2024ಕ್ಕೆ ಭಾರತೀಯ ಮೂಲದವರ ಹಣಾಹಣಿ?;

ನಿಕ್ಕಿ ಹ್ಯಾಲೆ- ಕಮಲಾ ನಡುವೆ ಸ್ಪರ್ಧೆ ಸಾಧ್ಯತೆ; ಹೊಸ ಚರ್ಚೆಗೆ ನಾಂದಿ ಹಾಡಿದ ನಿಕ್ಕಿ ಹ್ಯಾಲೆ ಭಾಷಣ

Team Udayavani, Aug 27, 2020, 5:55 AM IST

2024ಕ್ಕೆ ಭಾರತೀಯ ಮೂಲದವರ ಹಣಾಹಣಿ?

ವಾಷಿಂಗ್ಟನ್‌: ಅಮೆರಿಕದಲ್ಲಿ 2024ರಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತದ ಮೂಲದ ಇಬ್ಬರು ನಾಯಕಿಯರ ನಡುವೆ ಸ್ಪರ್ಧೆ ನಡೆಯಲಿದೆಯೇ? ಅಕ್ಟೋಬರ್‌-ನವೆಂಬರ್‌ನಲ್ಲಿ ನಡೆಯಲಿರುವ ಚುನಾವಣೆ ಪ್ರಚಾರದ ಬಿರುಸಿನಲ್ಲಿಯೇ ಇಂಥ ಅಂಶ ಚರ್ಚೆಗೆ ಶ್ರೀಕಾರ ಹಾಕಿದೆ. ವಿಶ್ವಸಂಸ್ಥೆಯಲ್ಲಿ ಅಮೆರಿಕದ ಮಾಜಿ ರಾಯಭಾರಿ ನಿಕ್ಕಿ ಹ್ಯಾಲೆ ಮತ್ತು ಡೆಮಾಕ್ರಾಟಿಕ್‌ ಪಕ್ಷದ ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್‌ ನಡುವೆ ಅಧ್ಯಕ್ಷೀಯ ಸಮರ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಅದಕ್ಕೆ ವೇದಿಕೆಯಾಗಿರುವುದು ವಾಷಿಂಗ್ಟನ್‌ನಲ್ಲಿ ನಡೆಯುತ್ತಿರುವ ರಿಪಬ್ಲಿಕನ್‌ ಪಕ್ಷದ ಸಮಾವೇಶದಲ್ಲಿನ ಚರ್ಚೆ.

ಅಮೆರಿಕದ ಹಾಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ರನ್ನು ಸಮರ್ಥಿಸಿ ಅವರು ಮಾಡಿದ ಭಾಷಣ ದಿಂದಾಗಿ ಇನ್ನು ನಾಲ್ಕು ವರ್ಷ ಕಳೆದು ನಡೆಯಲಿರುವ ಚುನಾವಣೆಯಲ್ಲಿ ರಿಪಬ್ಲಿಕನ್‌ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿಯಾಗಿ ಸೌತ್‌ ಕ್ಯಾರೋಲಿನಾದ ಮಾಜಿ ಗವರ್ನರ್‌ ಕೂಡ ಆಗಿರುವ ನಿಕ್ಕಿ ಹ್ಯಾಲಿ ಹೊರಹೊಮ್ಮುವ ಸಾಧ್ಯತೆ ಇದೆ ಎಂದು ಅಮೆರಿಕದ ಚುನಾವಣಾ ವಿಶ್ಲೇಷಕರು ವಾದ ಮಂಡಿಸಲಾರಂಭಿಸಿದ್ದಾರೆ. “ಕಮಲಾ ಹ್ಯಾರಿಸ್‌ ಅವರಂತೆಯೇ ನಿಕ್ಕಿ ಹ್ಯಾಲೆ ಭಾರತೀಯ ಮೂಲದವರು. ಪ್ರತಿಸ್ಪರ್ಧಿ ಪಕ್ಷದ ಅಭ್ಯರ್ಥಿಯಂತೆಯೇ ಸಮರ್ಥ ಮತ್ತು ನಿಖರವಾಗಿ ತಮ್ಮ ಮಾತುಗಳನ್ನು ಮುಂದಿಡುತ್ತಿದ್ದಾರೆ. ಹೀಗಾಗಿ ಅವರು 2024 ಅಥವಾ 20208ರಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಸಂಭಾವ್ಯ ಅಭ್ಯರ್ಥಿಯಾಗುವ ಸಾಧ್ಯತೆ ಇದೆ’ ಎಂದು ಯು.ಸಿ. ರಿವರ್‌ಸೈಡ್‌ ಕಾಲೇಜಿನಲ್ಲಿ ರಾಜಕೀಯಶಾಸ್ತ್ರದ ಪ್ರಾಧ್ಯಾಪಕರಾಗಿ ರುವ ಕಾರ್ತಿಕ್‌ ರಾಮಕೃಷ್ಣನ್‌ ಹೇಳಿದ್ದಾರೆ.

ಇನ್ನು ಡೆಮಾಕ್ರಾಟಿಕ್‌ ಪಕ್ಷದ ಉಪಾಧ್ಯಕ್ಷ ಹುದ್ದೆಯ ಅಭ್ಯರ್ಥಿಯಾಗಿರುವ ಕಮಲಾ ಹ್ಯಾರಿಸ್‌ ಕೂಡ ಸರಕಾರದ ಮಟ್ಟದಲ್ಲಿ ಹಲವು ಉನ್ನತ ಹುದ್ದೆಗಳನ್ನು ನಿರ್ವಹಿಸಿದ ಅನುಭವ ಇದೆ.

ಟ್ರಂಪ್‌ ಬೆಂಬಲಕ್ಕೆ ಕುಟುಂಬ: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಬೆಂಬಲಕ್ಕೆ ಅವರ ಕುಟುಂಬ ವರ್ಗವೇ ನಿಂತಿದೆ. ವಾಷಿಂಗ್ಟನ್‌ನಲ್ಲಿ ಆಯೋಜಿ ಸಲಾಗಿದ್ದ ರಿಪಬ್ಲಿಕನ್‌ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಟ್ರಂಪ್‌ ಪುತ್ರ, ಎರಿಕ್‌ ಟ್ರಂಪ್‌, ಪುತ್ರಿ ಟಿಫಾನಿ ಟ್ರಂಪ್‌, ಪತ್ನಿ ಮೆಲಾನಿಯಾ ಟ್ರಂಪ್‌ ಅಮೆರಿಕದ ಭವಿಷ್ಯಕ್ಕಾಗಿ ಎರಡನೇ ಅವಧಿಗೆ ಟ್ರಂಪ್‌ ಅವರನ್ನೇ ಮತ್ತೂಮ್ಮೆ ಗೆಲ್ಲಿಸಬೇಕೆಂದು ಮನವಿ ಮಾಡಿದರು. “ಪತಿಯಾಗಿ ಡೊನಾಲ್ಡ್‌ ಟ್ರಂಪ್‌ ಎಲ್ಲಾ ರೀತಿಯಲ್ಲಿ ಬೆಂಬಲ ನೀಡುತ್ತಿದ್ದಾರೆ. ಮಹಿಳಾ ನಾಯಕಿರನ್ನು ಆಡಳಿತದ ಪ್ರಮುಖ ಹುದ್ದೆಗಳಿಗೆ ನೇಮಕ ಮಾಡುವ ಮೂಲಕ ಸದೃಢ ಆಡಳಿತ ನೀಡಿದ್ದಾರೆ. ವಿಶೇಷ ವಾಗಿ ಚಿಂತನೆ ಇರುವವರಿಗೆ ಆದ್ಯತೆ ನೀಡಿದ್ದಾರೆ’ ಎಂದು ಟ್ರಂಪ್‌ ಪತ್ನಿ ಮೆಲಾನಿಯಾ ಟ್ರಂಪ್‌ ಹೇಳಿದರು. ಕೋವಿಡ್ ವಿರುದ್ಧ ಹೋರಾಡುವ ವರಿಗೆ ಟ್ರಂಪ್‌ ಬೆಂಬಲವಿದೆ ಎಂದರು ಮೆಲಾನಿಯಾ.

ಕೆನೋಶಾ ಗಲಭೆಗೆ ಇಬ್ಬರು ಸಾವು
ಕೆನೋಶಾ: ಅಮೆರಿಕ ಕೆನೋಶಾದಲ್ಲಿ ಕಪ್ಪು ವರ್ಣೀಯ ವ್ಯಕ್ತಿ ವಿರುದ್ಧ ಗುಂಡು ಹಾರಿಸಿದ ಪ್ರಕರಣ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಇಬ್ಬರು ಅಸುನೀಗಿದ್ದಾರೆ. ಒಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ. ಕಳೆದ ಭಾನುವಾರ ಕಪ್ಪು ವರ್ಣೀಯ ವ್ಯಕ್ತಿಗೆ ಗುಂಡು ಹಾರಿಸಿದ್ದನ್ನು ಖಂಡಿಸಿ ಕೆನೋಶಾದಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಪೊಲೀಸರು ಶಾಂತರಾಗಿ ಇರುವಂತೆ ಸೂಚಿಸಿದರೂ ಪ್ರಯೋಜನವಾಗಲಿಲ್ಲ. ಕೆನೋಶಾ ಪೊಲೀಸ್‌ ಮುಖ್ಯಸ್ಥ ಲೆ.ಜೋಸೆಫ್ ನೊಸಾಲಿಕ್‌ ಮಾಹಿತಿ ನೀಡಿ ಗಾಯಗೊಂಡ ವ್ಯಕ್ತಿಯ ಸ್ಥಿತಿ ಗಂಭೀರ ವಾಗಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಗುಂಡು ಹಾರಾಟ ನಡೆಸಿದ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಅಸುನೀಗಿದವರ ಗುರುತನ್ನೂ ಪೊಲೀಸರು ಬಹಿರಂಗಪಡಿಸಿಲ್ಲ.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.