11 ರಾಜಕುಮಾರರು ನಾಲ್ವರು ಸಚಿವರ ಸೆರೆ


Team Udayavani, Nov 6, 2017, 6:35 AM IST

sere.jpg

ರಿಯಾದ್‌: ಸೌದಿ ಅರೇಬಿಯಾದಲ್ಲಿ ಭ್ರಷ್ಟಾಚಾರ ನಿಗ್ರಹದ ಮಹತ್ವದ ಕ್ರಮವಾಗಿ ಪ್ರಮುಖ ಶತಕೋಟ್ಯಧಿಪತಿ ರಾಜಕುಮಾರ ಅಲ್ವಲೀದ್‌ ಬಿನ್‌ ತಲಾಲ್‌ ಸೇರಿದಂತೆ 11 ರಾಜಕುಮಾರರು, ನಾಲ್ವರು ಸಚಿವರು ಮತ್ತು 10 ಮಾಜಿ ಸಚಿವರನ್ನು ಬಂಧಿಸಲಾ ಗಿದೆ. ಈ ಕುರಿತು ಸೌದಿ ಅರೇಬಿಯಾದ ಅಧಿಕೃತ ಸುದ್ದಿವಾಹಿನಿ ವರದಿ ಮಾಡಿದ್ದು, ಸಂಚಲನಕ್ಕೆ ಕಾರಣವಾಗಿದೆ.

ಅಲ್ವಲೀದ್‌ ಬಂಧನ ಕೇವಲ ಸೌದಿಯ ಲ್ಲಷ್ಟೇ ಅಲ್ಲ, ವಿಶ್ವದ ಹಲವು ಕಂಪನಿಗಳಿಗೂ ಆಘಾತ ನೀಡಿದೆ. ಯಾಕೆಂದರೆ ಅಲ್ವಲೀದ್‌, ರಾಜಮನೆತನದ ಕಿಂಗ್‌ಡಮ್‌ ಹೋಲ್ಡಿಂಗ್‌ ಕಂಪನಿಯ ನೇತೃತ್ವ ವಹಿಸಿದ್ದು, ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳ ಪೈಕಿ ಒಬ್ಬರು. ಅಷ್ಟೇ ಅಲ್ಲ, ನ್ಯೂಸ್‌ ಕಾರ್ಪ್‌, ಸಿಟಿ ಗ್ರೂಪ್‌, ಟ್ವಿಟರ್‌ ಮತ್ತು ಇತರ ಹಲವು ಪ್ರಮುಖ ಕಂಪನಿಗಳಲ್ಲಿ ಹೂಡಿಕೆ ಮಾಡಿದ್ದಾರೆ. ಅರಬ್‌ನ ಹಲವು ಸುದ್ದಿಸಂಸ್ಥೆಗಳಲ್ಲೂ ಅವರ ಹೂಡಿಕೆಯಿದೆ.

ಈ ಕ್ರಮದಿಂದಾಗಿ ರಾಜ ಸಲ್ಮಾನ್‌ನ ಆತ್ಮೀಯ ಪುತ್ರ ರಾಜಕುಮಾರ ಮೊಹ ಮ್ಮದ್‌ ಬಿನ್‌ ಸಲ್ಮಾನ್‌(ಭಾವೀ ದೊರೆ)ಗೆ ಹೆಚ್ಚು ಅಧಿಕಾರ ನೀಡಿದಂತಾಗಿದೆ. ಈಗಾ ಗಲೇ ಸೌದಿಯಲ್ಲಿ ಮನೆ ಮಾ ತಾ ಗಿರುವ ಮೊಹಮ್ಮದ್‌ ಬಿನ್‌ ಸಲ್ಮಾನ್‌, ದೇಶದ ಸೇನೆ, ವಿದೇಶಾಂಗ ವ್ಯವಹಾರ, ಆರ್ಥಿಕತೆ ಮತ್ತು ಸಾಮಾಜಿಕ ನೀತಿಗಳಲ್ಲಿ ಪ್ರಮುಖ ಸ್ಥಾನ ಪಡೆದಿದ್ದಾರೆ. ಕೇವಲ 32 ವರ್ಷದಲ್ಲೇ ಅವರಿಗೆ ವಿಶೇಷ ಅಧಿಕಾರ ನೀಡಲಾಗಿದೆ.

ಹೋಟೆಲ್‌ ತಾತ್ಕಾಲಿಕ ಜೈಲು: ರಿಯಾದ್‌ನ ರಿಟ್ಜ್ ಕಾರ್ಲ್ಟನ್‌ ಹೋಟೆಲ್‌ ಅನ್ನು ಖಾಲಿ ಮಾಡಿಸಲಾಗಿದ್ದು, ಬಂಧಿತ ರಾಜಕು ಮಾರರನ್ನು ಇಲ್ಲಿರಿಸಲಾ ಗುತ್ತದೆ ಎಂದು ಹೇಳಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ಖಾಸಗಿ ವಿಮಾನಗಳಿಗೆ ಅವಕಾಶ ನೀಡು ತ್ತಿಲ್ಲ. ಇದರಿಂದಾಗಿ ಇತರ ರಾಜಕುಮಾ ರರೂ ದೇಶದಿಂದ ಹೊರಗೆ ತೆರಳದಂತೆ ನಿರ್ಬಂಧಿಸಲಾಗುತ್ತಿದೆೆ. ಆದರೆ ಈಗಾಗಲೇ ಬಂಧಿಸಲಾಗಿರುವ ರಾಜಕುಮಾರರ ಆಸ್ತಿಯನ್ನೂ ಮುಟ್ಟುಗೋಲು ಮಾಡಲಾ ಗಿದೆಯೇ ಎಂಬುದು ಖಚಿತಪಟ್ಟಿಲ್ಲ.

ಭ್ರಷ್ಟಾಚಾರದ ಆರೋಪ ಎಷ್ಟು ನಿಜ?: ಅಲ್ವಲೀದ್‌ ಕೆಲವೇ ವರ್ಷಗಳಲ್ಲಿ ಅಪಾರ ಆಸ್ತಿ ಗಳಿಸಿದ್ದು ಹಲವರ ಹುಬ್ಬೇರಿಸಿತ್ತು. ಭ್ರಷ್ಟಾಚಾರದಲ್ಲಿ ತೊಡಗಿರುವ ಬಗ್ಗೆ ಊಹಾಪೋಹಗಳೂ ಕೇಳಿಬಂದಿತ್ತು. ಆದರೆ ಸೌದಿ ರಾಜಮನೆತನವೇ ಸರ್ಕಾರ ನಡೆಸುತ್ತಿರುವುದರಿಂದ ಅವರ ವಿರುದ್ಧದ ಭ್ರಷ್ಟಾಚಾರ ಆರೋಪವನ್ನು ವಿಚಾರಣೆ ನಡೆಸುವುದಾಗಲೀ, ಸಾಬೀತುಗೊಳಿಸುವು ದಾಗಲೀ ಸುಲಭ ಸಾಧ್ಯ ಆಗಿರಲಿಲ್ಲ.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.