ಹೋರಾಟ ಮತ್ತು ಪ್ರಯತ್ನ ನಮ್ಮದು, ಫಲಾಫಲ ಜನರಿಗೆ ಸೇರಿದ್ದು: ವೈ.ಎಸ್.ವಿ.ದತ್ತಾ
Team Udayavani, Sep 28, 2021, 4:29 PM IST
ಬೆಂಗಳೂರು: ಉಪ ಚುನಾವಣೆ ಘೋಷಣೆಯಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳನ್ನು ಸಮಾನವಾದ ದೂರದಲ್ಲಿಟ್ಟು ನಮ್ಮ ಪಕ್ಷದ ಅಸ್ತಿತ್ವದ ಪ್ರಶ್ನೆ, ನಮ್ಮ ಕಾರ್ಯಕರ್ತರ ಅಳಿವು ಉಳಿವಿನ ಪ್ರಶ್ನೆಯಾಗಿ ಹೋರಾಟ ಮಾಡುತ್ತೇವೆ. ಹೋರಾಟ ಮತ್ತು ಪ್ರಯತ್ನ ನಮ್ಮದು. ಫಲಾಫಲ ಜನರಿಗೆ ಸೇರಿದ್ದು ಎಂದು ಜೆಡಿಎಸ್ ನಾಯಕ ವೈ.ಎಸ್.ವಿ. ದತ್ತಾ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ನಡೆಯುವ ಎರಡೂ ಕ್ಷೇತ್ರದಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎಂದರು.
ನಾಳೆ ಅಥವಾ ನಾಡಿದ್ದು ಕೂಡ ಹೆಚ್ ಡಿಕೆ ಮತ್ತು ಹೆಚ್ ಡಿಡಿ ಸೇರಿದಂತೆ ಹಿರಿಯರು ಸೇರಿ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತೇವೆ. ಇವತ್ತು ಅಪೇಕ್ಷಿತ ಅಭ್ಯರ್ಥಿಗಳನ್ನು ಸಭೆಗೆ ಕರೆದಿರುವುದರಿಂದ ನಾಳೆ ನಾಡಿದ್ದು ಅಭ್ಯರ್ಥಿಗಳನ್ನು ಅಧಿಕೃತವಾಗಿ ಪ್ರಕಟಿಸುತ್ತೇವೆ ಎಂದರು.
ಇದನ್ನೂ ಓದಿ:ನನ್ನ ನಾಯಕತ್ವ ಅಲ್ಲ, ಪಕ್ಷದ ನಾಯಕತ್ವದಲ್ಲೇ ಚುನಾವಣೆ: ಸಿಎಂ ಬೊಮ್ಮಾಯಿ
ನಿನ್ನೆಯಿಂದ ಜೆಡಿಎಸ್ ಕಾರ್ಯಾಗಾರ ನಡೆಯುತ್ತಿದೆ. ನಾನು ನಿನ್ನೆ ಸಂಪೂರ್ಣವಾಗಿ ಕಾರ್ಯಗಾರದಲ್ಲಿ ಪಾಲ್ಗೊಂಡಿದ್ದೆ. ಆದರೆ ಇಂದು ಕ್ಷೇತ್ರದ ಸಮಸ್ಯೆಗಳಿಗಾಗಿ ವಿಧಾನಸೌಧಕ್ಕೆ ಬಂದಿದ್ದೇನೆ ಎಂದು ವೈ ಎಸ್ ವಿ ದತ್ತಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು