ರಾಜ್ಯದಲ್ಲಿ ಲಾಕ್‌ಡೌನ್‌ ತೆರವಾದರೂ ಮೃಗಾಲಯಗಳು ಲಾಕ್‌?


Team Udayavani, Apr 9, 2020, 1:45 PM IST

ರಾಜ್ಯದಲ್ಲಿ ಲಾಕ್‌ಡೌನ್‌ ತೆರವಾದರೂ ಮೃಗಾಲಯಗಳು ಲಾಕ್‌?

ಬೆಂಗಳೂರು: ಅತ್ತ ಅಮೆರಿಕದಲ್ಲಿನ ಮೃಗಾಲಯದ ಪ್ರಾಣಿಗಳ ಮೇಲೆ  ಕೋವಿಡ್ 19 ದಾಳಿ ಮಾಡಿದ ಬೆನ್ನಲ್ಲೇ ಇತ್ತ ರಾಜ್ಯದ ಮೃಗಾಲಯಗಳಲ್ಲಿ ಲಾಕ್‌ಡೌನ್‌ ಅವಧಿ ವಿಸ್ತರಣೆ ಮಾತು ಕೇಳಿ ಬರುತ್ತಿವೆ.

ಮನುಷ್ಯ-ವನ್ಯಪ್ರಾಣಿಗಳ ನೇರ ಸಂಪರ್ಕದ ಹಾಟ್‌ಸ್ಪಾಟ್‌ ಮೃಗಾಲಯಗಳು, ಅಲ್ಲಿರುವ ನೂರಾರು ವನ್ಯಪ್ರಾಣಿಗಳು ಕೋವಿಡ್ 19  ಸೋಂಕಿನ ಆತಂಕವಿಲ್ಲದೆ ಸುರಕ್ಷಿತವಾಗಿವೆ. ಆದರೆ, ಈಗ ಮನುಷ್ಯನಿಂದ ಪ್ರಾಣಿಗಳಿಗೆ ವೈರಸ್‌ ವರ್ಗಾವಣೆ ಆಗಿದ್ದರಿಂದ ಒಂದು ವೇಳೆ ಏ.14ಕ್ಕೇ ಲಾಕ್‌ಡೌನ್‌ ತೆರವುಗೊಳಿಸಿದರೂ, ಮೃಗಾಲಯಗಳು ಮತ್ತು ಕಾಡಂಚಿನ ಪ್ರದೇಶಗಳಲ್ಲಿ ಜನ ಸಂಚಾರ ನಿರ್ಬಂಧ ಮುಂದುವರಿಸುವುದು ಸೂಕ್ತ ಎಂಬ ಅಭಿಪ್ರಾಯ ಅರಣ್ಯ ಇಲಾಖೆ ಅಧಿಕಾರಿಗಳು -ವನ್ಯಜೀವಿ ತಜ್ಞರಿಂದ ವ್ಯಕ್ತವಾಗುತ್ತಿದೆ.

ವಿದೇಶದ ಮೃಗಾಲಯದಲ್ಲಿ ಮನುಷ್ಯನಿಂದ ವನ್ಯಪ್ರಾಣಿಗಳಿಗೂ ಕೋವಿಡ್ 19  ಸೋಂಕು ತಗುಲಿದ್ದು, ರಾಜ್ಯದಲ್ಲಿಯೂ ವನ್ಯಪ್ರಾಣಿಗಳಿಗೆ ಸೋಂಕು ತಗುಲಬಹುದು ಎಂಬ ಆತಂಕ ಹೆಚ್ಚಿದೆ. ಆದರೆ, ಅರಣ್ಯ ಇಲಾಖೆ ಹಾಗೂ ಮೃಗಾಲಯ ಪ್ರಾಧಿಕಾರ “ರಾಜ್ಯದ ಮೃಗಾಲಯಗಳಲ್ಲಿರುವ ಎಲ್ಲಾ ವನ್ಯಪ್ರಾಣಿಗಳು ಕೋವಿಡ್ 19  ವೈರಸ್‌ ನಿಂದ ಅಂತರ ಕಾಯ್ದುಕೊಂಡಿದ್ದು, ಸಂಪೂರ್ಣ ಸುರಕ್ಷಿತವಾಗಿವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದೆ.

“ಸದ್ಯ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, ಯಾರಲ್ಲಿ ಸೋಂಕು ಇದೆ ಅಥವಾ ಇಲ್ಲ ಎಂಬುದು ಗೊತ್ತೇ ಆಗುತ್ತಿಲ್ಲ. ಸೋಂಕಿತ ವ್ಯಕ್ತಿ ಮೃಗಾಲಯಕ್ಕೆ ಭೇಟಿ ನೀಡುವ ಸಾಧ್ಯತೆ ಇರುತ್ತದೆ. ಈ ದೃಷ್ಟಿಯಿಂದ ಸರ್ಕಾರ ಮೃಗಾಲಯಗಳಲ್ಲಿ ಹಾಗೂ ಕಾಡಂಚಿನ ಪ್ರದೇಶಗಳಲ್ಲಿ ಲಾಕ್‌ಡೌನ್‌ ಕಡ್ಡಾಯವಾಗಿ ಮುಂದುವರಿಸಲೇಬೇಕು’ ಎಂದು ಇಲಾಖೆ ಅಧಿಕಾರಿಗಳು, ಮೃಗಾಲಯ ಸಿಬ್ಬಂದಿ ಹಾಗೂ ವನ್ಯಜೀವಿ ತಜ್ಞರು ಒತ್ತಾಯಿಸುತ್ತಿದ್ದಾರೆ.

“ರಾಜ್ಯದ ಎಲ್ಲಾ ಮೃಗಾಲಯಗಳು ಮಾ.14ರಿಂದಲೇ ಬಂದ್‌ ಆಗಿವೆ. ಜತೆಗೆ ಜನರ ಭೇಟಿ ನಿಷೇಧ ಹಿನ್ನೆಲೆ ಮೃಗಾಲಯದ ಸಿಬ್ಬಂದಿಗಳನ್ನು ಅರ್ಧದಷ್ಟು ಕಡಿಮೆ ಮಾಡಲಾಗಿದೆ. ಸಿಬ್ಬಂದಿಯಲ್ಲಿ ಅನಾರೋಗ್ಯವಿದ್ದರೆ ಮೃಗಾಲಯದ ಒಳಗೆ ಅನುಮತಿ ನೀಡಿರಲಿಲ್ಲ. ಎಲ್ಲಾ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿತ್ತು. ಜತೆಗೆ ಸೋಮವಾರ ಮತ್ತು ಮಂಗಳವಾರ ಮೃಗಾಲಯ ಪ್ರಾಣಿಗಳ ಆರೋಗ್ಯ ಪರೀಕ್ಷೆ ಮಾಡಿದ್ದು ರೋಗ ಲಕ್ಷಣ ಕಂಡುಬಂದಿಲ್ಲ’ ಎಂದು ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ ರವಿ ಹೇಳಿದ್ದಾರೆ. ಸಂಘರ್ಷ ವರದಿಯಾಗಿಲ್ಲ: ರಾಜ್ಯ ಹುಲಿಗಳ ಸಂಖ್ಯೆಯಲ್ಲಿ 2ನೇ ಸ್ಥಾನ ಹಾಗೂ ಆನೆಗಳ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿವೆ. ಈ ಪೈಕಿ ಶೇ.90 ಹುಲಿ, ಆನೆಯಂತಹ ಪ್ರಾಣಿಗಳು ಅರಣ್ಯದಲ್ಲೇ ವಾಸಿಸುತ್ತಿವೆ. ಇಲ್ಲಿ ಮನುಷ್ಯನೊಟ್ಟಿಗೆ ಸಂಪರ್ಕ ತೀರಾ ವಿರಳ. ಸಫಾರಿ ಬಂದ್‌ ಮಾಡಲಾಗಿದೆ. ಲಾಕ್‌ಡೌನ್‌ನಿಂದ ಅರಣ್ಯ ಹಾಗೂ ಅರಣ್ಯ ಸುತ್ತ ಮಾನವ ಅಥವಾ ವಾಹನಗಳ ಓಡಾಟ ತೀರಾ ಕಡಿಮೆಯಾಗಿದೆ ಎನ್ನುತ್ತಾರೆ ರಾಜ್ಯ ಅರಣ್ಯಪಡೆ ಮುಖ್ಯಸ್ಥ ಪುನಾಟಿ ಶ್ರೀಧರ್‌.

ರಕ್ಷಣಾ ಪರಿಕರ ಇವೆ: ಕೇಂದ್ರ ಸರ್ಕಾರದ ಸೂಚನೆಯಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದ್ದು, ರೋಗ ಲಕ್ಷಣ ಕಂಡು ಬಂದ ಪ್ರಾಣಿಯನ್ನು ಸಿಸಿ ಕ್ಯಾಮೆರಾದಲ್ಲಿ ನಿರಂತರ ನಿಗಾದಲ್ಲಿಡಲಾ ಗುತ್ತದೆ. ರಾಜ್ಯದ ಎಲ್ಲಾ ಮೃಗಾಲಯಗಳ ಲ್ಲಿಯೂ ಅಗತ್ಯ ವೈದ್ಯರು ಇದ್ದಾರೆ. ಮೈಸೂರು, ಬನ್ನೇರುಘಟ್ಟ, ಶಿವಮೊಗ್ಗ ಮೃಗಾಲಯಗಳಲ್ಲಿ ಈಗಾಗಲೇ ಥರ್ಮಲ್‌ ಸ್ಕ್ರೀನಿಂಗ್‌ ಉಪಕರಣ ವಿದ್ದು, ಚಿತ್ರದುರ್ಗ, ಹಂಪಿ, ಕಲಬುರಗಿ, ಗದಗ ಮೃಗಾಲಯಗಳಿಗೆ ತಲುಪಿಸಲಾಗುತ್ತದೆ ಎಂದು ಮೃಗಾ ಲಯ ಪ್ರಾಧಿಕಾರದ ಸದಸ್ಯ ಕಾರ್ಯ ದರ್ಶಿ ಬಿ.ಪಿ.ರವಿ ಮಾಹಿತಿ ನೀಡಿದರು.

ಆನೆಗಳ ಕಾಳಜಿಗೆ ಬೇಕಿದೆ ಕ್ರಮ :  ಹೆಚ್ಚಾಗಿ ಮನುಷ್ಯನೊಂದಿಗೆ ಮುಖಾಮುಖೀ ಆಗುವ ಪ್ರಾಣಿ ಆನೆ. ಸದ್ಯ ರಾಜ್ಯದ ಅನೇಕ ದೇವಸ್ಥಾನ, ಮಠಗಳಲ್ಲಿ ಆನೆಗಳನ್ನು ಸಾಕಲಾಗಿದೆ. ಕೆಲವೆಡೆ ಕರಡಿ, ಜಿಂಕೆ, ಮೊಲ, ಕಾಡುಪಕ್ಷಿಗಳನ್ನೂ ಸಾಕಿರುತ್ತಾರೆ. ಕೊರೊನಾ ಸೋಂಕಿತರ ಸಂಪರ್ಕದಿಂದ ಸೋಂಕು ತಗುಲುವ ಸಾಧ್ಯತೆಗಳಿದ್ದು ಅರಣ್ಯ ಇಲಾಖೆ ಮಾರ್ಗಸೂಚಿ ಹೊರಡಿಸುವ ಅಗತ್ಯತೆ ಹೆಚ್ಚಿದೆ.

ವನ್ಯಪ್ರಾಣಿಗಳಿಗೆ ಕೊರೊನಾ ಸೋಂಕು ತಗುಲುವುದು ದೃಢಪಟ್ಟಿದೆ. ವನ್ಯಜೀವಿ ಮೃಗಾಲಯಗಳ ಸಿಬ್ಬಂದಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮೃಗಾಲಯಗಳು, ಕಾಡುಗಳಿಗೆ ಜನರ ಭೇಟಿಯನ್ನು ಇನ್ನಷ್ಟು ದಿನ ನಿಷೇಧಿಸಬೇಕು.  ಸಂಜಯ್‌ ಗುಬ್ಬಿ, ವನ್ಯಜೀವಿ ತಜ್ಞ

 

  ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.