ಆರ್ಥಿಕ ಹೊಡೆತ; ಚಿಲಿಯಲ್ಲಿ ಬೀದಿಗಿಳಿದ ಲಕ್ಷಾಂತರ ಮಂದಿ-ಅಧ್ಯಕ್ಷರ ರಾಜೀನಾಮೆಗೆ ಪಟ್ಟು


Team Udayavani, Oct 26, 2019, 12:22 PM IST

chile new

ಸ್ಯಾಂಟಿಯಾಗೋ: ಇತ್ತೀಚೆಗಷ್ಟೇ ಹಾಂಗ್ ಕಾಂಗ್ ನಲ್ಲಿ ಸತತ ಮೂರು ತಿಂಗಳ ಕಾಲ ಲಕ್ಷಾಂತರ ಮಂದಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಕೊನೆಗೂ ಚೀನಾ ಸರಕಾರ ಆರೋಪಿಗಳ ಹಸ್ತಾಂತರ ಮಸೂದೆ ವಾಪಸ್ ಪಡೆದಿತ್ತು. ಇದೀಗ ಚಿಲಿಯಲ್ಲಿಯೂ ಲಕ್ಷಾಂತರ ಜನರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಚಿಲಿಯಲ್ಲಿ ಭಾರೀ ಪ್ರತಿಭಟನೆಗೆ ಕಾರಣ ಏನು?

ದೇಶದಲ್ಲಿ ಅಮೂಲಾಗ್ರವಾಗಿ ಆರ್ಥಿಕ ಸುಧಾರಣೆ ಮತ್ತು ಚಿಲಿ ಅಧ್ಯಕ್ಷ ಸೆಬಾಸ್ಟಿಯನ್ ಪಿನೇರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಹತ್ತು ಲಕ್ಷ ಮಂದಿ ಚಿಲಿಯಲ್ಲಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಚಿಲಿಯ ಬೀದಿಗಿಳಿದಿರುವ ಲಕ್ಷಾಂತರ ಪ್ರತಿಭಟನಾಕಾರರು ತಮ್ಮ ಕೈಯಲ್ಲಿ ಸ್ಥಳೀಯ ಹಾಗೂ ರಾಷ್ಟ್ರದ ಧ್ವಜವನ್ನು ಹಿಡಿದು 1973ರಿಂದ 90ರ ದಶಕದವರೆಗೆ ಆಡಳಿತ ನಡೆಸಿದ್ದ ಸರ್ವಾಧಿಕಾರಿ ಆಗೊಸ್ಟೋ ಪಿನೋಶೆಟ್ ಕಾಲದ ಪ್ರತಿರೋಧದ ಹಾಡನ್ನು ಹಾಡುವ ಮೂಲಕ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಇದೊಂದು ಐತಿಹಾಸಿಕ ದಿನ ಎಂದು ಸ್ಯಾಂಟಿಯಾಗೋ ಗವರ್ನರ್ ಕಾರ್ಲಾ ರುಬಿಲಾರ್ ಟ್ವೀಟರ್ ನಲ್ಲಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಶಾಂತಿಯುತ ಪ್ರತಿಭಟನೆಯನ್ನು ಶ್ಲಾಘಿಸಿರುವ ಗವರ್ನರ್ ಇದು ನೂತನ ಚಿಲಿಯ ಕನಸನ್ನು ಪ್ರತಿನಿಧಿಸುತ್ತಿದೆ ಎಂದು ತಿಳಿಸಿದ್ದಾರೆ.

ದೇಶಾದ್ಯಂತ ಲಕ್ಷಾಂತರ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಯಾಂಟಿಯಾಗೋ ಟೌನ್ ಹಾಲ್ ಸಮೀಪ ಆಗಮಿಸುತ್ತಿರುವವರ ಸಂಖ್ಯೆಯೇ 8,20,000 ಎಂದು ಪೊಲೀಸ್ ಮೂಲಗಳು ತಿಳಿಸಿರುವುದಾಗಿ ವರದಿ ವಿವರಿಸಿದೆ.

ಕಳೆದ ಕೆಲವು ವಾರಗಳಿಂದ ದೇಶದಲ್ಲಿನ ಸಾಮಾಜಿಕ ಆರ್ಥಿಕ ಬೆಳವಣಿಗೆಯ ಕುಸಿತದಿಂದಾಗಿ ಕಡಿಮೆ ಸಂಬಳ, ಪಿಂಚಣಿ ಪಡೆಯುವಂತಾಗಿದೆ. ದುಬಾರಿ ಆರೋಗ್ಯ ಸೇವೆ ಮತ್ತು ಶಿಕ್ಷಣ. ಅಷ್ಟೇ ಅಲ್ಲ ಶ್ರೀಮಂತ, ಬಡವರ ನಡುವಿನ ಅಂತರ ಹೆಚ್ಚುತ್ತಿರುವುದು ಚಿಲಿಯಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಜನರು ಲಕ್ಷಾಂತರ ಸಂಖ್ಯೆಯಲ್ಲಿ ಬೀದಿಗಿಳಿಯವಂತೆ ಮಾಡಿದೆ.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.