.

03- ಶಾಸಕರು, ಸಚಿವರು, ಸಂಸದರಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕರ್ತವ್ಯ ನಿರ್ವ ಹಣೆಗೆ ಒದಗಿಸಲಾದ ಸರಕಾರಿ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳುವ ಆವಶ್ಯಕತೆಯಿಲ್ಲ. ಆದರೆ ಚುನಾವಣ ಪ್ರಚಾರಕ್ಕೆ ಸರಕಾರಿ ವಾಹನ ಬಳಸುವಂತಿಲ್ಲ.

04-  ಸಾಂಸ್ಕೃತಿಕ ಮತ್ತು ಧಾರ್ಮಿಕ ಸಭೆ, ಸಮಾರಂಭಗಳನ್ನು ನಡೆಸಲು ಅವಕಾಶ ವಿದೆ. ಆದರೆ ಇಂತಹ ಸಮಾರಂಭಗಳಲ್ಲಿ ರಾಜಕೀಯ ನಾಯಕರು ಪಾಲ್ಗೊಂಡು ಮತದಾರರ ಮೇಲೆ ಪ್ರಭಾವ ಬೀರುವಂತಹ ಯಾವುದೇ ಘೋಷಣೆ ಅಥವಾ ಆಶ್ವಾಸನೆ ನೀಡುವಂತಿಲ್ಲ.

05- ಸಚಿವರು, ಶಾಸಕರು ಕೆಡಿಪಿ ಸಭೆ, ಜನ ಸ್ಪಂದನ ಸಭೆ ನಡೆಸುವಂತಿಲ್ಲ. ಗ್ರಾಮೀಣ ಭಾಗದಲ್ಲಿ ಸಚಿವರು, ಶಾಸಕರು ಯಾವುದೇ ಕಾರ್ಯ ಕ್ರಮ ಆಯೋಜಿಸಿ ಮತದಾರರ ಮೇಲೆ ಪ್ರಭಾವ ಬೀರುವುದು ನಿಷಿದ್ಧ.

06- ಚಾಲ್ತಿ ನೇಮಕಾತಿ ಪ್ರಕ್ರಿಯೆಗಳನ್ನು ನಿಲ್ಲಿ ಸುವ ಅಗತ್ಯವಿಲ್ಲ. ಆದರೆ ಅಂತಿಮ ಪಟ್ಟಿ ಪ್ರಕಟಿಸಬಾರದು. ತಾತ್ಕಾಲಿಕ ಹುದ್ದೆ ನೇಮಕಾತಿಗೆ ಅವ ಕಾಶವಿಲ್ಲ. ತುರ್ತು ಸೇವೆ ಅಗತ್ಯವಿದ್ದಲ್ಲಿ ಆಯೋಗದ ಅನುಮತಿ ಪಡೆಯಬೇಕು.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.