ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್: ಸರ್ಕಾರದಿಂದ ಸುಗ್ರೀವಾಜ್ಞೆ
Team Udayavani, Aug 24, 2022, 7:15 AM IST
ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳಗೆ ಜನಸಂಖ್ಯೆ ಮತ್ತು ಸ್ಥಾನಗಳ ನಿಗದಿಯಲ್ಲಿ ಬದಲಾವಣೆ ಮಾಡಿ “ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ರಾಜ್ (ತಿದ್ದುಪಡಿ) ಅಧ್ಯಾದೇಶ-2022′ ಅನ್ನು ರಾಜ್ಯ ಸರ್ಕಾರ ಹೊರಡಿಸಿದೆ.
ಈ ಸಂಬಂಧ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ರಾಜ್ ವಿಧೇಯಕ-2022ರ ಸೆಕ್ಷನ್ 121 ಹಾಗೂ ಸೆಕ್ಷನ್ 160ಗೆ ತಿದ್ದುಪಡಿ ತಂದು ಹೊರಡಿಸಲಾಗಿದ್ದ ಸುಗ್ರೀವಾಜ್ಞೆಗೆ ಆಗಸ್ಟ್ 20ರಂದು ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ಸುಗ್ರೀವಾಜ್ಞೆಯನ್ನು ರಾಜ್ಯ ಸರ್ಕಾರ ಆಗಸ್ಟ್ 22ರ ರಾಜ್ಯಪತ್ರದಲ್ಲಿ ಪ್ರಕಟಿಸಿದೆ. ತಕ್ಷಣದಿಂದಲೇ ಈ ಅಧ್ಯಾದೇಶ ಜಾರಿಗೆ ಬರಲಿದೆ ಎಂದು ರಾಜ್ಯಪತ್ರದಲ್ಲಿ ಹೇಳಲಾಗಿದೆ.
ಸೆಕ್ಷನ್ 121ರ ತಿದ್ದುಪಡಿಯಂತೆ ತಾ.ಪಂ. 12 ಕ್ಷೇತ್ರಗಳಿಗೆ 2 ಲಕ್ಷ ಗ್ರಾಮೀಣ ಜನಸಂಖ್ಯೆ ಬದಲಿಗೆ 2.30 ಲಕ್ಷ ಜನಸಂಖ್ಯೆ ಮಾಡಲಾಗಿದೆ. ಪ್ರತಿ ಜಿಲ್ಲೆಯಲ್ಲಿ 7 ಲಕ್ಷ ಜನಸಂಖ್ಯೆಗೆ ಕನಿಷ್ಠ 20 ಜಿ.ಪಂ. ಕ್ಷೇತ್ರಗಳ ಬದಲಿಗೆ 25 ಕ್ಷೇತ್ರಗಳನ್ನು ಮಾಡಲಾಗಿದೆ. ಅದೇ ರೀತಿ 7ರಿಂದ 9.5 ಲಕ್ಷ ಜನಸಂಖ್ಯೆಗೆ 28 ಸದಸ್ಯರು ಇರಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ