26/11ರ ಆರೋಪಿ ತಹಾವ್ವುರ್ ರಾಣಾ ಹಸ್ತಾಂತರದ ಬಗ್ಗೆ ಅಮೆರಿಕ ಕೋರ್ಟ್ ಮೌನ
Team Udayavani, Aug 27, 2022, 7:55 AM IST
ವಾಷಿಂಗ್ಟನ್: ಮುಂಬೈನಲ್ಲಿ 2008ರಲ್ಲಿ ನಡೆದಿದ್ದ ಭೀಕರ ಉಗ್ರ ದಾಳಿಗೆ ಕಾರಣನಾಗಿರುವ ಪಾಕಿಸ್ತಾನ ಮೂಲದ ಕೆನಡಾ ನಾಗರಿಕ, ಉಗ್ರ ತಹಾವ್ವುರ್ ರಾಣಾನನ್ನು ಭಾರತಕ್ಕೆ ಗಡೀಪಾರು ಮಾಡುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ.
ಅಮೆರಿಕದ ಕ್ಯಾಲಿಫೋರ್ನಿಯಾದ ನ್ಯಾಯಾಲಯದ ನ್ಯಾಯಾಧೀಶೆ ಜಾಕ್ವೆಲಿನ್ ಚೂಲಿಜಿನ್ 2021ರ ಜೂನ್ನಲ್ಲಿ ಕೊನೇಯ ವಿಚಾರಣೆ ನಡೆಸಿದ್ದರು. ಅದೇ ಸಂದರ್ಭದಲ್ಲಿ ಗಡಿಪಾರು ಮಾಡುವ ನಿಟ್ಟಿನಲ್ಲಿ ಬೇಕಾಗಿರುವ ದಾಖಲೆಗಳನ್ನೂ ಸಲ್ಲಿಸಲಾಗಿತ್ತು.
ಆ ಪ್ರಕ್ರಿಯೆ ಪೂರ್ತಿಗೊಂಡು ಒಂದು ವರ್ಷ ಕಳೆದರೂ ನ್ಯಾಯಾಲಯದಿಂದ ಇನ್ನೂ ಅಂತಿಮ ತೀರ್ಪು ಪ್ರಕಟವಾಗಿಲ್ಲ. ವಾದ ಮಂಡನೆ ವೇಳೆ ಅಮೆರಿಕ ಸರ್ಕಾರದ ಪರ ವಕೀಲರೂ ಕೂಡ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಬೇಕು ಮತ್ತು ಆತ ಎಸಗಿರುವ ಅಪರಾಧಕ್ಕೆ ಸೂಕ್ತ ಸಾಕ್ಷ್ಯಾಧಾರಗಳೂ ಇವೆ ಎಂದು ವಾದಿಸಿದ್ದರು.
ಆದರೆ ತಹಾವ್ವುರ್ ಪರ ವಕೀಲರು ಅದನ್ನು ವಿರೋಧಿಸಿದ್ದರು.ತಹಾವ್ವುರ್ ರಾಣಾನನ್ನು ಭಾರತದಲ್ಲಿ ಘೋಷಿತ ಅಪರಾಧಿ ಎಂದು ಈಗಾಗಲೇ ಪ್ರಕಟಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು