Earthquake: ಚೀನಾದಲ್ಲಿ ಪ್ರಬಲ ಭೂಕಂಪ… 111 ಮಂದಿ ಸಾವು, 200 ಕ್ಕೂ ಹೆಚ್ಚು ಮಂದಿಗೆ ಗಾಯ


Team Udayavani, Dec 19, 2023, 8:24 AM IST

Earthquake: ಚೀನಾದಲ್ಲಿ ಪ್ರಬಲ ಭೂಕಂಪ… 111 ಮಂದಿ ಸಾವು, 200 ಕ್ಕೂ ಹೆಚ್ಚು ಮಂದಿಗೆ ಗಾಯ

ಬೀಜಿಂಗ್: ಚೀನಾದ ಗನ್ಸು-ಕಿಂಗ್ಹೈ ಗಡಿ ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 111 ಜನರು ಸಾವನ್ನಪ್ಪಿದ್ದಾರೆ ಮತ್ತು 230 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮಾಹಿತಿ ಪ್ರಕಾರ ಸೋಮವಾರ ರಾತ್ರಿ 23:59 ಕ್ಕೆ ವಾಯುವ್ಯ ಚೀನಾದ ಗನ್ಸು ಪ್ರಾಂತ್ಯದಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಇದರಿಂದ ಕಟ್ಟಡಗಳು ನೆಲಸಮಗೊಂಡಿದ್ದು ಅವಶೇಷಗಳಡಿ ಹಲವು ಮಂದಿ ಸಿಲುಕಿದ್ದು ಅವರನ್ನು ರಕ್ಷಣಾ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು ಇದುವರೆಗೂ ಸುಮಾರು ನೂರಕ್ಕೂ ಅಧಿಕ ಮಂದಿ ಸಾವನ್ನಪಿರುವ ಕುರಿತು ವರದಿಯಾಗಿದೆ ಅಲ್ಲದೆ ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಚೀನಾದಲ್ಲಿ ಭೂಕಂಪನ ಸಂಭವಿಸುವ ಮುನ್ನ ಪಾಕಿಸ್ತಾನದಲ್ಲೂ ಪ್ರಬಲ ಭೂಕಂಪನದ ಅನುಭವವಾಗಿತ್ತು ಎಂದು ಮೂಲಗಳು ತಿಳಿಸಿವೆ.

ಚೀನಾದ ಸರ್ಕಾರಿ ಮಾಧ್ಯಮ ವರದಿಯ ಪ್ರಕಾರ, ಗನ್ಸು ಮತ್ತು ಕಿಂಗ್ಹೈ ಪ್ರಾಂತ್ಯಗಳಲ್ಲಿ ಸಂಭವಿಸಿದ ಭೂಕಂಪದಲ್ಲಿ ಕನಿಷ್ಠ 111 ಜನರು ಸಾವನ್ನಪ್ಪಿದ್ದಾರೆ. 230ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದೆ. ಅಷ್ಟುಮಾತ್ರವಲ್ಲದೆ ಕೌಂಟಿ, ಡಯೋಜಿ ಮತ್ತು ಕಿಂಗ್ಹೈ ಪ್ರಾಂತ್ಯದಲ್ಲಿ ಭೂಕಂಪದಿಂದಾಗಿ ಗರಿಷ್ಠ ಹಾನಿ ಸಂಭವಿಸಿದೆ. ಇಲ್ಲಿ ಅನೇಕ ಕಟ್ಟಡಗಳು ಕುಸಿದು ಬಿದ್ದಿದ್ದರಿಂದ ಜನರು ಅವಶೇಷಗಳಡಿಯಲ್ಲಿ ಹೂತು ಹೋಗಿದ್ದು, ರಕ್ಷಣಾ ತಂಡಗಳು ಅವರನ್ನು ರಕ್ಷಿಸುವಲ್ಲಿ ನಿರತವಾಗಿವೆ. ಸತ್ತವರ ಮತ್ತು ಗಾಯಗೊಂಡವರ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಲಾಗಿದೆ.

ಭೂಕಂಪದ ಕೇಂದ್ರಬಿಂದುವು 35.7 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 102.79 ಡಿಗ್ರಿ ಪೂರ್ವ ರೇಖಾಂಶದಲ್ಲಿ 10 ಕಿಲೋಮೀಟರ್ ಆಳದಲ್ಲಿ ದಾಖಲಾಗಿದೆ ಎಂದು CENC ಹೇಳಿದೆ. ಅವಶೇಷಗಳಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಭರದಲ್ಲಿ ಸಾಗುತ್ತಿದ್ದು ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ ಅಲ್ಲದೆ ಹೆಚ್ಚಿನ ಸೇವೆಗಳಿಗಳಿಗಿ ಸಿಬಂದಿಗಳನ್ನು ನೇಮಿಸಲಾಗಿದೆ ಎಂದು ಹೇಳಲಾಗಿದೆ.

ಪಾಕಿಸ್ತಾನದಲ್ಲೂ ಕಂಪಿಸಿದ ಭೂಮಿ :
ಸೋಮವಾರ ಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿದ್ದು. ಆದರೆ, ಯಾವುದೇ ಹಾನಿ ಅಥವಾ ಸಾವು ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಸೆಂಟರ್ (NSMC) ಮಾಹಿತಿ ಪ್ರಕಾರ, ಭೂಕಂಪವು 133 ಕಿಮೀ ಆಳದಲ್ಲಿ ಸಂಭವಿಸಿದೆ ಮತ್ತು ಅದರ ಕೇಂದ್ರಬಿಂದು ಭಾರತದ ಜಮ್ಮು ಮತ್ತು ಕಾಶ್ಮೀರವಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Kottigehara: ಅಬಕಾರಿ ದಾಳಿ, 100 ಲೀ. ಬೆಲ್ಲದ ಕೊಳೆ ಹಾಗೂ 5 ಲೀ. ಕಳ್ಳಬಟ್ಟಿ, ಪರಿಕರ ವಶ

 

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.