ನೇಪಾಲ ಪ್ರವಾಹ: 200 ಭಾರತೀಯರು ಅತಂತ್ರ
Team Udayavani, Aug 14, 2017, 6:35 AM IST
ಕಾಠ್ಮಂಡು/ಗುವಾಹಾಟಿ: ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ನೇಪಾಲದಲ್ಲಿ ಸುಮಾರು 700 ಮಂದಿ ಪ್ರವಾಸಿಗರು ಅತಂತ್ರರಾಗಿದ್ದು, ಈ ಪೈಕಿ 200ಕ್ಕೂ ಹೆಚ್ಚು ಭಾರತೀಯರು ಸೇರಿದ್ದಾರೆ.
ನೇಪಾಲದ ಪ್ರಸಿದ್ಧ ಪ್ರವಾಸಿ ತಾಣವಾದ ಚಿತ್ವಾನ್ನಲ್ಲಿ ಮಳೆಯ ಅಬ್ಬರ ಮುಂದು ವರಿದ ಕಾರಣ, ಪ್ರವಾಹ ಉಂಟಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಇಲ್ಲಿ ಮಳೆಯಿಂ ದಾಗಿ ಈಗಾಗಲೇ 55 ಮಂದಿ ಮೃತ ಪಟ್ಟಿ ದ್ದಾರೆ. 35 ಸಾವಿರಕ್ಕೂ ಹೆಚ್ಚು ಮನೆಗಳು ಮುಳುಗಡೆಯಾಗಿದ್ದು, ಸಾವಿ ರಕ್ಕೂ ಹೆಚ್ಚು ಮನೆಗಳು ಜಖಂಗೊಂಡಿವೆ. ಇಲ್ಲಿಗೆ ಪ್ರವಾಸಕ್ಕೆಂದು ಬಂದಿದ್ದ 600 ಮಂದಿಯಲ್ಲಿ 200ಕ್ಕೂ ಅಧಿಕ ಮಂದಿ ಭಾರತೀಯರಿದ್ದು, ಪ್ರವಾಹ ಪೀಡಿತ ಸ್ಥಳಗಳಲ್ಲಿ ಸಿಲುಕಿಕೊಂಡಿದ್ದಾರೆ. ಅವರ ರಕ್ಷಣೆಗೆ ಎಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಸ್ಸಾಂನಲ್ಲಿ ಮತ್ತೆ 10 ಸಾವು: ಇತ್ತ ಭಾರತದ ಈಶಾನ್ಯ ರಾಜ್ಯಗಳಲ್ಲೂ ವರುಣನ ಆರ್ಭಟ ತೀವ್ರಗೊಂಡಿದ್ದು, ಅಸ್ಸಾಂನಲ್ಲಿ ಮತ್ತೆ 10 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಪ್ರಸಕ್ತ ವರ್ಷ ಪ್ರವಾಹ ಸಂಬಂಧಿ ಘಟನೆಗಳಿಗೆ ಬಲಿಯಾದವರ ಸಂಖ್ಯೆ 99ಕ್ಕೇರಿದಂತಾಗಿದೆ. ಪ್ರಧಾನಿ ಮೋದಿ ಅವರು ಅಸ್ಸಾಂ ಸಿಎಂ ಸರ್ಬಾನಂದ ಅವರಿಗೆ ಕರೆ ಮಾಡಿ, ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ. ರಕ್ಷಣಾ ಕಾರ್ಯಾಚರಣೆಗಾಗಿ ಸೇನೆಯ ನೆರವನ್ನೂ ಪಡೆಯಲಾಗಿದೆ. ಸಿಎಂ ಸರ್ಬಾನಂದ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ, ಪರಿಸ್ಥಿತಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ