ಶಾಖೋತ್ಪನ್ನಕ್ಕೆ ವೈಟಿಪಿಎಸ್‌ ಕೊನೆಗೂ ಅಣಿ


Team Udayavani, Feb 15, 2020, 3:07 AM IST

shakotpanna

ರಾಯಚೂರು: ವಾಣಿಜ್ಯ ಉತ್ಪಾದನೆಗೆ ಮುಕ್ತಗೊಂಡು ಎರಡು ವರ್ಷವಾದರೂ ವಿದ್ಯುತ್‌ ಉತ್ಪಾದಿಸದೆ ಸ್ತಬ್ಧಗೊಂಡಿದ್ದ ಯರಮರಸ್‌ ಸೂಪರ್‌ ಕ್ರಿಟಿಕಲ್‌ ಪವರ್‌ ಸ್ಟೇಶನ್‌ (ವೈಟಿಪಿಎಸ್‌) ಕೊನೆಗೂ ಕಾರ್ಯಾರಂಭಗೊಳ್ಳುವ ಮುನ್ಸೂಚನೆ ನೀಡಿದೆ. ಗುರುವಾರದಿಂದ ಮೊದಲನೇ ಘಟಕ ಆರಂಭಿಸಿದ್ದು, ಕೆಲವೊಂದು ತಾಂತ್ರಿಕ ಸಮಸ್ಯೆ ನಿವಾರಿಸುವಲ್ಲಿ ತಜ್ಞರ ತಂಡ ಶ್ರಮಿಸುತ್ತಿದೆ.

ಅತ್ಯಾಧುನಿಕ ತಂತ್ರಜ್ಞಾನವುಳ್ಳ ವೈಟಿಪಿಎಸ್‌ 1600 ಮೆಗಾ ವ್ಯಾಟ್‌ ವಿದ್ಯುತ್‌ ಸಾಮರ್ಥ್ಯ ಹೊಂದಿದೆ. ಕಡಿಮೆ ಕಲ್ಲಿದ್ದಲು ಬಳಸಿ ಅಧಿಕ ವಿದ್ಯುತ್‌ ಉತ್ಪಾದಿಸುವ ತಂತ್ರಜ್ಞಾನ ಇದಾ ಗಿದ್ದು, 800 ಮೆಗಾವ್ಯಾಟ್‌ ಸಾಮರ್ಥ್ಯದ ಎರಡು ಘಟಕ ಹೊಂದಿದೆ. ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ಎರಡನೇ ಘಟಕವನ್ನು ಆರಂಭಿಸಲಾಗಿತ್ತು. ಆದರೆ, ಎರಡು ವರ್ಷವಾ ದರೂ ವಿದ್ಯುತ್‌ ಉತ್ಪಾದನೆ ಕೆಲಸ ಮಾತ್ರ ಆರಂಭವಾಗಿರಲಿಲ್ಲ.

ಕಲ್ಲಿದ್ದಲು ಸಾಗಿಸಲು ರೈಲು ಮಾರ್ಗ ಸೇರಿ ದಂತೆ ಸಾಕಷ್ಟು ಸಿವಿಲ್‌ ಕೆಲಸಗಳು ಬಾಕಿ ಉಳಿದಿದ್ದವು. ಅಲ್ಲದೇ, ಪದೇಪದೆ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿ ದ್ದವು. ಕೊನೆಗೂ ಅದು ಮುಗಿಯುವ ಹಂತಕ್ಕೆ ಬಂದಿದ್ದು, ಮೊದಲ ಘಟಕವನ್ನು ಗುರುವಾರದಿಂದ ಆರಂಭಿಸಲಾಗಿದೆ. ಟರ್ಬನ್‌ಗಳಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬರುತ್ತಿದೆ. ತಜ್ಞರ ತಂಡ ಪರಿ ಶೀಲನೆ ನಡೆಸಿದೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುತ್ತಿದೆ.

ಬೀಡು ಬಿಟ್ಟ ತಜ್ಞರ ತಂಡ: ಎರಡು ವರ್ಷದಿಂದ ವಿದ್ಯುತ್‌ ಉತ್ಪಾದನೆ ಮಾಡದ ಕಾರಣ ಸಿಸ್ಟಮ್‌ ಸೆಟಿಂಗ್‌ಗಳಲ್ಲಿ ಏರುಪೇರಾಗಿದೆ. ಇದರಿಂದ ಪದೇಪದೆ ಸಮಸ್ಯೆ ಕಂಡು ಬರುತ್ತಿದೆ. ಹೀಗಾಗಿ ಘಟಕ ಅನುಷ್ಠಾನ ಮಾಡಿದ ಬಿಎಚ್‌ಇಎಲ್‌ ಸಂಸ್ಥೆ ತಜ್ಞರ ತಂಡ ವೈಟಿಪಿಎಸ್‌ನಲ್ಲಿ ಬೀಡು ಬಿಟ್ಟಿದೆ. ಎಲ್ಲಿ ಸಮಸ್ಯೆಯಾಗುತ್ತಿದೆ ಎಂದು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ. ಕೆಲವೊಂದು ಸಾಫ್ಟ್ವೇರ್‌ ಹೊಂದಾಣಿಕೆಗಳು ತಪ್ಪಿದ್ದು, ದುರಸ್ತಿ ಮಾಡಲಾಗುತ್ತಿದೆ. 800 ಮೆಗಾವ್ಯಾಟ್‌ ಸಾಮರ್ಥ್ಯ ಘಟಕವಾದ್ದರಿಂದ ಸಾಕಷ್ಟು ಸವಾಲುಗಳು ಎದುರಾಗು ತ್ತಿವೆ ಎಂದು ಮೂಲಗಳು ತಿಳಿಸಿವೆ.

ಕಲ್ಲಿದ್ದಲು ಸಂಗ್ರಹ: ವೈಟಿಪಿಎಸ್‌ಗೆ ಕಲ್ಲಿದ್ದಲು ಪೂರೈಸಲು ಪ್ರತ್ಯೇಕ ರೈಲು ನಿರ್ಮಾಣ ಕಾಮಗಾರಿ ಮುಗಿದಿದೆ. ಸುಮಾರು 70ಕ್ಕೂ ಅಧಿಕ ರ್ಯಾಕ್‌ಗಳ ಮೂಲಕ ವೈಟಿಪಿ ಎಸ್‌ ಆವರಣದಲ್ಲೇ ಕಲ್ಲಿದ್ದಲು ಸಂಗ್ರಹಿಸಲಾಗಿದೆ. ಈಗ ವೈಟಿಪಿಎಸ್‌ನಲ್ಲಿ 3.22 ಲಕ್ಷ ಟನ್‌ ಕಲ್ಲಿದ್ದಲು ಸಂಗ್ರಹವಿದೆ. ಇನ್ನು ಮುಂದೆ ನಿರಂತರವಾಗಿ ವಿದ್ಯುತ್‌ ಉತ್ಪಾದನೆ ಆರಂಭಿಸಿದಲ್ಲಿ ಕಲ್ಲಿದ್ದಲು ಆಮದು ಪ್ರಮಾಣ ಹೆಚ್ಚಲಿದೆ. ಆದರೆ, ಸದ್ಯಕ್ಕೆ ಇನ್ನು ಪೂರ್ಣ ಪ್ರಮಾಣದಲ್ಲಿ ಕೆಲಸ ಶುರುವಾಗದ ಕಾರಣ ಯಾವುದೇ ಕೊರತೆ ಕಂಡು ಬಂದಿಲ್ಲ ಎಂದು ವಿವರಿಸುತ್ತಾರೆ ಅಧಿಕಾರಿಗಳು.

ಬೇಡಿಕೆ ಪ್ರಸ್ತಾವನೆ ಇಲ್ಲ: ಬೇಸಿಗೆ ಶುರುವಾಗುತ್ತಿದ್ದು, ಆರ್‌ಟಿಪಿಎಸ್‌ಗೆ ವಿದ್ಯುತ್‌ ಬೇಡಿಕೆ ಹೆಚ್ಚಾಗಿದೆ. ಎಂಟು ಘಟಕಗಳಲ್ಲಿ ಮೊದಲನೇ ಘಟಕವನ್ನು ವಾರ್ಷಿಕ ದುರಸ್ತಿ ಕಾರ್ಯಕ್ಕೆ ಕೈಗೊಂಡಿದ್ದು, ಉಳಿದ 7 ಘಟಕಗಳು ಉತ್ಪಾದನೆಯಲ್ಲಿ ತೊಡಗಿವೆ. 1,720 ಮೆಗಾವ್ಯಾಟ್‌ ಉತ್ಪಾದನಾ ಸಾಮರ್ಥ್ಯದ ಈ ಕೇಂದ್ರದಿಂದ ಈಗ ಸರಾಸರಿ 1200-1300 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ. ಮಧ್ಯಾಹ್ನ ಮಾತ್ರ ಬೇಡಿಕೆ ಹೆಚ್ಚಾಗುತ್ತಿದ್ದು, ರಾತ್ರಿ ಕಡಿಮೆ ಇದೆ. ಆದರೆ, ವೈಟಿಪಿಎಸ್‌ಗೆ ಮಾತ್ರ ಇನ್ನೂ ವಿದ್ಯುತ್‌ ಬೇಡಿಕೆ ಬಂದಿಲ್ಲ. ಇದು ಪೂರ್ಣ ಪ್ರಮಾಣದಲ್ಲಿ ಆರಂಭವಾಗುವವರೆಗೂ ಈ ಕೇಂದ್ರದ ಮೇಲೆ ಅವಲಂಬನೆ ಆಗುವುದು ಕಷ್ಟ ಎನ್ನಲಾಗುತ್ತಿದೆ.

ವೈಟಿಪಿಎಸ್‌ ಮೊದಲನೇ ಘಟ ಕಕ್ಕೆ ಚಾಲನೆ ನೀಡಿದ್ದೇವೆ. ಆದರೆ, ಕೆಲವೊಂದು ತಾಂತ್ರಿಕ ಅಡಚಣೆಗಳು ಕಂಡು ಬರುತ್ತಿದ್ದು, ಬಿಎಚ್‌ಇಎಲ್‌ ತಜ್ಞರು ಪರಿಶೀಲನೆ ಮಾಡು ತ್ತಿ ದ್ದಾರೆ. ನಿರಂತರ ವಿದ್ಯುತ್‌ ಉತ್ಪಾದನೆ ಬಗ್ಗೆ ಈಗಲೇ ಹೇಳಲಾಗದುಸಂಪೂರ್ಣ ಹೊಂದಾಣಿಕೆ ಬಳಿಕ, ಕೇಂದ್ರ ಸಕ್ರಿಯವಾಗಿ ಕಾರ್ಯಾರಂಭಿಸಲಿದೆ.
-ಲಕ್ಷ್ಮಣ ಕಬಾಡೆ, ವೈಟಿಪಿಎಸ್‌ ಯೋಜನಾ ಮುಖ್ಯಸ್ಥ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.