ರೆಸಾರ್ಟ್ ನೊಳಗೆ Gas ಲೀಕ್; ನೇಪಾಳಕ್ಕೆ ಪ್ರವಾಸಕ್ಕೆ ತೆರಳಿದ್ದ 8ಮಂದಿ ಭಾರತೀಯರು ಶವವಾದರು!

ವಿಪರೀತ ಚಳಿಯ ಹಿನ್ನೆಲೆಯಲ್ಲಿ ಬೆಚ್ಚಗಾಗಿಡಲು ಗ್ಯಾಸ್ ಹೀಟರ್ ಅನ್ನು ಆನ್ ಮಾಡಿ ಇಟ್ಟಿರುವುದಾಗಿ ತಿಳಿಸಿದ್ದಾರೆ.

Team Udayavani, Jan 21, 2020, 5:23 PM IST

Nepal-Resort

ಕಾಠ್ಮಂಡು: ರೆಸಾರ್ಟ್ ವೊಂದರ ಕೋಣೆಯೊಳಗೆ ಗ್ಯಾಸ್ ಲೀಕ್ ಆಗಿ ನಾಲ್ವರು ಮಕ್ಕಳು ಸೇರಿದಂತೆ ಎಂಟು ಮಂದಿ ಭಾರತೀಯ ಪ್ರವಾಸಿಗರು ಸಾವನ್ನಪ್ಪಿರುವ ಘಟನೆ ನೇಪಾಳದಲ್ಲಿ ಸಂಭವಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ರೆಸಾರ್ಟ್ ಕೋಣೆಯಲ್ಲಿ ಪ್ರಜ್ಞಾ ಹೀನರಾಗಿ ಬಿದ್ದಿದ್ದ ಎಂಟು ಮಂದಿಯನ್ನು ಏರ್ ಲಿಫ್ಟ್ ಮೂಲಕ ಎಚ್ ಎಎಮ್ ಎಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರೆಲ್ಲಾ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಸುಶೀಲ್ ಸಿಂಗ್ ತಿಳಿಸಿದ್ದಾರೆ.

ಸಾವನ್ನಪ್ಪಿದ ಪ್ರವಾಸಿಗರನ್ನು ಪ್ರವೀಣ್ ಕುಮಾರ್ ನಾಯರ್ (39ವರ್ಷ), ಶರಣ್ಯಾ (34), ರಂಜಿತ್ ಕುಮಾರ್ ಟಿಬಿ (39), ಇಂದು ರಂಜಿತ್ (34), ಶ್ರೀ ಭದ್ರಾ (9ವರ್ಷ), ಅಭಿನವ್ ಸೂರ್ಯ(9), ಅಭಿ ನಾಯರ್ (7) ಮತ್ತು ವೈಷ್ಣವ್ ರಂಜಿತ್ (2) ಎಂದು ಗುರುತಿಸಲಾಗಿದೆ ಎಂದು ಕಾಠ್ಮಂಡು ಪೋಸ್ಟ್ ವರದಿ ಮಾಡಿದೆ.

15 ಜನರ ತಂಡ ಕೇರಳದಿಂದ ಪೋಖ್ರಾಗೆ ಪ್ರವಾಸ ತೆರಳಿತ್ತು. ನೇಪಾಳದಲ್ಲಿ ಪ್ರವಾಸ ಕೈಗೊಂಡ ನಂತರ ಊರಿಗೆ ವಾಪಸ್ ಆಗುವ ಮುನ್ನ ಸೋಮವಾರ ರಾತ್ರಿ ಮಕ್ವಾನ್ ಪುರ್ ಜಿಲ್ಲೆಯ ದಮನ್ ನಲ್ಲಿರುವ ಎವರೆಸ್ಟ್ ಪನೋರಮಾ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದರು ಎಂದು ಹಿಮಾಲಯನ್ ಟೈಮ್ಸ್ ವರದಿ ಮಾಡಿದೆ.

ರೆಸಾರ್ಟ್ ಮ್ಯಾನೇಜರ್ ಹೇಳಿಕೆ ಪ್ರಕಾರ, ಅಥಿತಿಗಳು ರೂಂನಲ್ಲಿದ್ದು, ವಿಪರೀತ ಚಳಿಯ ಹಿನ್ನೆಲೆಯಲ್ಲಿ ಬೆಚ್ಚಗಾಗಿಡಲು ಗ್ಯಾಸ್ ಹೀಟರ್ ಅನ್ನು ಆನ್ ಮಾಡಿ ಇಟ್ಟಿರುವುದಾಗಿ ತಿಳಿಸಿದ್ದಾರೆ. ಇವರೆಲ್ಲಾ ಒಟ್ಟು ನಾಲ್ಕು ರೂಂಗಳನ್ನು ಬುಕ್ ಮಾಡಿದ್ದರು. ಎಂಟು ಮಂದಿ ಒಂದು ಕೋಣೆಯಲ್ಲಿ ವಾಸ್ತವ್ಯ ಹೂಡಿದ್ದರು. ಉಳಿದವರು ಬೇರೆ ರೂಂಗಳಲ್ಲಿ ಮಲಗಿದ್ದರು ಎಂದು ವಿವರಿಸಿದ್ದಾರೆ.

ಎಲ್ಲರೂ ಕೋಣೆಯ ಕಿಟಕಿ, ಬಾಗಿಲುಗಳಿಗೆ ಒಳಗಿನಿಂದ ಬೋಲ್ಟ್ ಹಾಕಿಕೊಂಡಿದ್ದರು. ಬಿಸಿ ಗಾಳಿಗೆ ಉಸಿರುಗಟ್ಟಿ ಎಂಟು ಮಂದಿ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿರುವುದಾಗಿ ವರದಿ ತಿಳಿಸಿದೆ.

ಮೃತಪಟ್ಟವರೆಲ್ಲಾ ಕೇರಳ ಮೂಲದವರು ಎಂದು ವರದಿ ತಿಳಿಸಿದೆ. ನೇಪಾಳ ರೆಸಾರ್ಟ್ ನಲ್ಲಿ ಸಾವನ್ನಪ್ಪಿರುವ ಎಂಟು ಮಂದಿ ಕೇರಳ ಪ್ರವಾಸಿಗರ ಮೃತದೇಹವನ್ನು ರಾಜ್ಯಕ್ಕೆ ತರಲು ಎಲ್ಲಾ ರೀತಿಯ ನೆರವು ನೀಡುವುದಾಗಿ ಕೇರಳ ಸರ್ಕಾರ ತಿಳಿಸಿದೆ ಎಂದು ವರದಿ ಹೇಳಿದೆ.

ಘಟನೆ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರ ಸಂತಾಪ ವ್ಯಕ್ತಪಡಿಸಿರುವುದಾಗಿ ಪ್ರಕಟಣೆ ತಿಳಿಸಿದೆ. ಆದಷ್ಟು ಶೀಘ್ರದಲ್ಲಿಯೇ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಕಾಠ್ಮಂಡುವಿನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದು ರಾಜ್ಯ ವ್ಯವಹಾರಗಳ ಸಚಿವ ವಿ ಮುರಳೀಧರನ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.