ಲಾಹೋರ್ನಲ್ಲಿ ವಾಲ್ಮೀಕಿ ದೇಗುಲ ಪುನಾರಂಭ: ಭಕ್ತರಿಗೆ ಮುಕ್ತವಾದ 1200 ವರ್ಷ ಹಳೆಯ ದೇವಾಲಯ
Team Udayavani, Aug 5, 2022, 6:40 AM IST
ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ರಾಜಧಾನಿ ಲಾಹೋರ್ನಲ್ಲಿ ಇರುವ ದೇವಸ್ಥಾನವು ಕೊನೆಗೂ ಭಕ್ತರಿಗೆ ಮುಕ್ತವಾಗಿದೆ. 1,200 ವರ್ಷಗಳ ಇತಿಹಾಸ ಹೊಂದಿರುವ ವಾಲ್ಮೀಕಿ ದೇಗುಲದ ಜಮೀನು ಎರಡು ದಶಕಗಳ ಕಾಲ ಕ್ರಿಶ್ಚಿಯನ್ ಕುಟುಂಬದ ವಶದಲ್ಲಿತ್ತು. ಅದನ್ನು ಸ್ಥಳೀಯ ಸರ್ಕಾರದ ಸಂಸ್ಥೆಯೊಂದು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳಿಗೆ ಹಸ್ತಾಂತರಿಸಿದೆ. ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ನಲ್ಲಿ ದೀರ್ಘಕಾಲದಿಂದ ಕಾನೂನು ಹೋರಾಟ ನಡೆಯುತ್ತಿತ್ತು.
ಸರ್ಕಾರಿ ಆಸ್ತಿ ನಿರ್ವಹಣಾ ಮಂಡಳಿಯ ವಕ್ತಾರ ಅಮೀರ್ ಹಶ್ಮಿ ಬುಧವಾರ ದೇಗುಲವನ್ನು ಉದ್ಘಾಟಿಸಿದರು. 100 ಹಿಂದೂಗಳು, ಸಿಖ್ ಸಮುದಾಯದ ಕೆಲವರು, ಮುಸ್ಲಿಮರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮುಂದಿನ ದಿನಗಳಲ್ಲಿ ದೇಗುಲವನ್ನು ಮೂಲ ಯೋಜನೆಯಂತೆ ಪೂರ್ಣ ಪ್ರಮಾಣದಲ್ಲಿ ನವೀಕರಿಸಲಾಗುತ್ತದೆ ಎಂದು ಹಶ್ಮಿ ಹೇಳಿದರು.
ಎರಡು ದಶಕಗಳ ಹಿಂದೆ ತಾವೆಲ್ಲರೂ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದೆವು. ದೇಗುಲದಲ್ಲಿ ಕೇವಲ ವಾಲ್ಮೀಕಿ ಎಂಬ ಜಾತಿಯ ಸಮುದಾಯದವರಿಗೆ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಲು ಅನುಮತಿ ನೀಡಲಾಗುತ್ತಿತ್ತು ಎಂದು ಜಮೀನು ವಶಪಡಿಸಿಕೊಂಡಿದ್ದ ಕ್ರಿಶ್ಚಿಯನ್ ಕುಟುಂಬ ವಾದಿಸಿತ್ತು.
ಲಾಹೋರ್ನಲ್ಲಿ ಕೃಷ್ಣ ದೇಗುಲವು ಈಗಾಗಲೇ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದ್ದು, ಈಗ ವಾಲ್ಮೀಕಿ ದೇಗುಲವೂ ತೆರೆದಿರುವುದು ಹಿಂದೂ ಸಮುದಾಯಕ್ಕೆ ಖುಷಿ ತಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ