ಸ್ಫೋಟ ರಹಿತ ಕಾರ್ಯಾಚರಣೆ… ಝವಾಹಿರಿ ಹತ್ಯೆಗೈಯಲು CIA ಬಳಕೆ ಮಾಡಿದ ಶಸ್ತ್ರಾಸ್ತ್ರ ಯಾವುದು?

ಅಲ್ ಖೈದಾ ಚಟುವಟಿಕೆ ಮತ್ತು ಝವಾಹಿರಿಯ ಅಡಗುತಾಣ ಪತ್ತೆ ಹಚ್ಚುವ ಬಗ್ಗೆ ಸಿಐಎ ರಹಸ್ಯವಾಗಿ ಕಾರ್ಯಾಚರಿಸುತ್ತಿತ್ತು.

Team Udayavani, Aug 2, 2022, 11:59 AM IST

ಸ್ಫೋಟ ರಹಿತ ಕಾರ್ಯಾಚರಣೆ… ಝವಾಹಿರಿ ಹತ್ಯೆಗೈಯಲು CIA ಬಳಕೆ ಮಾಡಿದ ಶಸ್ತ್ರಾಸ್ತ್ರ ಯಾವುದು?

ವಾಷಿಂಗ್ಟನ್: ಅಫ್ಘಾನಿಸ್ತಾನದಲ್ಲಿ ಅಡಗಿ ಕುಳಿತಿದ್ದ ಅಲ್ ಖೈದಾ ಭಯೋತ್ಪಾದಕ ಸಂಘಟನೆಯ ಮುಖಂಡ ಐಮನ್ ಅಲ್ ಝವಾಹಿರಿಯನ್ನು ಅಮೆರಿಕ ವೈಮಾನಿಕ ದಾಳಿಯ ಮೂಲಕ ಹತ್ಯೆಗೈದಿದೆ. 2011ರಲ್ಲಿ ಅಲ್ ಖೈದಾ ಸ್ಥಾಪಕ ಒಸಾಮಾ ಬಿನ್ ಲಾಡೆನ್ ನನ್ನು ಹತ್ಯೆಗೈದ ನಂತರ ನಡೆದ ಎರಡನೇ ಅತೀ ದೊಡ್ಡ ಕಾರ್ಯಾಚರಣೆ ಇದಾಗಿದೆ ಎಂದು ವರದಿ ವಿವರಿಸಿದೆ.

ಇದನ್ನೂ ಓದಿ:ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಮತ್ತಿಬ್ಬರ ಬಂಧನ: ಹತ್ಯೆಗೈದವರ ಮಾಹಿತಿ ಸಿಕ್ಕಿದೆ ಎಂದ SP

ಪಾಕಿಸ್ತಾನದ ಬುಡಕಟ್ಟು ಪ್ರದೇಶದ ಅಥವಾ ಅಫ್ಘಾನಿಸ್ಥಾನದಲ್ಲಿ ಅಡಗಿ ಕೊಂಡಿದ್ದಾನೆ ಎಂದು ಈ ಮೊದಲು ಊಹಾಪೋಹಗಳು ಹರಿದಾಡುತ್ತಿದ್ದರೂ ಕೂಡಾ ಝವಾಹಿರಿಯ ಅಡಗುತಾಣವನ್ನು ಪತ್ತೆಹಚ್ಚಿ ಹೇಗೆ ಕೊಲ್ಲಲಾಯಿತು ಎಂಬ ಬಗ್ಗೆ ಹೆಸರು ಹೇಳಲು ಇಚ್ಚಿಸದ ಅಧಿಕಾರಿಯೊಬ್ಬರು ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ.

ಅಲ್ ಖೈದಾ ಭಯೋತ್ಪಾದಕ ಸಂಘಟನೆಯ ಜಾಲದ ಕುರಿತು ಅಮೆರಿಕ ಹಲವಾರು ವರ್ಷಗಳಿಂದ ಹಲವಾರು ಮಾಹಿತಿಗಳನ್ನು ಕಲೆ ಹಾಕುತ್ತಿತ್ತು. ಅಫ್ಘಾನಿಸ್ತಾನದಿಂದ ಸೇನೆಯನ್ನು ಹಿಂಪಡೆದ ನಂತರ ಅಮೆರಿಕ ಅಲ್ ಖೈದಾ ಚಟುವಟಿಕೆ ಮತ್ತು ಝವಾಹಿರಿಯ ಅಡಗುತಾಣ ಪತ್ತೆ ಹಚ್ಚುವ ಬಗ್ಗೆ ಸಿಐಎ ರಹಸ್ಯವಾಗಿ ಕಾರ್ಯಾಚರಿಸುತ್ತಿತ್ತು.

ಝವಾಹಿರಿ ಕುಟುಂಬ ಸದಸ್ಯರ ಪತ್ತೆ:

ಅಫ್ಘಾನಿಸ್ತಾನ, ಗುಡ್ಡಪ್ರದೇಶ ಸೇರಿದಂತೆ ಹಲವೆಡೆ ಝವಾಹಿರಿ ಅಡಗುತಾಣ ಪತ್ತೆಗಾಗಿ ರಹಸ್ಯ ಕಾರ್ಯ ನಡೆಸುತ್ತಿದ್ದ ಸಂದರ್ಭದಲ್ಲಿ ಈ ವರ್ಷ ಝವಾಹಿರಿ ಪತ್ನಿ, ಆತನ ಪುತ್ರಿಯರು, ಪುತ್ರರು ಕಾಬೂಲ್ ನಲ್ಲಿ ವಾಸವಾಗಿದ್ದ ಸ್ಥಳವನ್ನು ಕಂಡು ಹಿಡಿಯಲಾಗಿತ್ತು. ರಹಸ್ಯ ಮಾಹಿತಿಯನ್ನು ಏಪ್ರಿಲ್ ತಿಂಗಳಿನಲ್ಲಿ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾಕ್ ಸುಲ್ಲಿವ್ಯಾನ್ ಅವರಿಗೆ ವಿವರಿಸಲಾಗಿತ್ತು. ಅದೇ ರೀತಿ ಅಧ್ಯಕ್ಷ ಜೋ ಬೈಡೆನ್ ಅವರಿಗೂ ಮಾಹಿತಿ ನೀಡಲಾಗಿತ್ತು ಎಂದು ವರದಿ ತಿಳಿಸಿದೆ.

ಕಾಬೂಲ್ ನಲ್ಲಿ ಸುರಕ್ಷಿತ ಪ್ರದೇಶದಲ್ಲಿ ಝವಾಹಿರಿ ವಾಸವಾಗಿದ್ದಾನೋ ಇಲ್ಲವೋ ಎಂಬುದನ್ನು ಖಚಿತಪಡಿಸಲು ಸಿಐಎ ಗುಪ್ತಚರ ಅಧಿಕಾರಿಗಳು ಹಲವಾರು ತಿಂಗಳುಗಳ ಕಾಲ ಮಾಹಿತಿಯನ್ನು ಕಲೆಹಾಕಿದ್ದರು.

ರಹಸ್ಯ ಕಾರ್ಯಾಚರಣೆಗೆ ಸಿದ್ಧತೆ:

ಝವಾಹಿರಿ ವಾಸ್ತವ್ಯ ಹೂಡಿದ್ದ ಕಟ್ಟಡದ ಮಾಹಿತಿ, ಅದರ ಗುಣಮಟ್ಟದ ಬಗ್ಗೆಯೂ ಮಾಹಿತಿ ಕಲೆಹಾಕಲಾಗಿತ್ತು. ಸುತ್ತಮುತ್ತ ನಾಗರಿಕರಿಗೆ ಹಾನಿಯಾಗದಂತೆ ಕಾರ್ಯಾಚರಣೆ ನಡೆಸುವ ಮೂಲಕ ಝವಾಹಿರಿಯನ್ನು ಹತ್ಯೆಗೈಯುವ ಬಗ್ಗೆ ಸಿಐಎ ಹಾಗೂ ಬೈಡೆನ್ ಜೊತೆ ಹಲವು ಸುತ್ತಿನ ಮಾತುಕತೆ ನಡೆದಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಹಸ್ಯ ಕಾರ್ಯಾಚರಣೆಯ ಅಂಗವಾಗಿ ಅಮೆರಿಕ ಮಾರಕ ಹೆಲ್ ಫೈರ್ ಆರ್9x ಮಿಸೈಲ್ ಅನ್ನು ಅಮೆರಿಕ ಬಳಸಿರುವುದು ಜಗಜ್ಜಾಹೀರಾಗಿದೆ. ಇದೊಂದು ಸಿಡಿತಲೆ ರಹಿತ ಮಿಸೈಲ್ ಆಗಿದ್ದು, ಇದು ಆರು ಹರಿತವಾದ ಬ್ಲೇಡ್ ಹೊಂದಿದ್ದು, ನಿಗದಿತ ಗುರಿಯನ್ನು ತಲುಪಿ ಝವಾಹಿರಿಯನ್ನು ಹತ್ಯೆಗೈಯಲಾಗಿತ್ತು. ಇದು ಸ್ಫೋಟ ಮತ್ತು ಶಬ್ದ ರಹಿತ ದಾಳಿಯಾಗಿದೆ ಎಂದು ವರದಿ ವಿವರಿಸಿದೆ.

ಭಯೋತ್ಪಾದಕ ಸಂಘಟನೆಯ ಮುಖಂಡರನ್ನು ಹತ್ಯೆಗೈಯುವ ಸಂದರ್ಭದಲ್ಲಿ ಬಳಸುವ ಡೆಡ್ಲಿ ಶಸ್ತ್ರಾಸ್ತ್ರದ ಬಗ್ಗೆ ಅಮೆರಿಕವಾಗಲಿ ಅಥವಾ ಸಿಐಎ ಆಗಲಿ ಬಹಿರಂಗವಾಗಿ ಯಾವ ಹೇಳಿಕೆಯನ್ನೂ ನೀಡಿಲ್ಲ. 2017ರಲ್ಲಿ ಮೊದಲ ಬಾರಿಗೆ ಅಲ್ ಖೈದಾ ಹಿರಿಯ ಮುಖಂಡ ಅಬು ಅಲ್ ಖೈರ್ ಅಲ್ ಮಸ್ರಿಯನ್ನು ಹತ್ಯೆಗೈಯುವ ಸಂದರ್ಭದಲ್ಲಿ ಆರ್ 9x ಮಿಸೈಲ್ ಬಳಸಿತ್ತು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.