ಆಸ್ಟ್ರೇಲಿಯಾ; ನೀರು ಉಳಿಸಲು 5 ದಿನಗಳ ಕಾರ್ಯಾಚರಣೆಯಲ್ಲಿ 5 ಸಾವಿರ ಒಂಟೆಗಳ ಹತ್ಯೆ
ಮೂಲನಿವಾಸಿಗಳು ವಾಸಿಸುವ ಎಪಿವೈ ಲ್ಯಾಂಡ್ಸ್ ನಲ್ಲಿ ಜನರು ಒಂಟೆಗಳ ಹಾವಳಿಯಿಂದ ತತ್ತರಿಸಿ ಹೋಗಿದ್ದಾರೆ.
Team Udayavani, Jan 14, 2020, 6:33 PM IST
ಕ್ಯಾನ್ ಬೆರ್ರಾ: ಬಿರುಬೇಸಿಗೆಗೆ ಆವರಿಸಿರುವ ಆಸ್ಟ್ರೇಲಿಯಾದಲ್ಲಿ ನೀರಿನ ಅಭಾವ ಮತ್ತು ಕಾಳ್ಗಿಚ್ಚು ನಂದಿಸಲು ಬೇಕಾದ ನೀರನ್ನು ಉಳಿಸುವ ನಿಟ್ಟಿನಲ್ಲಿ ಆಸ್ಟ್ರೇಲಿಯಾ ಸರ್ಕಾರ ಕೈಗೊಂಡಿದ್ದ ಐದು ದಿನಗಳ ಹೆಲಿಕಾಪ್ಟರ್ ಕಾರ್ಯಾಚರಣೆಯಲ್ಲಿ ಐದು ಸಾವಿರ ಒಂಟೆಗಳನ್ನು ಕೊಲ್ಲಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ದಕ್ಷಿಣ ಆಸ್ಟ್ರೇಲಿಯಾದ ಬುಡಕಟ್ಟು ಮುಖಂಡರ ಹೇಳಿಕೆ ಪ್ರಕಾರ, ಬರಗಾಲ ಮತ್ತು ಅತೀಯಾದ ಬೇಸಿಗೆಯಿಂದಾಗಿ ಸಾವಿರಾರು ಒಂಟೆಗಳು ಗ್ರಾಮೀಣ ಜನವಸತಿಯತ್ತ ಆಗಮಿಸಿ ನೀರು ಮತ್ತು ಆಹಾರಕ್ಕಾಗಿ ಹುಡುಕಾಡುತ್ತಿದ್ದು, ಇದರಿಂದಾಗಿ ಮೂಲಭೂತ ಸೌಕರ್ಯಗಳೆಲ್ಲಾ ಹಾಳಾಗಿ ಹೋಗಿದೆ ಎಂದು ದೂರಿದ್ದಾರೆ.
ಮೂಲನಿವಾಸಿಗಳು ವಾಸಿಸುವ ಎಪಿವೈ ಲ್ಯಾಂಡ್ಸ್ ನಲ್ಲಿ ಜನರು ಒಂಟೆಗಳ ಹಾವಳಿಯಿಂದ ತತ್ತರಿಸಿ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಐದು ದಿನಗಳ ಹೆಲಿಕಾಪ್ಟರ್ ಕಾರ್ಯಾಚರಣೆಯಲ್ಲಿ ಹತ್ತು ಸಾವಿರ ಒಂಟೆಗಳ ಹತ್ಯೆಗೆ ಸರ್ಕಾರ ಮುಂದಾಗಿರುವುದಾಗಿ ಈ ಮೊದಲು ವರದಿ ತಿಳಿಸಿತ್ತು.
ಮೂಲನಿವಾಸಿಗಳು ವಾಸಿಸುವ ಸ್ಥಳದಲ್ಲಿನ ನೀರನ್ನು ಉಳಿಸಬೇಕಾದ ಅಗತ್ಯ ಹೆಚ್ಚಿತ್ತು. ಮಕ್ಕಳು, ಪುರುಷರು, ಹೆಂಗಸರು ಸೇರಿದಂತೆ ಎಲ್ಲರೂ ಬದುಕಬೇಕಾಗಿದೆ. ಅದಕ್ಕೆ ನೀರು, ಬೆಳೆಗಳ ರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಒಂಟೆಗಳ ಹತ್ಯೆಗೆ ಮುಂದಾಗಿರುವುದಾಗಿ ಎಪಿವೈ ಜನರಲ್ ಮ್ಯಾನೇರ್ ರಿಚರ್ಡ್ ಕಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ