ತಾ.ಪಂ-ಜಿ.ಪಂ ಕ್ಷೇತ್ರ ಪುನರ್ವಿಂಗಡಣೆ: 10 ದಿನಗಳಲ್ಲಿ ಅಧಿಸೂಚನೆ
Team Udayavani, Feb 15, 2023, 6:33 AM IST
ಬೆಂಗಳೂರು: ಜಿ.ಪಂ. ಹಾಗೂ ತಾ.ಪಂ. ಕ್ಷೇತ್ರಗಳ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆಯನ್ನು 10 ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಈ ಕುರಿತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಲೆ ಹಾಗೂ ನ್ಯಾ.ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಾದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ಜಿ.ಪಂ.-ತಾ.ಪಂ. ಕ್ಷೇತ್ರಗಳ ಪುನರ್ವಿಂಗಡಣೆಗೆ ಸಂಬಂಧಿಸಿದಂತೆ ಕರ್ನಾಟಕ ಪಂಚಾಯತ್ರಾಜ್ ಸೀಮಾ ನಿರ್ಣಯ ಆಯೋಗ ಜ.30ರಂದು ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದೆ. ಆ ವರದಿ ಆಧರಿಸಿ ರಾಜ್ಯ ಸರ್ಕಾರ 10 ದಿನಗಳಲ್ಲಿ ಅಂತಿಮ ಅಧಿಸೂಚನೆ ಹೊರಡಿಸಲಿದೆ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದರು.
ಅಡ್ವೋಕೇಟ್ ಜನರಲ್ ಅವರ ಭರವಸೆಯನ್ನು ದಾಖಲಿಸಿಕೊಂಡ ನ್ಯಾಯಪೀಠ, ತಾ.ಪಂ.-ಜಿ.ಪಂ ಕ್ಷೇತ್ರಗಳ ಪುನರ್ವಿಂಗಡಣೆಗೆ ಸಂಬಂಧಿಸಿದ ಅಂತಿಮ ಅಧಿಸೂಚನೆಯನ್ನು 10 ದಿನಗಳಲ್ಲಿ ಹೊರಡಿಸಿ, ವರದಿಯನ್ನು ಮುಂದಿನ ಕ್ರಮಕ್ಕಾಗಿ ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು 2 ವಾರ ಮುಂದೂಡಿತು.
ಜತೆಗೆ ಇತರೆ ಹಿಂದುಳಿದ ವರ್ಗಗಳಿಗೆ (ಓಬಿಸಿ) ರಾಜಕೀಯ ಮೀಸಲಾತಿ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ರಚಿಸಿರುವ ಆಯೋಗಕ್ಕೆ 2023ರ ಮಾರ್ಚ್ 31ರೊಳಗೆ ವರದಿ ನೀಡುವಂತೆ 2022ರ ಡಿ.12ರಂದು ಸುಪ್ರೀಂಕೋರ್ಟ್ ಹೇಳಿದೆ.
ತಾ.ಪಂ-ಜಿ.ಪಂ ಕ್ಷೇತ್ರಗಳ ಮೀಸಲಾತಿ ವಿಚಾರದಲ್ಲೂ ರಾಜ್ಯ ಸರ್ಕಾರ ಅದರಂತೆ ಮುಂದುವರಿಯಬಹುದು ಎಂದು ನ್ಯಾಯಪೀಠ ಹೇಳಿದೆ.
ಇದೇ ವೇಳೆ ತಾ.ಪಂ.-ಜಿ.ಪಂ ಕ್ಷೇತ್ರಗಳ ಪುನರ್ವಿಂಗಡಣೆ ಪ್ರಕ್ರಿಯೆ ಹಾಗೂ ಅಂತಿಮ ವರದಿಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರ ಪ್ರಮಾಣಪತ್ರವನ್ನು ಸರ್ಕಾರದ ಪರ ವಕೀಲೆ ಪ್ರತಿಮಾ ಹೊನ್ನಾಪುರ ನ್ಯಾಯಯಪೀಠಕ್ಕೆ ಸಲ್ಲಿಸಿದರು. ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್ ಫಣೀಂದ್ರ ವಾದ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್