ಭಾರತದ ಏಳು ಮಂದಿ ಇಂಜಿನಿಯರ್‌ಗಳ ಒತ್ತೆ


Team Udayavani, May 7, 2018, 8:25 AM IST

Kidnap-6-5.jpg

ಕಾಬೂಲ್‌: ಅಫ್ಘಾನಿಸ್ಥಾನದ ಬಾಘÉನ್‌ ಪ್ರಾಂತ್ಯದಲ್ಲಿರುವ ವಿದ್ಯುತ್‌ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಏಳು ಭಾರತೀಯರು ಮತ್ತು ಒಬ್ಬ ಆಫ್ಗನ್‌ ನಾಗರಿಕನನ್ನು ಭಾನುವಾರ ಶಸ್ತ್ರ ಸಜ್ಜಿತ ಬಂಡುಕೋರರು ಅಪಹರಿಸಿದ್ದಾರೆ. ಈ ಸಂಬಂಧ ಭಾರತೀಯ ವಿದೇಶಾಂಗ ಸಚಿವಾಲಯವು ಅಫ್ಘಾನಿಸ್ಥಾನ ಸರಕಾರದೊಂದಿಗೆ ಸಂಪರ್ಕದಲ್ಲಿದೆ.

ಅಪಹೃತ ಭಾರತೀಯರು ಇಲ್ಲಿನ ವಿದ್ಯುತ್‌ ಘಟಕದಲ್ಲಿ ಇಂಜಿನಿಯರುಗಳಾಗಿ ಕೆಲಸ ಮಾಡುತ್ತಿದ್ದರು. ಈವರೆಗೆ ಯಾವುದೇ ಉಗ್ರ ಸಂಘಟನೆ ಈ ಕೃತ್ಯದ ಹೊಣೆ ಹೊತ್ತುಕೊಂಡಿಲ್ಲ. ಆದರೆ ಇದರ ಹಿಂದೆ ತಾಲಿಬಾನ್‌ ಕೈವಾಡವಿರುವ ಶಂಕೆಯಿದೆ. ಅಪಹೃತರ ಶೋಧ ಕಾರ್ಯ ನಡೆದಿದೆ. ಮೂಲಗಳ ಪ್ರಕಾರ ಅಪಹೃತರನ್ನು ಹತ್ಯೆಗೈದಿಲ್ಲ ಎಂದು ಬಾಘÉನ್‌ ಪೊಲೀಸ್‌ ಇಲಾಖೆಯ ವಕ್ತಾರ ಜಬಿ ಉಲ್ಲಾ ಶುಜಾ ಹೇಳಿದ್ದಾರೆ. ಇದೇ ವೇಳೆ, ಸರ್ಕಾರಿ ಉದ್ಯೋಗಿಗಳು ಎಂದು ತಪ್ಪಾಗಿ ಭಾವಿಸಿ ಅಪಹರಿಸಲಾಗಿದೆ ಎಂದು ಉಗ್ರರು ಸ್ಥಳೀಯರಲ್ಲಿ ಹೇಳಿಕೊಂಡಿರುವುದಾಗಿ ಆಫ್ಗನ್‌ ಮಾಧ್ಯಮಗಳು ವರದಿ ಮಾಡಿವೆ.

ಭಾರತೀಯರು ಕೆಇಸಿ ಇಂಟರ್‌ನ್ಯಾಷನಲ್‌ ಲಿಮಿಟೆಡ್‌ ಎಂಬ ಕಂಪೆನಿಯ ಉದ್ಯೋಗಿಗಳಾಗಿದ್ದು, ಪುಲ್‌ ಎ ಖೊಮ್ರೆ ಎಂಬ ಪ್ರದೇಶದಲ್ಲಿ ಕಂಪೆನಿಯ ಉಪಘಟಕವಿದ್ದುದರಿಂದ, ಅಲ್ಲಿಗೆ ತೆರಳುತ್ತಿರುವಾಗ ಅಪಹರಣ ಮಾಡಲಾಗಿದೆ. ಅಫ್ಘಾನಿಸ್ತಾನದ ವಿದ್ಯುತ್‌ ವಿತರಣೆ ಕಂಪೆನಿ ಡಾ ಅಫ್ಘಾನಿಸ್ಥಾನ್‌ ಬ್ರೆಶಾ ಶೆರ್ಕತ್‌ ಈ ಕೆಇಸಿ ಕಂಪೆನಿಯೊಂದಿಗೆ ವಿದ್ಯುತ್‌ ಉತ್ಪಾದನೆ ಸಹಕಾರ ಒಪ್ಪಂದ ಹೊಂದಿದೆ. ಈ ಕೆಇಸಿ ಭಾರತ ಮೂಲದ ಕಂಪೆನಿಯಾಗಿದ್ದು, ಇದರ ನಿರ್ದೇಶಕ ಹರ್ಷ್‌ ಗೋಯೆಂಕಾ ಅವರು ನೌಕರರನ್ನು ರಕ್ಷಿಸುವಂತೆ ಸರಕಾರವನ್ನು ವಿನಂತಿಸಿಕೊಂಡಿದ್ದಾರೆ. ಅಪಹೃತರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

2016ರಲ್ಲಿ 40 ಭಾರತೀಯರನ್ನು ಕಾಬೂಲ್‌ನಲ್ಲಿ ಅಪಹರಿಸಲಾಗಿತ್ತು. 40 ದಿನಗಳ ನಂತರ ಭಾರತದ ಸರಕಾರದ ಮಧ್ಯಸ್ಥಿಕೆಯಿಂದಾಗಿ ಇವರನ್ನು ಬಿಡುಗಡೆ ಮಾಡಲಾಗಿತ್ತು. ಬಡತನ ಹಾಗೂ ನಿರುದ್ಯೋಗದಿಂದಾಗಿ ಸ್ಥಳೀಯರನ್ನು ಅಪಹರಿಸುವುದು ಮತ್ತು ದರೋಡೆ ನಡೆಸುವುದು ಅತ್ಯಂತ ಸಾಮಾನ್ಯ ಕೃತ್ಯವಾಗಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.