Pakistan: ಬುಡಕಟ್ಟು ಜನಾಂಗದ ಗುಂಪು ಘರ್ಷಣೆ; ಕನಿಷ್ಠ 15 ಮಂದಿ ಮೃತ್ಯು
Team Udayavani, May 16, 2023, 9:25 AM IST
ಕರಾಚಿ: ಬುಡಕಟ್ಟು ಜನಾಂಗದ ಗುಂಪು ಘರ್ಷಣೆಯಲ್ಲಿ ಕನಿಷ್ಠ 15 ಮಂದಿ ಮೃತಪಟ್ಟಿರುವ ಘಟನೆ ಪಾಕಿಸ್ತಾನದ ದರ್ರಾ ಆದಮ್ ಖೇಕ್ ಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ.
ಸನ್ನಿಖೇಲ್ ಮತ್ತು ಝರ್ಘುನ್ ಖೇಲ್ ಬುಡಕಟ್ಟು ಜನಾಂಗದವರ ನಡುವೆ ಕಲ್ಲಿದ್ದಲು ಗಣಿ ಗಡಿ ವಿಂಗಡಣೆ ಕುರಿತು ಕಳೆದ ಹಲವರು ವರ್ಷಗಳಿಂದ ವಿವಾದಗಳಿದ್ದು, ಈ ಬಿಕ್ಕಟ್ಟು ಹೆಚ್ಚಾಗಿ ಘರ್ಷಣೆ ಉಂಟಾಗಿದೆ.
ಪೇಶಾವರದ ನೈಋತ್ಯಕ್ಕೆ ಸುಮಾರು 35 ಕಿಮೀ ದೂರದಲ್ಲಿರುವ ದರ್ರಾ ಆದಮ್ ಖೇಕ್ ಪ್ರದೇಶದ ಕೊಹತ್ ಜಿಲ್ಲೆಯಲ್ಲಿ ಘರ್ಷಣೆ ನಡೆದಿದ್ದು ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಮದುವೆಯಲ್ಲಿ ತನ್ನ ಪತ್ನಿ ಜತೆ ಡ್ಯಾನ್ಸ್ ಮಾಡುತ್ತಿದ್ದ ಸಹೋದರರನ್ನೇ ಹತ್ಯೆಗೈದ ವ್ಯಕ್ತಿ
ಮೃತದೇಹಗಳು ಮತ್ತು ಗಾಯಗೊಂಡವರನ್ನು ಪೇಶಾವರ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡವರ ನಿಖರ ಸಂಖ್ಯೆ ತಕ್ಷಣವೇ ತಿಳಿದಿಲ್ಲ, ಆದರೆ ಗುಂಡಿನ ಚಕಮಕಿಯಲ್ಲಿ ಎರಡೂ ಕಡೆಯಿಂದ ಸಾವುನೋವುಗಳು ಸಂಭವಿಸಿವೆ ಎಂದು ಪೊಲೀಸರು ಹೇಳಿದ್ದಾರೆ.
ಪೊಲೀಸರು ಮತ್ತು ಇತರ ಭದ್ರತಾ ಪಡೆಗಳ ಜಂಟಿ ತಂಡಗಳು ಸ್ಥಳಕ್ಕೆ ಧಾವಿಸಿ ಎರಡು ಬುಡಕಟ್ಟುಗಳ ನಡುವಿನ ಗುಂಡಿನ ದಾಳಿಯನ್ನು ನಿಯಂತ್ರಿಸಿದೆ.
ಕಲ್ಲಿದ್ದಲು ಗಣಿ ಗಡಿ ವಿಂಗಡಣೆ ಈ ಬಿಕ್ಕಟ್ಟನ್ನು ಕೊನೆಗೊಳಿಸುವ ಪ್ರಯತ್ನದಲ್ಲಿ ಹಲವು ಬಾರಿ ಸಂಧಾನ ಸಭೆಗಳನ್ನು ನಡೆಸಿದ್ದರೂ ಪ್ರಯೋಜನವಾಗಿಲ್ಲ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ