ಗೇಮ್ ಆಡ್ಲಿಕ್ಕೆ ಐಫೋನ್ ಬೇಕಂತೆ!
Team Udayavani, Oct 3, 2017, 10:56 AM IST
ಬೆಂಗಳೂರು: ಕೈ ಕೊಯ್ದಕೊಂಡು ವಿಂಡ್ಸರ್ ಮ್ಯಾನರ್ ಹೋಟೆಲ್ ಮೇಲ್ಸೇತುವೆ ಮೇಲೆ ನಿಂತು ಹಾರಲು ಯತ್ನಿಸಿದ ಬಿಹಾರ ಮೂಲದ ಯುವಕ ಅಜಯ್ ಕುಮಾರ್ ಇದೀಗ ಮತ್ತೂಂದು ವರಸೆ ತೆಗೆದಿದ್ದಾನೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಜಯ್ ಕುಮಾರ್, “ನನ್ನ ಬಳಿ ಒಂದೊಳ್ಳೆ ಮೊಬೈಲ್ ಫೋನಿಲ್ಲ. ಪೋಷಕರು ಕರೆ ಮಾಡಿದರೆ ಒಂದು ಒಳ್ಳೆ ಐಫೋನ್ ತರೋಕೆ ಹೇಳಿ ಪ್ಲೀಸ್. ಗೇಮ್ ಡೌನ್ಲೋಡ್ ಮಾಡಿಕೊಂಡು ಆಡಬೇಕು’ ಎಂದು ಪೊಲೀಸರ ಬಳಿ ಅಂಗಲಾಚಿದ್ದಾನೆ.
ಈತನ ಬೇಡಿಕೆಯಿಂದ ಆಶ್ಚರ್ಯ ಚಕಿತರಾದ ಪೊಲೀಸರು, ಯಾವ ಗೇಮ್ ಎಂದು ಪ್ರಶ್ನಿಸಿದರೆ, ಯಾವುದೋ ಒಂದು ಗೇಮ್ ಅಷ್ಟೇ ಎನ್ನುತ್ತಾನೆ. ಇನ್ನು ಹೆಚ್ಚಿನ ಮಾಹಿತಿ ಕೇಳಿದರೆ, “ಮಾನಸಿಕ ಒತ್ತಡ ಹೆಚ್ಚಾಗಿ ಸೇತುವೆಯಿಂದ ಹಾರಲು ಯತ್ನಿಸಿದೆ. ಮೈಸೂರಿನಲ್ಲಿ ನನ್ನ ರೂಮ್ಗೆ ಹೋಗಿ ನನ್ನ ಫ್ರೆಂಡ್ ಎಲ್ಲ ಹೇಳ್ತಾನೆ,’ ಎನ್ನುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಜಯ್ ಕುಮಾರ್, ಭಾನುವಾರ ರಾತ್ರಿಯಿಡೀ ನಿದ್ದೆ ಮಾಡಿಲ್ಲ. ಒಬ್ಬನೇ ಎದ್ದು ಅಳುತ್ತಾನೆ. ವಿಂಡ್ಸರ್ ಮ್ಯಾನರ್ ಹೋಟೆಲ್ ಬಳಿ ಬರುವ ಮೊದಲು ಬೇರೆಯೆಲ್ಲಿಯೋ ಆತ್ಮಹತ್ಯೆಗೆ ಯತ್ನಿಸಿರುವ ಸಾಧ್ಯತೆಯಿದೆ. ಆತನ ದೇಹದ ಮೇಲಿರುವ ಗಾಯಗಳು ಈ ರೀತಿ ಶಂಕೆ ವ್ಯಕ್ತಪಡಿಸುತ್ತಿವೆ ಎಂದು ಪೊಲೀಸರು ಹೇಳಿದ್ದಾರೆ.
ಸೋಮವಾರ ಬೆಳಗ್ಗೆ ಉಪಹಾರ, ಮಧ್ಯಾಹ್ನ ಊಟ ಮಾಡದೆ ಉಪವಾಸ ಇದ್ದು, ವಿಚಿತ್ರವಾಗಿ ವರ್ತನೆ ಮಾಡುತ್ತಿದ್ದಾನೆ. ಹೀಗಾಗಿ ಆತನ ಭದ್ರತೆಗಾಗಿ ಇಬ್ಬರು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈಗಾಗಲೇ ಅಜಯ್ ಪೋಷಕರಿಗೆ ಮಾಹಿತಿ ನೀಡಿದ್ದು, ಮಂಗಳವಾರ ಬೆಳಗ್ಗೆ ಬರುವ ಸಾಧ್ಯತೆಯಿದೆ. ನಂತರ ಅವರ ಸಮ್ಮುಖದಲ್ಲಿಯೇ ಅಜಯ್ ವಿಚಾರಣೆ ನಡೆಸುತ್ತೇವೆ
ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಮಧ್ಯಾಹ್ನ ವಿಂಡ್ಸರ್ ಮ್ಯಾನರ್ ಹೋಟೆಲ್ ಮೇಲ್ಸೇತುವೆ ಮೇಲೆ ನಿಂತು ಆತ್ಮಹತ್ಯೆಗೆ ಯತ್ನಿಸಿದ್ದ ಅಜಯ್ ಕುಮಾರ್ನನ್ನು ಹೈಗ್ರೌಂಡ್ಸ್ ಪೊಲೀಸರು ರಕ್ಷಿಸಿ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ