ಅಮೆರಿಕ ನೈಟ್‌ ಕ್ಲಬ್ಬಲ್ಲಿ ಶೂಟೌಟ್‌: ವ್ಯಕ್ತಿ ಸಾವು, 15 ಮಂದಿಗೆ ಗಾಯ


Team Udayavani, Mar 27, 2017, 3:45 AM IST

Cameo-club.jpg

ಸಿನ್ಸಿನಾಟಿ/ಹೂಸ್ಟನ್‌: (ಅಮೆರಿಕ): ವಾರಾಂತ್ಯದ ಮೋಜಿಗಾಗಿ ನೈಟ್‌ ಕ್ಲಬ್‌ ಒಂದರಲ್ಲಿ ಕಿಕ್ಕಿರಿದು ನೆರೆದಿದ್ದ ಜನಜಂಗುಳಿ ಮೇಲೆ ಹಠಾತ್‌ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬ ಹತನಾಗಿ, ಕನಿಷ್ಠ 15 ಮಂದಿ ಗಾಯಗೊಂಡ ಘಟನೆ ಶನಿವಾರ ಮಧ್ಯರಾತ್ರಿ ನಡೆದಿದೆ.

“”ಆದರೆ ಇದು ಉಗ್ರಗಾಮಿಗಳು ನಡೆಸಿದ ದಾಳಿ ಎಂದು ದೃಢಪಡಿಸುವ ಯಾವುದೇ ಸುಳಿವು ದೊರೆತಿಲ್ಲ ಮತ್ತು ದಾಳಿ ನಡೆಸಿದವರು ಯಾರೆಂದು ಕೂಡ ತಿಳಿದುಬಂದಿಲ್ಲ,” ಎಂದು ಸಹಾಯಕ ಪೊಲೀಸ್‌ ಮುಖ್ಯಸ್ಥ ಪೌಲ್‌ ನ್ಯೂಡಿಗೆಟ್‌ ಟ್ವೀಟ್‌ ಮಾಡಿದ್ದಾರೆ. “”ಕ್ಯಾಮ್ಯೋ ಕ್ಲಬ್‌ ಮೇಲೆ ಒಬ್ಬನೇ ವ್ಯಕ್ತಿ ದಾಳಿ ನಡೆಸಿರುವುದು ವರದಿಯಾಗಿದೆ. ಆದರೆ ದಾಳಿಯಲ್ಲಿ ಕನಿಷ್ಠ ಇಬ್ಬರು ದಾಳಿಕೋರರು ಶಾಮೀಲಾಗಿರುವ ಶಂಕೆಯಿದೆ,” ಎಂದು ನ್ಯೂಡಿಗೆಟ್‌ ಹೇಳಿದ್ದಾರೆ.

“”ಶನಿವಾರ ರಾತ್ರಿ ಕ್ಲಬ್‌ನಲ್ಲಿ ಬಹುತೇಕ ಯುವಕ, ಯುವತಿಯರೇ ಇದ್ದರು. ಈ ವೇಳೆ ನಡೆದ ದಾಳಿಗೆ ಸಂಬಂಧಿಸಿದಂತೆ ಹಲವು ಗೊಂದಲಗಳಿವೆ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಗಾಯಗೊಂಡವರಿಗೆ ಪ್ರಥಮ ಚಿಕಿತ್ಸೆ ನೀಡುತ್ತಿದ್ದಾರೆ. ಘಟನೆಯಲ್ಲಿ ಹತ್ಯೆಗೀಡಾದ ವ್ಯಕ್ತಿಯ ಗುರುತು ಪತ್ತೆ ಕಾರ್ಯ ಕೂಡ ಮುಂದುವರಿದಿದೆ. ಜನಜಂಗುಳಿ ಇದ್ದ ಕಾರಣ ಆರೋಪಿಗಳ ಪತ್ತೆಗೆ ತೊಡಕಾಗುತ್ತಿದೆ,” ಎಂದು ಕ್ಯಾ. ಕಿಮ್‌ ವಿಲಿಯಮಸ್‌Õ ಮಾಹಿತಿ ನೀಡಿದ್ದಾರೆ.49 ಮಂದಿಯನ್ನು ಬಲಿತೆಗೆದುಕೊಂಡಿದ್ದ ಹಾಗೂ ಅಮೆರಿಕದ ಇತಿಹಾಸದಲ್ಲೇ ಅತ್ಯಂತ ಭೀಕರ ಗುಂಡಿನ ದಾಳಿ ಎಂದೆನಿಸಿದ, ಫ್ಲೋರಿಡಾದ ಓರ್ಲಾಂಡೋದಲ್ಲಿನ ಸಲಿಂಗಿಗಳ ನೈಟ್‌ ಕ್ಲಬ್‌ ಮೇಲಿನ ದಾಳಿ ನಡೆದು ವರ್ಷ ಕಳೆಯುವ ಮುನ್ನವೇ ಮತ್ತೂಂದು ನೈಟ್‌ ಕ್ಲಬ್‌ ಮೇಲೆ ದಾಳಿ ನಡೆದಿದೆ.

ಹೀರೋಗೆ ಸನ್ಮಾನ: ಕಳೆದ ತಿಂಗಳು ಅಮೆರಿಕದ ಕನ್ಸಾಸ್‌ನಲ್ಲಿ ಮಾಜಿ ಸೈನಿಕನೊಬ್ಬನ ಗುಂಡಿಗೆ ಆಂಧ್ರಪ್ರದೇಶದ ಟೆಕಿ ಶ್ರೀನಿವಾಸ ಕುಚಿಭೋಟ್ಲ ಹತ್ಯೆಯಾದ ಸಂದರ್ಭದಲ್ಲಿ ಗುಂಡೇಟಿನಿಂದ ಗಾಯಗೊಂಡಿದ್ದ ಇಯಾನ್‌ ಗ್ರಿಲೊಟ್‌ಗೆ ಭಾರತೀಯ-ಅಮೆರಿಕನ್‌ ಸಮುದಾಯದ ಸದಸ್ಯರು 1 ಲಕ್ಷ ಡಾಲರ್‌ ಮೊತ್ತವನ್ನು ಚಂದಾ ಎತ್ತಿ ನೀಡಿದ್ದಾರೆ. ಅವರು ಹೆಚ್ಚಿನ ಗುಂಡು ಕುಚಿಭೋಟ್ಲಗೆ ತಗಲುವುದನ್ನು ತಡೆದಿದ್ದರು. ಜತೆಗೆ ಅವರನ್ನು “ಅಮೆರಿಕದ ನಿಜವಾದ ಹೀರೋ’ ಎಂದು ಹೊಗಳಿ ಸನ್ಮಾನಿಸಲಾಗಿದೆ.  ಇಯಾನ್‌ ಕನ್ಸಾಸ್‌ನಲ್ಲಿ ಮನೆ ಕೊಳ್ಳಲು ನೆರವಾಗುವಂತೆ ಈ ದೇಣಿಗೆ ನೀಡಲಾಗಿದೆ.

ಟಾಪ್ ನ್ಯೂಸ್

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.