ಕತಾರ್‌: 600 ಮಂದಿ ಭಾರತೀಯರಿಗೆ ಸಂಕಷ್ಟ 


Team Udayavani, Jul 24, 2018, 6:00 AM IST

33.jpg

ನವದೆಹಲಿ: ಮುಂದಿನ ಫ‌ುಟ್ಬಾಲ್‌ ವಿಶ್ವಕಪ್‌ನ ಆತಿಥೇಯ ರಾಷ್ಟ್ರವಾದ ಕತಾರ್‌ನಲ್ಲಿ ಕ್ರೀಡಾಂಗಣ ಮತ್ತು ಇತರ ಮೂಲ ಸೌಕರ್ಯಗಳ ಕೆಲಸಕ್ಕಾಗಿ ತೆರಳಿದ್ದ 600 ಮಂದಿ ಭಾರತೀಯರು ಈಗ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಈ ಪೈಕಿ ಕೇರಳ ಮೂಲದವರೂ ಇದ್ದು, ತಮ್ಮ ದಯನೀಯ
ಪರಿಸ್ಥಿತಿ ಬಗ್ಗೆ ಹೇಳಿಕೊಂಡಿದ್ದಾರೆ.

ಮೂಲಸೌಕರ್ಯ ಅಭಿವೃದ್ಧಿಗಾಗಿ ತೆರಳಿರುವ ಭಾರತೀಯ ಕಾರ್ಮಿಕರೇ ಮೂಲಸೌಕರ್ಯಗಳ ಕೊರತೆಯಿಂದ ಬಳಲುವಂತಾಗಿದೆ. ಆರು ತಿಂಗಳಿಂದ ಅವರಿಗೆ ವೇತನ ಪಾವತಿ ಆಗಿಲ್ಲ. ಸೂಕ್ತ ಆಹಾರವೂ ಸಿಗುತ್ತಿಲ್ಲ. ಹೀಗಾಗಿ, ದಾನಿಗಳು ನೀಡುವ ಆಹಾರಕ್ಕಾಗಿ ಕೈಚಾಚುವಂತಾಗಿದೆ. ಜತೆಗೆ ಕೆಲವರಿಗೆ ಉದ್ಯೋಗವೂ ನಷ್ಟವಾಗಿದ್ದು, ನೀಡಲಾಗಿದ್ದ ವೀಸಾ ಅವಧಿ ಕೂಡ ಮುಕ್ತಾಯವಾಗಿದೆ. ಎಚ್‌ಕೆಎಚ್‌ ಜನರಲ್‌ ಕಾಂಟ್ರಾಕ್ಟಿಂಗ್‌ ಕಂಪನಿ ಎಂಬ ಕತಾರ್‌ನ ಸಂಸ್ಥೆ 1,200 ಮಂದಿಯನ್ನು ಉದ್ಯೋಗಕ್ಕಾಗಿ ನಿಯೋಜಿಸಿತ್ತು. ಯುಎಇನಲ್ಲಿ ಕಳೆದ ವರ್ಷದಿಂದ ಕಂಡು ಬರುತ್ತಿರುವ ಹಣಕಾಸಿನ
ಬಿಕ್ಕಟ್ಟಿನಿಂದಾಗಿ ಉದ್ಯೋಗ ನಷ್ಟವಾಗಿದೆ.

6 ತಿಂಗಳಿಂದ ವೇತನವಿಲ್ಲ: ತಮ್ಮ ನೋವು ತೋಡಿಕೊಂಡಿರುವ ಕೇರಳದ ಎಸ್‌. ಕುಮಾರ್‌, “ನಮಗೆ ಸಹಾಯ ಮಾಡುತ್ತಿರುವವರ ಕರುಣೆಯಿಂ
ದ ಇದ್ದೇವೆ. ಅವರು ನಮಗೆ ಆಹಾರ ನೀಡುತ್ತಿದ್ದಾರೆ. ಹಗಲಿನ ವೇಳೆ ನಾವು ಇರುವ ಸ್ಥಳಕ್ಕೆ ವಿದ್ಯುತ್‌ ಪೂರೈಕೆ ಇಲ್ಲ. ರಾತ್ರಿ ವೇಳೆ ಹೇಗೋ ಜನರೇಟರ್‌ ವ್ಯವಸ್ಥೆ ಸಿಗುತ್ತದೆ. ನಾನು ಎಂಟು ವರ್ಷಗಳ ಹಿಂದೆಯೇ ಕತಾರ್‌ಗೆ ಉದ್ಯೋಗಕ್ಕಾಗಿ ಬಂದಿದ್ದು, ಕಳೆದ 6 ತಿಂಗಳಿಂದ ವೇತನವೂ
ಸಿಗುತ್ತಿಲ್ಲ’ ಎಂದಿದ್ದಾರೆ.

ಇದೇ ವೇಳೆ, 9 ವರ್ಷಗಳ ಕಾಲ ಇದೇ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ಲಂಬರ್‌ವೊಬ್ಬರು, “ನನಗೆ ತೀವ್ರ ಅನಾರೋಗ್ಯ  ಉಂಟಾಗಿದ್ದಾಗಲೂ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಲು ಸಾಧ್ಯವಾಗಲಿಲ್ಲ. ಏಕೆಂದರೆ, ನನ್ನ ವೀಸಾ ಅವಧಿ ಮುಗಿದಿದೆ. ಹೊರಗೆ ಹೋದರೆ ಬಂಧನಕ್ಕೀಡಾಗುವ ಭೀತಿಯಿಂದ ಎಲ್ಲಿಗೂ ಹೋಗುತ್ತಿಲ್ಲ’ ಎಂದಿದ್ದಾರೆ.

ಪತ್ರ ಬರೆದರೂ ಸಿಗದ ಸ್ಪಂದನೆ 
ಸಮಸ್ಯೆ ಬಗ್ಗೆ ಏ.10ರಂದು 25 ಮಂದಿ ಭಾರತೀಯರು ಕತಾರ್‌ನಲ್ಲಿರುವ ರಾಯಭಾರ ಕಚೇರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ರಾಯಭಾರ ಕಚೇರಿ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ ಎಂದು ಕಾರ್ಮಿಕರು ಹೇಳಿಕೊಂಡಿದ್ದಾರೆ. ಇದೇ ವೇಳೆ, 600
ಮಂದಿಯ ಪೈಕಿ 300 ಮಂದಿಗೆ ಇತರ ಕಂಪನಿಗಳಲ್ಲಿ ಉದ್ಯೋಗ ನೀಡಲಾಗಿದೆ ಮತ್ತು ಇತರರನ್ನು ಸ್ವದೇಶಕ್ಕೆ ಕರೆಸಿಕೊಳ್ಳಲಾಗುತ್ತಿದೆ ಎಂದು ವಿದೇಶಾಂಗ ಇಲಾಖೆಯ ಹಿರಿಯ ಅಧಿಕಾರಿ ಹೇಳಿರುವುದಾಗಿ “ಹಿಂದುಸ್ತಾನ್‌ ಟೈಮ್ಸ್‌’ ವರದಿ ಮಾಡಿದೆ.

ಆರು ತಿಂಗಳಿಂದ ವೇತನವಿಲ್ಲ
ರಾಯಭಾರ ಕಚೇರಿ ಸಿಬ್ಬಂದಿ ಕಂಪನಿ ಜತೆಗೆ ಸಂಪರ್ಕಿಸಿದರೂ ಸ್ಪಂದನೆ ಇಲ್ಲ
ಕೆಲವರಿಗೆ ಬೇರೆಡೆ ಸಿಕ್ಕಿದೆ ಉದ್ಯೋಗ, ಇನ್ನಿತರರು ಸ್ವದೇಶಕ್ಕೆ ಬರುವ ಹಾದಿಯಲ್ಲಿ

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.