ರಾಜಕೀಯ ಕಿಚ್ಚು ಹೊತ್ತಿಸಿದ ಹಿಂದೂ ಹುಡುಗಿಯರ ಮತಾಂತರ

ಸುಷ್ಮಾ ಸ್ವರಾಜ್‌, ಪಾಕಿಸ್ತಾನ ಸಚಿವ ಫ‌ವಾದ್‌ ಹುಸೇನ್‌ ನಡುವೆ ಟ್ವೀಟ್‌ ವಾರ್‌

Team Udayavani, Mar 25, 2019, 6:00 AM IST

Sushma-Swaraj,-Fawad-Hussain,

ನವದೆಹಲಿ: ಹೋಳಿ ಹಬ್ಬದ ದಿನ ಪಾಕಿಸ್ತಾನದಲ್ಲಿ ಇಬ್ಬರು ಬಾಲಕಿಯರನ್ನು ಅಪಹರಿಸಿ ಅವರನ್ನು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿದ್ದಲ್ಲದೆ, ಇಬ್ಬರು ಮುಸ್ಲಿಂ ಯುವಕರಿಗೆ ಬಲವಂತವಾಗಿ ಮದುವೆ ಮಾಡಿಕೊಟ್ಟಿರುವ ಪ್ರಕರಣ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಹಾಗೂ ಪಾಕಿಸ್ತಾನದ ಮಾಹಿತಿ ಸಚಿವ ಫ‌ವಾದ್‌ ಹುಸೇನ್‌ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.

ಸಚಿವದ್ವಯರ “ಟ್ವೀಟ್‌ ವಾರ್‌’
ಪಾಕ್‌ನಲ್ಲಿರುವ ಭಾರತೀಯ ಹೈಕಮೀಷನ್‌ಗೆ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ಸಲ್ಲಿಸಲು ಸೂಚಿಸಿರುವುದಾಗಿ ಸುಷ್ಮಾ ಅವರು ಟ್ವಿಟರ್‌ನಲ್ಲಿ ಪ್ರಕಟಿಸುತ್ತಿದ್ದಂತೆ, ಪ್ರತಿಕ್ರಿಯಿಸಿದ ಫ‌ವಾದ್‌ ಹುಸೇನ್‌, “ಸ್ವರಾಜ್‌ ಅವರೇ, ನಮ್ಮ ಆಂತರಿಕ ಪ್ರಕರಣದಲ್ಲಿ ಮೂಗು ತೂರಿಸಲು ಇದು ಮೋದಿ ಆಡಳಿತವಿರುವ ಭಾರತವಲ್ಲ, ಇಮ್ರಾನ್‌ ಖಾನ್‌ ಅವರ ನಯಾ ಪಾಕಿಸ್ತಾನ. ನಮ್ಮ ರಾಷ್ಟ್ರಧ್ವಜದ ಬಿಳಿ ಬಣ್ಣವೂ (ಅಲ್ಪಸಂಖ್ಯಾತರ ಪ್ರತೀಕ) ನಮಗೆ ಆಪ್ತವಾಗಿದೆ. ಇನ್ನಾದರೂ ನೀವು ಇದೇ ದಕ್ಷತೆಯಿಂದ ನಿಮ್ಮ ದೇಶದ ಅಲ್ಪಸಂಖ್ಯಾತರೊಡನೆ ವ್ಯವಹರಿಸುತ್ತೀರಿ ಎಂದು ಆಶಿಸುತ್ತೇನೆ’ ಎಂದರು.

ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಸುಷ್ಮಾ, “ಮಿಸ್ಟರ್‌ ಮಿನಿಸ್ಟರ್‌, ನಾನು ಹೈಕಮಿಷನ್‌ಗೆ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದಷ್ಟೇ ಹೇಳಿದ್ದೆ. ಅಷ್ಟಕ್ಕೆ ನೀವು ಅಸಂಬದ್ಧವಾಗಿ ಮಾತಾಡಿರುವುದು ಪ್ರಕರಣದ ಬಗ್ಗೆ ನಿಮ್ಮಲ್ಲಿರುವ ಅಪರಾಧಿ ಮನೋಭಾವವನ್ನು ಎತ್ತಿ ತೋರಿಸಿದೆ’ ಎಂದು ತಿರುಗೇಟು ನೀಡಿದರು.

ತನಿಖೆಗೆ ಆದೇಶಿಸಿದ ಇಮ್ರಾನ್‌
ಅಪಹರಣ ವಿಚಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಲೇ ಎಚ್ಚೆತ್ತುಕೊಂಡಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ. ಇತ್ತೀಚೆಗಷ್ಟೇ “ಮೋದಿ ಸರ್ಕಾರಕ್ಕೆ ಅಲ್ಪಸಂಖ್ಯಾತರನ್ನು ಹೇಗೆ ನಡೆಸಿಕೊಳ್ಳಬೇಕೆಂದು ನಾನು ತೋರಿಸುತ್ತೇನೆ’ ಎಂದಿದ್ದ ಇಮ್ರಾನ್‌ಗೆ ಈ ಪ್ರಕರಣ ಇರುಸು ಮುರುಸು ತಂದಿದೆ.

ಏನಿದು ಘಟನೆ?
ಹೋಳಿ ಹಬ್ಬದಂದು ಪಾಕ್‌ನ ಸಿಂಧ್‌ ಪ್ರಾಂತ್ಯದ ಗೋಟಿR ಜಿಲ್ಲೆಯ ಮನೆಯೊಂದಕ್ಕೆ ನುಗ್ಗಿದ ಪ್ರಭಾವಿ ವ್ಯಕ್ತಿಗಳಿದ್ದ ಗುಂಪೊಂದು ರವೀನಾ (13), ರೀನಾ (15) ಎಂಬಿಬ್ಬರು ಬಾಲಕಿಯರನ್ನು ಅಪಹರಿಸಿದ್ದರು. ಇದಾಗಿ, ಕೆಲ ಹೊತ್ತಿನಲ್ಲೇ ಆ ಬಾಲಕಿಯರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳಿಸಿ, ಮದುವೆ ಮಾಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದವು. ಇದು ಪಾಕಿಸ್ತಾನದಲ್ಲಿ ಹಿಂದೂ ಸಂಘಟನೆಗಳ ಪ್ರತಿಭಟನೆಗೆ ಕಾರಣವಾಗಿದೆ.

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.